Recent Posts

ಹೆಸರಾಂತ ಯಕ್ಷಗಾನ ಕಲಾವಿದ ಆತ್ಮಹತ್ಯೆ..!

ಉಳ್ಳಾಲ: ಯಕ್ಷಗಾನದಲ್ಲಿ ತನ್ನದೇ ಅಭಿಮಾನಿ ಬಳಗ ಹೊಂದಿದ್ದ ಹೆಸರಾಂತ ಭಾಗವತರ್ವರು ನೇಣಿಗೆ ಕೊರಳೊಡ್ಡಿ ದುರಂತ ಅಂತ್ಯ ಕಂಡ ಘಟನೆ ನಡೆದಿದೆ.ಹೆಸರಾಂತ ಯಕ್ಷಗಾನ ಕಲಾವಿದರಾಗಿದ್ದ ಕೀರ್ತನ್ ಶೆಟ್ಟಿ ವಗೆನಾಡು ಆತ್ಮಹತ್ಯೆಗೆ ಶರಣಾದ ದುರ್ದೈವಿ. ಇವರಿಂದು ಮೂಳೂರು ಬಳಿ ಬಾಡಿಗೆ ಮನೆಯಲ್ಲಿ ಅತ್ಮಹತ್ಯೆಗೆ ಶರಣಾಗಿದ್ದಾರೆ. ಹಿಂದೆ ಬಪ್ಪನಾಡು ಹಾಗೂ ಇತರ ಇತರ ಮೇಳಗಳಲ್ಲಿ ಭಾಗವತರಾಗಿ ಸೇವೆ ಸಲ್ಲಿಸಿದ್ದ ಕೀರ್ತನ್, ಕೊರೊನ ಸಂಧರ್ಭ ಮತ್ತು ನಂತರ ಚಿಕ್ಕಮೇಳದಲ್ಲಿ ಭಾಗವತಿಕೆ ಮಾಡುತ್ತಿದ್ದರು. ದಂಪತಿ ಕಲಹ ಹಾಗೂ ಕುಡಿತದ ಚಟ ಆತ್ಮಹತ್ಯೆಗೆ ಕಾರಣ ಎಂದು ತಿಳಿದು ಬಂದಿದೆ.

Read More »

ಜಾನ್ಹವಿಯ ಸ್ನಾನದ ಕೋಣೆಗೆ ಚಿಲಕವೇ ಇಲ್ಲ ಅಂತೆ..! ಯಾಕೆ ಗೊತ್ತಾ..?

ಬಾಲಿವುಡ್‌ನ ಜನಪ್ರಿಯ ಯುವನಟಿ ಜಾನ್ಹವಿ ಕಪೂರ್ ಅವರು ತಮ್ಮ ಚೆನ್ನೈ ಮನೆಯ ವಿಡಿಯೋ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ವಿಡಿಯೋ ಸಖತ್ ವೈರಲ್ ಆಗಿದೆ. ವಿಡಿಯೋದಲ್ಲಿ ಜಾನ್ಹವಿ ತಮ್ಮ ಚೆನ್ನೈ ಮನೆಯ ಬಗ್ಗೆ ಹಲವು ವಿಷಯಗಳನ್ನು ಹೇಳಿದ್ದಾರೆ. ಅಲ್ಲಿನ ಚಿತ್ರಗಳನ್ನು ತೋರಿಸಿದ್ದಾರೆ. ವಿವಿಧ ಕೋಣೆಗಳು, ಮನೆಯೊಂದಿಗಿನ ತಮ್ಮ ನಂಟು ಇನ್ನಿತರೆ ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ತಮ್ಮ ಕೆಲವು ಸಂಬಂಧಿಗಳ ಪರಿಚಯವನ್ನೂ ಮಾಡಿದ್ದಾರೆ. ಆದರೆ ವಿಡಿಯೋದಲ್ಲಿ ಜಾನ್ಹವಿ ಹೇಳಿರುವ ವಿಷಯವೊಂದು ಆಸಕ್ತಿಕರವಾಗಿದೆ. ಚೆನ್ನೈನ ಮನೆಯಲ್ಲಿ ಜಾನ್ಹವಿ ಕಪೂರ್ ಬಳಸುವ ಸ್ನಾನದ ಕೋಣೆಯ ಬಾಗಿಲಿಗೆ ಚಿಲಕವೇ ಇಲ್ಲವಂತೆ! …

Read More »

BREAKING NEWS : ಶೂಟಿಂಗ್ ವೇಳೆ ಸ್ಯಾಂಡಲ್ ವುಡ್ ನಟಿ ‘ರಾಗಿಣಿ ದ್ವಿವೇದಿ’ ಕೈಗೆ ಗಂಭೀರ ಗಾಯ : ಆಸ್ಪತ್ರೆಗೆ ದಾಖಲು

ಬೆಂಗಳೂರು : ಸ್ಯಾಂಡಲ್ ವುಡ್ ನಟಿ ತುಪ್ಪದ ಬೆಡಗಿ ನಟಿ ರಾಗಿಣಿ ಶೂಟಿಂಗ್ ವೇಳೆ ಗಂಭೀರ ಗಾಯ ಮಾಡಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಚೆನ್ನೈನಲ್ಲಿ ಸಿನಿಮಾವೊಂದರ ಶೂಟಿಂಗ್ ವೇಳೆ ಕೈಗೆ ಬಲವಾಗಿ ಪೆಟ್ಟು ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಕಮಾಂಡೋʼ ಸಿನಿಮಾ ಚಿತ್ರೀಕರಣದ ವೇಳೆ ಕೈಗೆ ಪೆಟ್ಟಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ರಾಗಿಣಿಗೆ ವೈದ್ಯರು ನಾಲ್ಕು ದಿನಗಳ ಬೆಡ್ ರೆಸ್ಟ್ ನಲ್ಲಿರುವಂತೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.ʻಕಮಾಂಡೋʼ ಸಿನಿಮಾ ಚಿತ್ರೀಕರಣದ ವೇಳೆ ಘಟನೆ ನಡೆದಿದೆ. ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ಮತ್ತೆ ಸಿನಿಮಾರಂಗದಲ್ಲಿ ಬ್ಯುಸಿಯಾಗಿದ್ದು, …

Read More »

You cannot copy content of this page.