Recent Posts

BREAKING NEWS : ಹಾವೇರಿಯಲ್ಲಿ ಘೋರ ದುರಂತ : ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಹಾವೇರಿ : ಹಾವೇರಿಯಲ್ಲಿ ಘೋರದುರಂತವೊಂದು ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹಾವೇರಿ ತಾಲೂಕಿನ ಅಗಡಿ ಗ್ರಾಮದಲ್ಲಿ ಒಂದೇ ಕುಟುಂಬದ ಮೂವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಯಿ ಭಾರತಿ ಕಮದೊಳ್ಳಿ (40) ಮಗ ಕಿರಣ್ (21) ಹಾಗೂ ಸೊಸೆ ಸೌಜನ್ಯ (20) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ 3 ತಿಂಗಳ ಹಿಂದೆ ಕಿರಣ್, ಸೌಜನ್ಯ ಮದುವೆಯಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾವೇರಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ …

Read More »

ಮಗಳ ಬರ್ತ್‌ಡೇ ಆಚರಿಸಲು ಸುವರ್ಣ ಸೌಧ ಬಾಡಿಗೆಗೆ ಕೊಡಿ – ಹೀಗೆ ಕೇಳಲು ಕಾರಣವೇನು ಗೊತ್ತಾ..?

ಬೆಳಗಾವಿ: ಮಗಳ ಬರ್ತ್‌ಡೇ ಆಚರಣೆಗೆ ಸುವರ್ಣ ಸೌಧವನ್ನು ಬಾಡಿಗೆಗೆ ನೀಡುವಂತೆ ವಿಧಾನ ಪರಿಷತ್‌ ಸಭಾಪತಿಗೆ ವಕೀಲರೊಬ್ಬರು ಮನವಿ ಪತ್ರ ಸಲ್ಲಿಸಿರುವ ವಿಚಿತ್ರ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬಡಿಗವಾಡ ಗ್ರಾಮದ ವಕೀಲ ಮಲ್ಲಿಕಾರ್ಜುನ ಚೌಕಾಶಿ ಹೆಸರಿನ ವ್ಯಕ್ತಿ ಸುವರ್ಣ ಸೌಧ ಬಾಡಿಗೆಗೆ ನೀಡುವಂತೆ ಸಭಾಪತಿಗೆ ಮನವಿ ಮಾಡಿದ್ದಾರೆ. ಪತ್ರದಲ್ಲಿ ಏನಿದೆ? ನನ್ನ ಏಕೈಕ ಪುತ್ರಿಯಾದ ಮಣಿಶ್ರೀಗೆ ಜನವರಿ 30ಕ್ಕೆ 5 ವರ್ಷ ಮುಗಿದು 6ನೇ ವರ್ಷ ತುಂಬಲಿದ್ದು, ಅವಳು 1ನೇ ತರಗತಿಯ ಪ್ರವೇಶ ಪಡೆಯಬೇಕಿದೆ. ಇದು ಅವಳ ಜೀವನದ ಅಮೂಲ್ಯ ಕ್ಷಣ. ಹೀಗಾಗಿ …

Read More »

ಉಡುಪಿ: ಮನೆಯ ಬಾಗಿಲು ಮುರಿದು ಒಳನುಗ್ಗಿ ಲಕ್ಷಾಂತರ ಮೌಲ್ಯದ ಸೊತ್ತು ಕಳವು ; ಆರೋಪಿಗಳ ಬಂಧನ

ಉಡುಪಿ: ಮನೆಯವರು ಮೆಹಂದಿಗೆ ಕಾರ್ಯಕ್ರಮಕ್ಕೆ ಹೋಗಿದ್ದಾಗ ಅಡುಗೆ ಮನೆಯ ಬಾಗಿಲು ಮುರಿದು ಒಳನುಗ್ಗಿ ಕಳ್ಳತನ ನಡೆಸಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಲ್ಯಾ ಗ್ರಾಮದ ಕಂಗಿತ್ತು ಎಂಬಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂದ ಪಟ್ಟಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ಅರಂಬೋಡಿ ಕಾಂತರಬೆಟ್ಟು ನಿವಾಸಿ ಪ್ರಸಾದ್‌ (34) ಹಾಗು ಕಳ್ಳತನಕ್ಕೆ ಸಹಕರಿಸಿದ ಆರೋಪದಲ್ಲಿ ಶಿಬಾ (39) ಎಂಬಾಕೆ ಬಂಧನಕ್ಕೆ ಒಳಗಾದ ಆರೋಪಿಗಳಾಗಿದ್ದಾರೆ. ಕಾರ್ಕಳ ತಾಲೂಕು ಕಲ್ಯಾ ಗ್ರಾಮದ ಕಂಗಿತ್ತುವಿನ ಉಷಾ ಜಗದೀಶ್‌ ಆಂಚನ್‌ ಅವರ ಮನೆಯಲ್ಲಿ ಡಿಸೆಂಬರ್ 3ರಂದು ಈ ಕಳವು ಪ್ರಕರಣ …

Read More »

You cannot copy content of this page.