ಉಡುಪಿಯಲ್ಲಿ ಅಮಾನವೀಯ ಕೃತ್ಯ: ಹುಡುಗಿಯ ಜೊತೆ ಆಟವಾಡಿದ್ದಕ್ಕೆ ನಾಯಿಯನ್ನೇ ಕೊಂದ ಕಾಲೇಜು ವಾರ್ಡನ್​!

ಡುಪಿ: ಹುಡುಗಿಯ ಜೊತೆ ಆಟವಾಡಿದ್ದಕ್ಕೆ ಕಾಲೇಜು ವಾರ್ಡನ್​ ನಾಯಿಯನ್ನೇ ಕೊಂದಿರುವ ಅಮಾನವೀಯ ಘಟನೆ ಕಾಪು ತಾಲೂಕಿನ ಬಂಟಕಲ್​ನ ಮಧ್ವ ವಾದಿರಾಜ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆಂಡ್ ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ನಡೆದಿದೆ.

ರಾಜೇಶ್ ವಿಕೃತಿ ಮೆರೆದ ವಾರ್ಡನ್.

ಹುಡುಗಿ ಜೊತೆ ಆಡಿದ್ದಕ್ಕೆ ನಾಯಿಯನ್ನೇ ಕೊಂದಿದ್ದಾನೆ. ಕೃತ್ಯದ ವಿಡಿಯೋ ಮೊಬೈಲ್​ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಪಾಪಿ ವಾರ್ಡನ್ ಕೃತ್ಯಕ್ಕೆ ಜಾಲತಾಣದಲ್ಲಿ ನೆಟ್ಟಿಗರು ಭಾರಿ ಆಕ್ರೋಶ ಹೊರಹಾಕಿದ್ದಾರೆ.

ವಿಡಿಯೋ ವೈರಲ್ ಆಗುತ್ತಿದ್ದಂತೆ ವಾರ್ಡನ್ ಮೇಲೆ ಪ್ರಕರಣ ದಾಖಲಿಸಲಾಗಿದೆ. ಮಂಜುಳಾ ಕರ್ಕೇರ ಎಂಬುವರು ಶಿರ್ವ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Check Also

ಶಿರೂರು ಗುಡ್ಡ ಕುಸಿತ: ಶೋಧ ಕಾರ್ಯ ಕ್ಕೆ ಈಶ್ವರ್ ಮಲ್ಪೆ ತಂಡ ಭೇಟಿ

ಶಿರೂರು: ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ನಾಪತ್ತೆಯಾದ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದ್ದು ನೀರಿನಲ್ಲಿನಲ್ಲಿ ಮುಳುಗಿರುವ ಟ್ರಕ್ ಅನ್ನು ನೀರಿನಿಂದ …

Leave a Reply

Your email address will not be published. Required fields are marked *

You cannot copy content of this page.