May 20, 2025
WhatsApp Image 2023-07-31 at 12.20.37 PM

ಮಂಗಳೂರು: ಕದ್ರಿ ಶಿವಬಾಗ್‌ನ ಅಪಾರ್ಟ್‌ಮೆಂಟ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿಯೊಬ್ಬರು ಐದನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ಭಾನುವಾರ ನಡೆದಿದೆ. ಮೃತರನ್ನು ಅಡ್ಯಾರ್ ಮೂಲದ ಸಮಯ (21) ಎಂದು ಗುರುತಿಸಲಾಗಿದ್ದು, ಪ್ರಸ್ತುತ ಕದ್ರಿ ಶಿವಬಾಗ್‌ನಲ್ಲಿ ವಾಸವಾಗಿದ್ದಾರೆ. ಸಮಯ್ ಮನೆಯ ಬಾಲ್ಕನಿಯಲ್ಲಿ ಓದುತ್ತಿದ್ದಾಗ ಅವನ ತಾಯಿ ಕಾರು ತೊಳೆಯಲು ನೆಲಮಾಳಿಗೆಗೆ ಹೋಗುವಂತೆ ಹೇಳಿದ್ದಾರೆ. ಬಳಿಕ ಐದನೇ ಮಹಡಿಯ ಬಾಲ್ಕನಿಯಲ್ಲಿ ಸಮಯ್ ತನ್ನ ತಾಯಿಯೊಂದಿಗೆ ಮಾತನಾಡುತ್ತಿದ್ದ. ಮಾತನಾಡಲು ಬಗ್ಗಿದಾಗ ನೆಲಮಹಡಿಯಿಂದ ಆಯತಪ್ಪಿ ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಮಳೆ ನೀರಿನಿಂದ ಬಾಲ್ಕನಿಯಲ್ಲಿ ನೆಲ ಒದ್ದೆಯಾಗಿತ್ತು ಎಂದು ತಿಳಿದು ಬಂದಿದೆ. ಸಮಯ್ ತಂದೆ ಸಿವಿಲ್ ಇಂಜಿನಿಯರ್ ಮತ್ತು ತಾಯಿ ಗೃಹಿಣಿ. ದಂಪತಿಗೆ ಇರುವ ಇಬ್ಬರು ಪುತ್ರರಲ್ಲಿ ಸಮಯ್ ಹಿರಿಯನಾಗಿದ್ದ. ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Leave a Reply

Your email address will not be published. Required fields are marked *

<p>You cannot copy content of this page.</p>