May 20, 2025
WhatsApp Image 2023-07-30 at 4.45.26 PM

ಮಂಗಳೂರು: ನಗರದ ಕುಂಟಿಕಾನ ಬಳಿ ಸಾರ್ವಜನಿಕರೊಂದಿಗೆ ಅಸಭ್ಯ ರೀತಿಯಲ್ಲಿ ವರ್ತಿಸುತ್ತಿದ್ದ ಹತ್ತಕ್ಕೂ ಅಧಿಕ ಮಂಗಳಮುಖಿಯರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಶನಿವಾರ ತಡರಾತ್ರಿ ವೇಳೆ ಕುಂಟಿಕಾನದ ಖಾಸಗಿ ಆಸ್ಪತ್ರೆಯ ಬಳಿ ನಿಂತಿದ್ದ ಇವರು ಸಾರ್ವಜನಿಕರೊಂದಿಗೆ ಅಸಭ್ಯ ರೀತಿಯಲ್ಲಿ ವರ್ತಿಸುತ್ತಿದ್ದರು. ಇದರಿಂದ ದಾರಿಯಲ್ಲಿ ಹೋಗುವವರು ಕಿರಿಕಿರಿ ಅನುಭವಿಸಿದ್ದರು. ಆದ್ದರಿಂದ ಸ್ಥಳದಲ್ಲಿ ಜನ ಜಮಾಯಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆದ್ದರಿಂದ ಸ್ಥಳಕ್ಕೆ ಉರ್ವ ಠಾಣಾ ಪೊಲೀಸರು ಆಗಮಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಲು ಯತ್ನಿಸಿದ್ದಾರೆ. ಆದರೆ ಸ್ಥಳಕ್ಕೆ ಆಗಮಿಸಿದ ಉರ್ವ ಠಾಣಾ ಇನ್ಸ್ ಪೆಕ್ಟರ್ ರೊಂದಿಗೆ ಮಂಗಳಮುಖಿಯರು ವಾಗ್ವಾದಕ್ಕಿಳಿದಿದ್ದಾರೆ. ಆದ್ದರಿಂದ ಪೊಲೀಸರು ಹತ್ತಕ್ಕೂ ಹೆಚ್ಚು ಮಂಗಳಮುಖಿಯರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದೀಗ ಸಾರ್ವಜನಿಕ ಶಾಂತಿ ಭಂಗದ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

About The Author

Leave a Reply

Your email address will not be published. Required fields are marked *

<p>You cannot copy content of this page.</p>