ಬ್ರಹ್ಮಾವರ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮೂಡು ತೋನ್ಸೆ ಗ್ರಾಮದ ಮುಹಮ್ಮದ್ ಫೈಝಲ್(36) ಎಂಬವರ ಮೃತದೇಹವು ಮಾಯಾಡಿ ಎಂಬಲ್ಲಿರುವ ಸ್ವರ್ಣ ನದಿಯಲ್ಲಿ ಪತ್ತೆಯಾಗಿದೆ. ರಿಕ್ಷಾ ಚಾಲಕ ವೃತ್ತಿ ಹಾಗೂ ಟೈಲ್ಸ್ ಕೆಲಸ ಮಾಡಿಕೊಂಡಿದ್ದ ಇವರು ಮಾ.27ರಂದು ರಾತ್ರಿ ಮನೆಯಿಂದ ರಿಕ್ಷಾದಲ್ಲಿ ಹೋಗಿದ್ದರು. ಬಳಿಕ ಹುಡುಕಾಡಿದಾಗ ಮನೆ ಬಳಿಯ ಮೈದಾನದ ಸಮೀಪ ಇವರ ರಿಕ್ಷಾ ಪತ್ತೆಯಾಗಿತ್ತು. ಆದರೆ ಮುಹಮ್ಮದ್ ಫೈಝಲ್ ಮನೆಗೆ ಬಾರದೆ ನಾಪತ್ತೆಯಾಗಿದ್ದರು. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಇವರ ಮೃತದೇಹವು ನದಿಯಲ್ಲಿ ಪತ್ತೆಯಾಗಿದ್ದು, ಅವರ ಸಾವಿನಲ್ಲಿ ಸಂಶಯವಿರುವುದಾಗಿ ನೀಡಿದ ದೂರಿನಂತೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Check Also
ಕೇರಳದಲ್ಲಿ ‘ವೆಸ್ಟ್ ನೈಲ್’ ಜ್ವರದ ಆತಂಕ- ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ
ಮಂಗಳೂರು: ನೆರೆಯ ಕೇರಳದ ಮಲಪ್ಪುರಂ, ಕೋಯಿಕ್ಕೋಡ್, ತೃಶೂರ್ ಪ್ರದೇಶದಲ್ಲಿ ‘ವೆಸ್ಟ್ ನೈಲ್’ ಜ್ವರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ …