Recent Posts

ವಿಟ್ಲ: 8ನೇ ತರಗತಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ವಿಟ್ಲ : ಬಾಲಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಣಚದಲ್ಲಿ ನಡೆದಿದೆ. ಮೃತ ಬಾಲಕನನ್ನು ಪುಣಚ ಮಣಿಲ ನಿವಾಸಿ, ದೇವಿನಗರ ಶಾಲೆಯ 8ನೇ ತರಗತಿ ವಿದ್ಯಾರ್ಥಿ ಹೇಮಂತ್ ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಹೇಮಂತ್ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

Read More »

ಹೃದಯಾಘಾತದಿಂದ 12 ವರ್ಷದ ಬಾಲಕ‌ ಸಾವು

ಕೊಡಗು: ಇತ್ತೀಚೆಗೆ ಹೃದಯಾಘಾತ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಯುವಕರು ಮತ್ತು ಬಾಲಕರು ಹೃದಯಾಘತದಿಂದ ಸಾವನ್ನಪ್ಪುತ್ತಿದ್ದಾರೆ. ಇದರಿಂದಾಗಿ ಪೋಷಕರಲ್ಲಿ ಆತಂಕ ಮೂಡಿಸಿದೆ. ಈಗ ಮಡಿಕೇರಿ ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಗ್ರಾಮದ 12 ವರ್ಷದ ಬಾಲಕ‌ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. 12 ವರ್ಷದ ಕೀರ್ತನ್ ಮೃತ ದುರ್ದೈವಿ. ಕೂಡುಮಂಗಳೂರು ಗ್ರಾಮದ ಮಂಜಾಚಾರಿ ಪುತ್ರ ಕೀರ್ತನ್ ಕೊಪ್ಪ ಭಾರತ ಮಾತಾ ಶಾಲೆಯಲ್ಲಿ 6 ನೇ ತರಗತಿ ಓದುತ್ತಿದ್ದನು. ಕೀರ್ತನ್​ ಶನಿವಾರ ತಡರಾತ್ರಿ ಅನಾರೋಗ್ಯದಿಂದ ಬಳಲಿದ್ದನು, ಇಂದು ಆಸ್ಪತ್ರೆ ಕರೆದೊಯ್ಯವ ವೇಳೆ ದಾರಿ‌ಮಧ್ಯೆ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

Read More »

ಮಡಿಕೇರಿಯಲ್ಲಿ ಮತಾಂತರಕ್ಕೆ ಯತ್ನ: ಆರೋಗ್ಯ ಇಲಾಖೆಯ FDA ಅರೆಸ್ಟ್

ಮಡಿಕೇರಿ: ಜಿಲ್ಲೆಯಲ್ಲಿ ಮತಾಂತರಕ್ಕೆ ಪ್ರಚೋದಿಸಿ ಯತ್ನಿಸಿದಂತ ಆರೋಗ್ಯ ಇಲಾಖೆಯ ಪ್ರಥಮ ದರ್ಜೆ ಸಹಾಯಕನನ್ನು ಪೊಲೀಸರು ಬಂಧಿಸಿರೋದಾಗಿ ತಿಳಿದು ಬಂದಿದೆ. ಮಡಿಕೇರಿ ನಗರದ ಜನರಲ್ ತಿಮ್ಮಯ್ಯ ವೃತ್ತದ ಬಸ್ ನಿಲ್ದಾಣದ ಬಳಿಯಲ್ಲಿ, ಕ್ರೈಸ್ತ ಧರ್ಮ ಮತಾಂತರಕ್ಕೆ ಪ್ರಚೋದಿಸಿದ್ದ ಎಂಬ ಹಿನ್ನಲೆಯಲ್ಲಿ ಆರೋಗ್ಯ ಇಲಾಖೆಯ ಪ್ರಥಮ ದರ್ಜೆ ಸಹಾಯಕ ನಿಶಾಂತ್ ಹೆಚ್ ಬಿ ಎನ್ನುವವರನ್ನು ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.   ಸ್ಥಳಕ್ಕೆ ಆಗಮಿಸಿದಂತ ಪೊಲೀಸರು ನಿಶಾಂತ್ ಬಳಿಯಲ್ಲಿ ಇದ್ದಂತ ಕ್ರೈಸ್ತ ಮಿಷನರಿ ಪುಸ್ತಕಗಳನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೇ ನಿಶಾಂತ್ ಹೆಚ್ ಬಿ ಅವರನ್ನು ಬಂಧಿಸಿ, ವಿಚಾರಣೆ …

Read More »

You cannot copy content of this page.