Recent Posts

BREAKING NEWS: ಅಪಘಾತದಿಂದ ಗಾಯದಿಂದ ರಿಷಭ್ ಪಂತ್‌ ʼಜೀವನ್ಮರಣ ಹೋರಾಟʼ : ಏರ್ ಆಂಬ್ಯುಲೆನ್ಸ್ ಒದಗಿಸಲು ʼಪುಷ್ಕರ್ ಸಿಂಗ್ ಧಾಮಿ ಸೂಚನೆʼ

ನವದೆಹಲಿ: ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ ರಿಷಭ್ ಪಂತ್ ತೀವ್ರ ಗಾಯಗೊಂಡಿದ್ದಾರೆ. ಪೊಲೀಸರ ಪ್ರಕಾರ, ಕಾರು ಚಾಲನೆ ಮಾಡುವಾಗ ಕ್ರಿಕೆಟರ್ ನಿದ್ರೆಗೆ ಜಾರಿದ ಪರಿಣಾಮವಾಗಿ ನಿಯಂತ್ರಣ ಕಳೆದುಕೊಂಡು ಬಿಎಂಡಬ್ಲ್ಯೂ ಕಾರು ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಕ್ರಿಕೆಟಿಗ ಕಾರಿನಲ್ಲಿ ಒಬ್ಬರೇ ಇದ್ದರು ಮತ್ತು ಧಗಧಗನೇ ಹೊತ್ತಿಉರಿದ ಕಾರಿನ ಗಾಜು ಒಡೆದು ಹೊರ ಬಂದು ಇದೀಗ ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಾರೆ ಎಂದು ಉತ್ತರಾಖಂಡ್ ಪೊಲೀಸ್ ಡಿಜಿಪಿ ಅಶೋಕ್ ಕುಮಾರ್ ಹೇಳಿದರು. ಪಂತ್ ಅವರ ಕಾರು …

Read More »

ತಾಯಿ ಚಿತೆಗೆ ಅಗ್ನಿ ಸ್ಪರ್ಶ ಮಾಡಿದ ಮೋದಿ ಸಹೋದರರು

ಗಾಂಧೀನಗರ: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅವರು ಇಂದು ಮುಂಜಾನೆ ವಿಧಿವಶರಾಗಿದ್ದು, ಅವರ ಅಂತಿಮ ಸಂಸ್ಕಾರದಲ್ಲಿ ಮೋದಿ ಕುಟುಂಬದ ಸದಸ್ಯರೆಲ್ಲರೂ ಭಾಗಿಯಾಗಿದ್ದಾರೆ. ಮೋದಿ ಸಹೋದರರು ಹೀರಾಬೆನ್ ಚಿತೆಗೆ ಅಗ್ನಿಸ್ಪರ್ಶ ಮಾಡಿದ್ದು, ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಮೋದಿ ತಾಯಿಯ ಅಗಲಿಕೆ ಸುದ್ದಿ ತಿಳಿಯುತಿದ್ದಂತೆಯೇ ಪ್ರಧಾನಿ ಅಹಮದಾಬಾದ್‌ಗೆ ತೆರಳಿದ್ದರು. ಹೀರಾಬೆನ್ ಅಂತ್ಯಕ್ರಿಯೆಗೂ ಮುನ್ನ ಪ್ರಧಾನಿ ಪಾರ್ಥೀವ ಶರೀರದ ಮೆರವಣಿಗೆಯಲ್ಲಿ ಹೆಗಲು ಕೊಟ್ಟಿದ್ದಾರೆ. ಪಂಕಜ್ ಮೋದಿ ಅವರ ನಿವಾಸದಿಂದ ಪಾರ್ಥಿವ ಶರೀರ ಅಂತಿಮ ಯಾತ್ರೆ ಹೊರಡಲಾಗಿತ್ತು. ಇಂದು ಬೆಳಗ್ಗೆ 9:30ರ ವೇಳೆಗೆ ಸೆಕ್ಟರ್ 30ರ ರುದ್ರಭೂಮಿಯಲ್ಲಿ …

Read More »

‘ಭವ್ಯವಾದ ಶತಮಾನದ ದೀಪ ದೇವರ ಪಾದ ಸೇರಿದೆ’: ತಾಯಿಯ ಅಗಲಿಕೆಯ ಬಗ್ಗೆ ಪ್ರಧಾನಿ ಮೋದಿ ಟ್ವೀಟ್

 ನವದೆಹಲಿ: ಶತಮಾನದ ದೀಪವು ದೇವರ ಪಾದ ಸೇರಿದೆ ಎಂದಿ ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್ ಮಾಡಿದ್ದಾರೆ. ತನ್ನ ತಾಯಿ ಹೀರಾಬೆನ್ ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಅಹಮದಾಬಾದಿನ ಯುಎನ್ ಮೆಹ್ತಾ ಆಸ್ಪತ್ರೆಯಲ್ಲಿ ಶುಕ್ರವಾರ ಮುಂಜಾನೆ ಕೊನೆಯುಸಿರೆಳೆದಿದ್ದರು. ಈ ಬಗ್ಗೆ ತನ್ನ ಅಧಿಕೃತ ಖಾತೆಯಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಭವ್ಯವಾದ ಶತಮಾನವು ದೇವರ ಪಾದದ ಮೇಲೆ ನಿಂತಿದೆ. ತಾಯಿಯಲ್ಲಿ ನಾನು ಮೂರು ವಿಚಾರಗಳನ್ನು ಕಂಡಿದ್ದು, ಅದು ತಪಸ್ವಿಯ ಪ್ರಯಾಣ, ನಿಸ್ವಾರ್ಥ ಕರ್ಮಯೋಗಿಯ ಸಂಕೇತ ಮತ್ತು ಮೌಲ್ಯಗಳಿಗೆ ಬದ್ಧವಾಗಿರುವ ಜೀವನವನ್ನು ಒಳಗೊಂಡಿದೆ ಎಂದವರು ಬರೆದುಕೊಂಡಿದ್ದಾರೆ.

Read More »

You cannot copy content of this page.