Recent Posts

ಶಿವಮೊಗ್ಗದಲ್ಲಿ `ಸ್ಟೆಬಿಲೈಜರ್’ ಸ್ಪೋಟಗೊಂಡು ಘೋರ ದುರಂತ : ತಂದೆ ಸಾವು, ಮಗನ ಸ್ಥಿತಿ ಗಂಭೀರ

ಶಿವಮೊಗ್ಗ : ಶಿವಮೊಗ್ಗದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಸ್ಟೆಬಿಲೈಜರ್ ಸ್ಪೋಟಗೊಂಡು ತಂದೆ ಸಾವನ್ನಪ್ಪಿದ್ದು, ಮಗ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಕಚೇರಿ ಎದುರಿನ ಮನೆಯಲ್ಲಿ ಸ್ಟೆಬಿಲೈಜರ್ ಸ್ಪೋಟಗೊಂಡ ಪರಿಣಾಮ ಪ್ರತಿಷ್ಠಿತ ಭೂಪಾಳಂ ಕುಟುಂಬದ ಶರತ್ (39) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶರತ್ ಪುತ್ರ ಸಂಚಿತ್ (12) ಗಂಭೀರವಾಗಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಕನ್ಯಾನ ದೇಲಂತಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕದ ಆಮಂತ್ರಣ ಪತ್ರಿಕೆ ಬಿಡುಗಡೆ

ಕನ್ಯಾನ ದೇಲಂತಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ ಮಹೋತ್ಸವ ಫೆ. 6 ರಿಂದ 16 ರ ತನಕ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಶ್ರೀ ಕ್ಷೇತ್ರದಲ್ಲಿ ನಡೆಯಿತು. ಒಡಿಯೂರು ಶ್ರೀಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮಿಗಳವರು ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ,ಆಶೀರ್ವಚನ ನೀಡಿ ಧರ್ಮದ ಚೌಕಟ್ಟಿನಲ್ಲಿ ಬದುಕಿನ ಔನ್ನತ್ಯ ನಿಂತಿದೆ. ಬ್ರಹ್ಮಕಲಶದಂತಹ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಸಿಗುವುದು ಬದುಕಿನಲ್ಲಿ ಸಿಗುವ ಅಪರೂಪದ ಅವಕಾಶ. ಪ್ರತಿಯೊಬ್ಬರೂ ತಮ್ಮ ಕರ್ತವ್ಯ ಎಂಬಂತೆ ಸೇವೆ ನೀಡಬೇಕಾಗಿದೆ ಎಂದರು. ಮಾಣಿಲ ಶ್ರೀ ಧಾಮ ಶ್ರೀ ಮಹಾಲಕ್ಷ್ಮೀ …

Read More »

ಭ್ರಷ್ಟಾಚಾರ ಆರೋಪ ಹಿನ್ನೆಲೆ-ಪಂಜಾಬ್ ಸಚಿವ ಸರಾರಿ ರಾಜೀನಾಮೆ

ಚಂಡೀಗಢ: ಕಳೆದ ನಾಲ್ಕು ತಿಂಗಳಿನಿಂದ ಕೇಳಿ ಬರುತ್ತಿದ್ದ ಭ್ರಷ್ಟಾಚಾರ ಆರೋಪ ಹಿನ್ನೆಲೆಯಲ್ಲಿ ಕೊನೆಗೂ ಪಂಜಾಬ್ ಸಚಿವ ಫೌಜಾ ಸಿಂ ಸರಾರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಂಜಾಬ್‌ ತೋಟಗಾರಿಕೆ, ಆಹಾರ ಸಂಸ್ಕರಣೆ ಹಾಗೂ ರಕ್ಷಣಾ ಸೇವೆಗಳ ಕಲ್ಯಾಣ ಸಚಿವರಾಗಿದ್ದ ಅವರು ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ. ಮುಖ್ಯಮಂತ್ರಿಯವರು ಇದಕ್ಕೆ ಅನುಮೋದನೆ ನೀಡಿದ್ದಾರೆ. ಅಲ್ಲದೆ, ಸರಾರಿ ರಾಜೀನಾಮೆಯಿಂದ ತೆರವಾದ ಖಾತೆಯ ಜವಾಬ್ದಾರಿಯನ್ನು ಪಟಿಯಾಲ ಗ್ರಾಮೀಣ ಶಾಸಕ ಡಾ. ಬಲಬೀರ್‌ ಸಿಂಗ್‌ ಅವರಿಗೆ ನೀಡಲಾಗಿದೆ ಎಂದು ತಿಳಿದು ಬಂದಿದೆ. ಸರ್ಕಾರಿ ಅಧಿಕಾರಿಗಳ ಮೂಲಕ …

Read More »

You cannot copy content of this page.