

ಪುತ್ತೂರು: ಕೆಎಸ್ಆರ್ಟಿಸಿ ಬಸ್ಗೆ ಬುಲೆಟ್ ಬೈಕ್ ಡಿಕ್ಕಿಯಾಗಿ ಸವಾರ ಮೃತಪಟ್ಟ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಾವು ಸಮೀಪ ನಡೆದಿದೆ.
ಕೇರಳ ರಿಜಿಸ್ಟ್ರೇಷನ್ ಹೊಂದಿರುವ ಬೈಕ್ ಇದಾಗಿದ್ದು, ಮೃತ ಸವಾರನ ಕುರಿತು ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.