Recent Posts

BIG NEWS ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ- ಆರೋಪಿಗಳ ಮಾಹಿತಿಗೆ 14 ಲಕ್ಷ ರೂ. ಬಹುಮಾನ

ಮಂಗಳೂರು: ಬಿಜೆಪಿ ಯುವ ಮುಖಂಡ, ಬೆಳ್ಳಾರೆ ನಿವಾಸಿ ಪ್ರವೀಣ್‌ ನೆಟ್ಟಾರು ಅವರ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ನಾಲ್ವರು ಪಾಪ್ಯುಲರ್‌ ಫ್ರಂಟ್‌ ಆಫ್ ಇಂಡಿಯಾ ಸಂಘಟನೆಯ ಕಾರ್ಯಕರ್ತರನ್ನು ಪತ್ತೆಹಚ್ಚಲು ಸಹಾಯ ನೀಡುವವರಿಗೆ ರಾಷ್ಟ್ರೀಯ ತನಿಖಾ ಏಜೆನ್ಸಿ (ಎನ್‌ಐಎ) ನಗದು ಬಹುಮಾನ ಘೋಷಿಸಿದೆ. ಸುಳ್ಯ ಬುದು ಹೌಸ್‌ನ ಎಸ್‌. ಮುಹಮ್ಮದ್‌ ಮುಸ್ತಫ ಯಾನೆ ಮುಸ್ತಫ ಪೈಚಾರ್‌ ಮತ್ತು ಮಡಿಕೇರಿಯ ಎಂ.ಎಚ್‌. ತೌಫಲ್‌ ಕುರಿತು ಮಾಹಿತಿ ನೀಡುವವರಿಗೆ ತಲಾ 5 ಲಕ್ಷ ರೂ. ನೀಡಲಾಗುವುದು. ದಕ್ಷಿಣ ಕನ್ನಡದ ಕಲ್ಲುಮುಟ್ಟಲು ವೀಟಿಲ್‌ ಎಂ.ಆರ್‌. ಉಮ್ಮರ್‌ ಫಾರೂಕ್‌ ಯಾನೆ ಉಮ್ಮರ್‌, ಸಿದ್ದಿಕ್‌ ಯಾನೆ …

Read More »

ಮಂಗಳೂರು: ಮಾಣಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಏಳಿಗೆಗಾಗಿ ಸ್ಪಂಧಿಸೋಣ- ಲಯನ್‌ ಅನಿಲ್‌ ದಾಸ್

ಮಂಗಳೂರು: ಮಾಣಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ ದ ಸ್ವಾಮೀಜಿ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಗಳ  ಮಾರ್ಗದರ್ಶನ ದಲ್ಲಿ ನಡೆಯುವ ಗೋ ಶಾಲೆ, ಗೋ ರಕ್ಷಾ ನಿಧಿ ಗೆ ಲಯನ್ಸ್ ಕ್ಲಬ್ ಮಂಗಳೂರು ಮಂಗಳಾದೇವಿ ವತಿಯಿಂದ ಲಯನ್ಸ್ ಅಧ್ಯಕ್ಷ ರಾದ ಅನಿಲ್ ದಾಸ್ ಮನವಿ ಮೇರೆಗೆ ₹ 25000 ವನ್ನು ಶ್ರೀ ಶ್ರೀ ಮೋಹನ್ ದಾಸ್ ಸ್ವಾಮೀಜಿ ಮುಖಾಂತರ ಮಾಣಿಲ ಮಹಾಲಕ್ಷ್ಮಿ ಸೇವಾ ಪ್ರತಿಷ್ಟನಾ ಟ್ರಸ್ಟ್ ಗೆ ಅರ್ಪಿಸಲಾಯಿತು. ಕುಗ್ರಾಮ ವಾಗಿದ್ದ ಮಾಣಿಲ ದಲ್ಲಿ ಧಾರ್ಮಿಕ,ಸಾಮಾಜಿಕ ಹಾಗೂ ದಿನ ನಿತ್ಯ ಸೇವಾ ಚಟುವಟಿಕೆ ಗಳೊಂದಿಗೆ …

Read More »

ಬೆಳ್ಳಂ ಬೆಳಗ್ಗೆ ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ : 6 ಮಂದಿ ದುರ್ಮರಣ

ಬೆಳಗಾವಿಯ : ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 6 ಜನ ಮೃತಪಟ್ಟ ಘಟನೆ ನಡೆದಿದೆ. ಮರಕ್ಕೆ ಬೊಲೆರೊ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ 6 ಮಂದಿ ಮೃತಪಟ್ಟ ಘಟನೆ ರಾಮದುರ್ಗ ತಾಲೂಕಿನ ಚುಂಚನೂರ ಬಳಿ ನಡೆದಿದೆ. ನಿಯಂತ್ರಣ ತಪ್ಪಿ ವಾಹನ ಮರಕ್ಕೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ಹನುಮವ್ವ, ದೀಪಾ, ಸುಪ್ರಿತಾ, ಮಾರುತಿ, ಇಂದಿರವ್ವ ಸೇರಿ ಆರು ಮಂದಿ ಮೃತಪಟ್ಟಿದ್ದಾರೆ. ಸವದತ್ತಿ ಯಲ್ಲಮನ ದರ್ಶನಕ್ಕೆ ಹೊರಟಾಗ ಈ ದುರ್ಘಟನೆ ಸಂಭವಿಸಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More »

You cannot copy content of this page.