Recent Posts

ಹಾವಿನ ತಲೆಯಲ್ಲಿ ಕ್ಯಾನ್ಸರ್ ಕಾರಕ ಗಡ್ಡೆ ; ಶಸ್ತ್ರಚಿಕಿತ್ಸೆ ನಡೆಸಿ ಹೊರ ತೆಗೆದ ವೈದ್ಯ!

ಧಾರವಾಡ: ಹಾವಿಗೆ ಶಸ್ತ್ರಚಿಕಿತ್ಸೆ ನಡೆಸಿ ಕ್ಯಾನ್ಸರ್ ಕಾರಕ ಗಡ್ಡೆಯನ್ನು ಹೊರ ತೆಗೆದ ಅಪರೂಪದ ಘಟನೆ ಧಾರವಾಡದಲ್ಲಿ ನಡೆದಿದೆ. ಹಿರಿಯ ಪ್ರಾಣಿ ವೈದ್ಯ ಡಾ. ಅನಿಲ್‌ಕುಮಾರ್‍ ಪಾಟೀಲ್ ಅವರು ಈ ಶಸ್ತ್ರಚಿಕಿತ್ಸೆ ನಡೆಸಿ ಯಶಸ್ವಿಯಾಗಿದ್ದಾರೆ. ಮನೆಯೊಂದರಲ್ಲಿ ಹಾವು ಸೇರಿಕೊಂಡಿರುವ ಬಗ್ಗೆ ಕರೆ ಬಂದ ಹಿನ್ನೆಲೆಯಲ್ಲಿ ಉರಗ ರಕ್ಷಕ ಸೋಮಶೇಖರ್ ಚೆನ್ನಶೆಟ್ಟಿ ಅವರ ಕೂಡಲೇ ಆ ಮನೆಗೆ ಹೋಗಿ ಟ್ರಿಂಕೆಟ್ ಎಂಬ ವಿಷಕಾರಿಯಲ್ಲದ ಹಾವನ್ನು ರಕ್ಷಿಸಿದ್ದರು. ಈ ವೇಳೆ ಹಾವಿನ ತಲೆಯಲ್ಲಿ ಗೆಡ್ಡೆ ಇರುವುದು ಗೊತ್ತಾಗಿತ್ತು.ಕೂಡಲೇ ಅದನ್ನು ಡಾ. ಅನಿಲ್‌ಕುಮಾರ್‍ ಪಾಟೀಲ್ ಅವರ ಬಳಿ ಕೊಂಡೊಯ್ದರು. ವೈದ್ಯರು ಹಾವಿಗೆ …

Read More »

ಉಡುಪಿ : ಲಾರಿ ಢಿಕ್ಕಿ – ಸಬ್ ಇನ್ ಸ್ಪೆಕ್ಟರ್ ದುರ್ಮರಣ

ಉಡುಪಿ : ಲಾರಿ ಢಿಕ್ಕಿ ಹೊಡೆದು ಮಂಗಳೂರು ಅಬಕಾರಿ ಇಲಾಖೆಯ ಸಬ್ ಇನ್ ಸ್ಪೆಕ್ಟರ್ ದಾರುಣವಾಗಿ ಸಾವನ್ನಪ್ಪಿರುವ ದುರ್ಘಟನೆ ಅಂಬಾಗಿಲಿನಲ್ಲಿ ಗುರುವಾರ ರಾತ್ರಿ ನಡೆದಿದೆ. ಅತೀ ವೇಗದಿಂದ ಆಗಮಿಸಿದ ಲಾರಿ ಚಾಲಕ ಬೈಕ್ ಗೆ ಢಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಅಬಕಾರಿ ಇಲಾಖೆಯ ಸಬ್ ಇನ್ ಸ್ಪೆಕ್ಟರ್ ಶಂಕರ್(52) ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಶಂಕರ್ ಬ್ರಹ್ಮಾವರದ ಉಪ್ಪೂರು ನಿವಾಸಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡ ಶಂಕರ್ ಅವರನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಉಡುಪಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Read More »

ಮಂಗಳೂರಿನಲ್ಲಿ ಟ್ರಾಫಿಕ್‌ ಪೊಲೀಸರ ಎಡವಟ್ಟು ; ಕಾರಿನ ಸಹ ಪ್ರಯಾಣಿಕ ಹೆಲ್ಮೆಟ್ ಧರಿಸದ್ದಕ್ಕೆ 500 ರೂ. ದಂಡ!

ಮಂಗಳೂರು: ಕಾರಿನಲ್ಲಿ ಸಹ ಪ್ರಯಾಣಿಕ ಹೆಲ್ಮೆಟ್ ಧರಿಸಿಲ್ಲವೆಂದ ಟ್ರಾಫಿಕ್ ಪೊಲೀಸರು ದಂಡ ವಿಧಿಸಿದ ವಿಚಿತ್ರ ಪ್ರಸಂಗವೊಂದು ಮಂಗಳೂರಿನಲ್ಲಿ ನಡೆದಿದೆ. 500 ರೂ. ದಂಡ ಪಾವತಿಸುವಂತೆ ಕಾರು ಚಾಲಕನಿಗೆ ನೋಟಿಸ್ ಬಂದಿದ್ದು, ಈ ನೋಟಿಸ್ ನೋಡಿ ಅವರು ಶಾಕ್ ಆಗಿದ್ದಾರೆ. ನವೆಂಬರ್‌ 29ರಂದು ಮಂಗಳಾದೇವಿ ರಸ್ತೆಯಲ್ಲಿ ಟ್ರಾಫಿಕ್ ನಿಯಮ ಉಲ್ಲಂಘನೆಯಾಗಿದ್ದು, ಸಹ ಪ್ರಯಾಣಿಕ ಹೆಲ್ಮೆಟ್ ಧರಿಸಿರಲಿಲ್ಲ. ಹೀಗಾಗಿ ದಂಡ ಪಾವತಿಸಿ ಎಂದು ನೋಟಿಸ್‌ನಲ್ಲಿ ಸೂಚಿಸಲಾಗಿದೆ. ಉಲ್ಲಂಘನೆ ವಿವರಗಳು ಎಂಬ ಕಾಲಂನಲ್ಲಿ ’ಕಾರು’ ಎಂದೂ, ಉಲ್ಲಂಘನೆ ರೀತಿ ಕಾಲಂನಲ್ಲಿ ಸಹಸವಾರ ಹೆಲ್ಮೆಟ್ ಧರಿಸಿಲ್ಲ’ ಎಂದು ನಮೂದಿಸಲಾಗಿದೆ. ಡಿಸೆಂಬರ್‍ 22ರಂದು …

Read More »

You cannot copy content of this page.