
ವೇಣೂರು : ಇತಿಹಾಸ ಪ್ರಸಿದ್ಧ ವೇಣೂರು ಶ್ರೀ ಭಗವಾನ್ ಬಾಹುಬಲಿ ಮೂರ್ತಿಯ ಮಹಾಮಸ್ತಕಾಭಿಷೇಕವು 2024ರ ಫೆಬ್ರವರಿ ತಿ೦ಗಳಿನಲ್ಲಿ ಅದ್ದೂರಿಯಿ೦ದ
ಜರಗಲಿದೆ ಎ೦ದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಈಗಷ್ಟೇ ಮಾಹಿತಿ ನೀಡಿದರು. ಉಜಿರೆಯ ಸಿದ್ದವನದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಟಿಯಲ್ಲಿ ಅವರು ವಿವರ ನೀಡಿದರು. ಮೂಡಬಿದಿರೆ ಭಟ್ಟಾರಕ ಚಾರುಕೀರ್ತಿ ಪ೦ಡಿತಾಚಾರ್ಯವರ್ಯ ಮಹಾ ಸ್ವಾಮೀಜಿಯವರು, ಧರ್ಮಸ್ಥಳದ ಡಿ. ಸುರೇಂದ್ರ ಕುಮಾರ್, ಸೀಮೆಯ ಅರಸರಾದ ಡಾ. ಪದ್ಮಪ್ರಸಾದ ಅಜಿಲರು, ವೇಣೂರು ಜೈನದಿಗ೦ಬರ ತೀರ್ಥಕ್ಷೇತ್ರ ಸಮಿತಿಯ ಕಾರ್ಯದರ್ಶಿ ಪ್ರವೀಣ್ ಕುಮಾರ್ ಇ೦ದ್ರ ಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
