Recent Posts

ಸುರತ್ಕಲ್: ವ್ಯಕ್ತಿಯೋರ್ವರಿಗೆ ಚೂರಿ ಇರಿತ, ಆಸ್ಪತ್ರೆಗೆ ದಾಖಲು

ಸುರತ್ಕಲ್:ವ್ಯಕ್ತಿಯೋರ್ವರಿಗೆ ಚೂರಿಯಿಂದ ಇರಿದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕೃಷ್ಣಾಪುರ ನೈತಂಗಡಿ ಬಳಿ ನಡೆದಿದೆ. ಕೃಷ್ಣಾಪುರ ನಿವಾಸಿ ಜಲೀಲ್ ಅವರ ಎದೆಯ ಭಾಗಕ್ಕೆ ಚೂರಿಯಿಂದ ಇರಿಯಲಾಗಿದೆ. ಜಲೀಲ್ ಮೇಲೆ ಇಬ್ಬರು ದುಷ್ಕರ್ಮಿಗಳ ತಂಡ ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ.ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಸುರತ್ಕಲ್ ಪೊಲೀಸರು ಭೇಟಿ ನೀಡಿದ್ದಾರೆ.ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More »

ಕೇರಳದ ಈ ವಿಶ್ವವಿದ್ಯಾನಿಲಯದಲ್ಲಿ ವಿಧ್ಯಾರ್ಥಿನಿಯರಿಗೆ 60 ದಿನ ರಜೆ -ಯಾವ ಕಾರಣಕ್ಕೆ ಗೊತ್ತಾ…?

ಕೊಟ್ಟಾಯಂ : ಕೇರಳದಲ್ಲಿ ದೇಶದಲ್ಲಿ ಇದೇ ಮೊದಲ ಬಾರಿಗೆ ವಿಶ್ವವಿದ್ಯಾನಿಲಯದಲ್ಲಿ ಓದುತ್ತಿರುವ ವಿಧ್ಯಾರ್ಥಿನಿಯರಿಗೆ 60 ದಿನಗಳ ಮೆಟರ್ನಿಟಿ ರಜೆ ನೀಡಲು ತೀರ್ಮಾನಿಸಿದೆ. ಕೊಟ್ಟಾಯಂನ ಮಹಾತ್ಮಾ ಗಾಂಧಿ ವಿಶ್ವವಿದ್ಯಾಲಯ ಸ್ನಾತಕ (ಯುಜಿ) ಸ್ನಾತಕೋತ್ತರ (ಪಿಜಿ) ವಿದ್ಯಾರ್ಥಿನಿಯರಿಗೆ ಈ ಅವಕಾಶ ನೀಡಲಿದೆ. ವಿವಿಯ ಕುಲಪತಿ ಸಿ.ಟಿ ಅರವಿಂದ್ ಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಿಂಡಿಕೇಟ್ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ವಿಶ್ವವಿದ್ಯಾಲಯದಲ್ಲಿ ಓದುತ್ತಿರುವ 18 ವರ್ಷ ಮೇಲ್ಪಟ್ಟ ವಿದ್ಯಾರ್ಥಿನಿಯರಿಗೆ 60 ದಿನ ಮಾತೃತ್ವ ರಜೆ ನೀಡಲಾಗುತ್ತದೆ. ಇದರಿಂದ ವಿದ್ಯಾರ್ಥಿನಿಯರು ವಿದ್ಯಾಭ್ಯಾಸ ಮೊಟಕುಗೊಳಿಸುವುದನ್ನು ತಡೆಯಬಹುದಾಗಿದೆ ಎಂದು ವಿವಿ ತಿಳಿಸಿದೆ. …

Read More »

ಹಿಂದೂ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿ ಮೇಲೆ ಗುಂಪಿನಿಂದ ಹಲ್ಲೆ!

ಬೆಂಗಳೂರು: ಹಿಂದೂ ಪರ ಹೋರಾಟಗಾರ ಪುನೀತ್ ಕೆರೆಹಳ್ಳಿ ಮೇಲೆ ಗುಂಪೊಂದು ಹಲ್ಲೆ ನಡೆಸಿದ ಘಟನೆ ನಡೆದಿದ್ದು, ರಾಜ್ ಕುಮಾರ್ ಕುಟುಂಬದ ಕುರಿತು ಅವಹೇಳನಾಕಾರಿಯಾಗಿ ಮಾತನಾಡಿರುವ ಆರೋಪ ಹೊರಿಸಿ ಪುನೀತ್ ಕೆರೆಹಳ್ಳಿ ಮೇಲೆ ಹಲ್ಲೆ ನಡೆಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ವರದಿಗಳ ಪ್ರಕಾರ ಚಾಮರಾಜಪೇಟೆಯಲ್ಲಿ ಈ ಘಟನೆ ನಡೆದಿದ್ದು,  ರಾಜ್ ಕುಮಾರ್ ಫ್ಯಾಮಿಲಿ ಬಗ್ಗೆ ಹಗುರವಾಗಿ ಮಾತನಾಡಿದ್ದೀಯಾ? ನೀನು ಕ್ಷಮೆ ಕೇಳಬೇಕು ಎಂದು ತಂಡ ಅವಾಜ್ ಹಾಕಿದ ಬಳಿಕ ಪುನೀತ್ ಕೆರೆಹಳ್ಳಿ ಮೇಲೆ ಹಲ್ಲೆ ನಡೆಸುತ್ತಿರುವುದು ಕಂಡು ಬಂದಿದೆ. ಶಿವಕುಮಾರ್ ನಾಯ್ಕ್ ಬಣ ಹಲ್ಲೆ ನಡೆಸಿದೆ ಎಂಬ …

Read More »

You cannot copy content of this page.