Recent Posts

ಬೆಳ್ತಂಗಡಿ: ರಸ್ತೆ ಅಪಘಾತ- ಕಾಲೇಜು ವಿದ್ಯಾರ್ಥಿ ಮೃತ್ಯು

ಬೆಳ್ತಂಗಡಿ: ರಸ್ತೆ ಅಪಘಾತವೊಂದರಲ್ಲಿ ಕಾಲೇಜು ವಿದ್ಯಾರ್ಥಿಯೋರ್ವ ಮೃತಪಟ್ಟಿರುವ ಘಟನೆ ಮಡಂತ್ಯಾರಿನಲ್ಲಿ ನಡೆದಿದೆ. ಇಲ್ಲಿನ ಸೆಕ್ರೆಡ್ ಹಾರ್ಟ್ ಕಾಲೇಜಿನ ದ್ವಿತೀಯ ಬಿ. ಕಾಂ ವಿದ್ಯಾರ್ಥಿ ಹರ್ಷಿತ್ (20) ಮೃತಪಟ್ಟ ದುರ್ದೈವಿ. ಕೊಡ್ಲಕ್ಕಿ ನಿವಾಸಿ ಹರೀಶ್ಚಂದ್ರ ಎಂಬವರ ಪುತ್ರ ಹರ್ಷಿತ್ ಸಂಜೆ ಕಾಲೇಜು ಮುಗಿಸಿ ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿರುವ ಸಂದರ್ಭ ಬಳ್ಳಮಂಜ ರಸ್ತೆಯ ಬಂಗೇರಕಟ್ಟೆ ಎಂಬಲ್ಲಿ ಆಟೋ ರಿಕ್ಷಾಕ್ಕೆ ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಸ್ಥಳೀಯರು ಮಂಗಳೂರು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಹರ್ಷಿತ್ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಈ …

Read More »

ಇಂದಿನ ರಾಶಿಭವಿಷ್ಯ ನೋಡಿ (ತಾ.26-11-2022 ರ ಶನಿವಾರ)

ಮೇಷ ರಾಶಿ: ಗ್ರಹಗಳ ಚಲನೆಯಿಂದಾಗಿ ಈ ರಾಶಿಯವರಿಗೆ ಇಂದು ಸಮಯ ಅನುಕೂಲಕರವಾಗಿರುತ್ತದೆ. ನಿಮ್ಮ ಎಲ್ಲಾ ಯೋಜನೆಗಳು ಸುಗಮವಾಗಿ ಸಾಗುತ್ತವೆ. ನೀವು ಸಂಪೂರ್ಣ ಆತ್ಮವಿಶ್ವಾಸದಿಂದ ನಿಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ ಕೆಲಸ ಮಾಡಬೇಕು. ಇಂದು ಭೂಮಿಯನ್ನು ಖರೀದಿಸಬಹುದು ಮತ್ತು ಮಾರಾಟ ಮಾಡಬಹುದು. ವಿದ್ಯಾರ್ಥಿಗಳು ಮತ್ತು ಯುವಕರು ತಮ್ಮ ಕೆಲಸದಲ್ಲಿ ಎದುರಿಸುವ ಯಾವುದೇ ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳಬಹುದು. ಹಣಕಾಸಿನ ವ್ಯವಹಾರಗಳಲ್ಲಿ ಬಹಳ ಜಾಗರೂಕರಾಗಿರಿ. ವ್ಯಾಪಾರಿಗಳಿಗೆ ಇಂದು ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸಲು ಸಮಯ ಅನುಕೂಲಕರವಾಗಿದೆ. ನೀವು ಇಂದು 85 ಪ್ರತಿಶತದಷ್ಟು ಅದೃಷ್ಟವನ್ನು ಪಡೆಯುತ್ತೀರಿ. ಪರಿಹಾರ: ಇಂದು ದುರ್ಗಾ ದೇವಿಯ …

Read More »

ಮಂಗಳೂರಿನಲ್ಲಿ ಮನುಷ್ಯನ ಅಸ್ಥಿಪಂಜರ ಪತ್ತೆ..!

ಮನುಷ್ಯನ ಅಸ್ಥಿಪಂಜರ ಇಂದು ಪತ್ತೆಯಾದ ಘಟನೆ ಮಂಗಳೂರು ನಗರದ ಬರ್ಕೆ ಅರಕ್ಷಕ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಬರ್ಕೆ ಅರಕ್ಷಕ ಠಾಣೆಯ ವ್ಯಾಪ್ತಿಯಲ್ಲಿ ಬರುವ ಮಣ್ಣಗುಡ್ಡೆ ಹೋಟೆಲ್ ದುರ್ಗಮಹಲ್ ಮುಂಭಾಗದ ರಸ್ತೆ ಸಮೀಪದ ಪಾಲುಬಿದ್ದ ಮನೆಯ ಅಂಗಳದಲ್ಲಿ ಅಸ್ಥಿಪಂಜರ ಪತ್ತೆಯಾಗಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಮಾಹಿತಿ ತಿಳಿದ ತಕ್ಷಣ  ಬರ್ಕೆ ಠಾಣಾ ಪೋಲಿಸರು ಸ್ಥಳಕ್ಕೆ ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

Read More »

You cannot copy content of this page.