Recent Posts

ಪಿಜಿ ಯುವತಿಯರ ನಗ್ನ ದೃಶ್ಯ ಸೆರೆ ಹಿಡಿದು ಟಾರ್ಚರ್ – ಸೆಕ್ಸ್ ಆಫರ್‌ ಕೊಟ್ಟು ಖೆಡ್ಡಾಕ್ಕೆ ಬೀಳಿಸಿದ ಖಾಕಿ

ಬೆಂಗಳೂರು: ಪಿಜಿಯಲ್ಲಿ ಆಶ್ರಯ ಪಡೆಯುವ ಯುವತಿಯರ ಸ್ನಾನ ಮಾಡುವ ದೃಶ್ಯಗಳನ್ನು ಬಾತ್‌ರೂಂನ ಕಿಟಕಿಯಲ್ಲಿ ರಹಸ್ಯ ಕ್ಯಾಮೆರಾ ಇಟ್ಟು ಸೆರೆಹಿಡಿದು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ವಿಕೃತ ಕಾಮಿಯನ್ನು ಬೆಂಗಳೂರು ಆಗ್ನೇಯ ವಿಭಾಗದ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪಾಂಡಿಚೇರಿ ಮೂಲದ ನಿರಂಜನ್ ಬಂಧಿತ ಕಾಮುಕ. ಯುವತಿಯ ಹೆಸರಿನಲ್ಲಿ ಪೊಲೀಸರೇ ಸೆಕ್ಸ್ ಆಫರ್ ಕೊಟ್ಟು ಸಿನಿಮೀಯ ರೀತಿಯಲ್ಲಿ ಇವನನ್ನು ಅರೆಸ್ಟ್ ಮಾಡಿದ್ದಾರೆ. ಹತ್ತನೇ ತರಗತಿ ಪಾಸು ಮಾಡಿಕೊಂಡಿದ್ದ ಈತ ಪಾಂಡಿಚೆರಿ ಮೂಲದವನು. ಕಳೆದ 4 ವರ್ಷಗಳಿಂದ ಬೊಮ್ಮನಹಳ್ಳಿಯ ಪಿಜಿಯಲ್ಲೇ ನೆಲೆಸಿದ್ದ ಆತ, ಆ ಪಿಜಿ ಮಾಲೀಕನೊಂದಿಗೆ ಆತ್ಮೀಯ …

Read More »

ಉಡುಪಿ ಕೃಷ್ಣ ಮಠಕ್ಕೆ ನಟಿ ಹರಿಪ್ರಿಯ – ವಸಿಷ್ಠ ಸಿಂಹ ಭೇಟಿ

ಉಡುಪಿ: ಇತ್ತೀಚೆಗಷ್ಟೇ ನಿಶ್ಚಿತಾರ್ಥ ಮಾಡಿಕೊಂಡ ಕನ್ನಡ ಚಿತ್ರರಂಗದ ನಟ ವಸಿಷ್ಠ ಸಿಂಹ ಹಾಗೂ ನಟಿ ಹರಿಪ್ರಿಯ ಉಡುಪಿಗೆ ಆಗಮಿಸಿ ಕೃಷ್ಣನ ದರ್ಶನ ಪಡೆದು ಕಾಣಿಯೂರು ಮಠಾಧೀಶರಿಂದ ಅನುಗ್ರಹ ಮಂತ್ರಾಕ್ಷತೆಯನ್ನು ಸ್ವೀಕರಿಸಿದರು. ಇತ್ತೀಚೆಗಷ್ಟೇ ನಿಶ್ಚಿತಾರ್ಥ ಮಾಡಿಕೊಂಡ ಸ್ಯಾಂಡಲ್‌ವುಡ್ ಕ್ಯೂಟ್ ಜೋಡಿ ನಟ ವಸಿಷ್ಠ ಸಿಂಹ ಹಾಗೂ ನಟಿ ಹರಿಪ್ರಿಯ ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿದ್ದಾರೆ. ಕೃಷ್ಣ ಮಠದ ಕನಕ ನವಗ್ರಹ ಕಿಂಡಿ ಮೂಲಕ ದೇವರ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ್ದರು. ಬಳಿಕ ಕೃಷ್ಣ ಮಠದ ರಥಬೀದಿಯಲ್ಲಿ ಇರುವ ಕಾಣಿಯೂರು ಮಠಕ್ಕೆ ಭೇಟಿ ನೀಡಿ, …

Read More »

ಉಡುಪಿ: ಬದಿಯಡ್ಕದ ವೈದ್ಯರದ್ದು ಆತ್ಮಹತ್ಯೆ ಪ್ರಕರಣ ಪೊಲೀಸರ ತನಿಖೆಯಲ್ಲಿ ಸತ್ಯಾಂಶ ಬಯಲು…!

ಉಡುಪಿ: ಕಾಸರಗೋಡಿನ ಬದಿಯಡ್ಕದ ವೈದ್ಯ ಡಾ.ಕೃಷ್ಣಮೂರ್ತಿಯವರ ಶವ ಕುಂದಾಪುರ ರೈಲ್ವೇ ಟ್ರಾಕ್ ನಲ್ಲಿ ಪತ್ತೆಯಾಗಿದ್ದರ ಕುರಿತಾಗಿ ಉಡುಪಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆಯವರ ನೇತೃತ್ವದಲ್ಲಿ ಕುಂದಾಪುರ ಪೋಲಿಸರು ನಡೆಸಿದ ತನಿಖೆ ಬಹುತೇಕ ಮುಕ್ತಾಯಗೊಂಡಿದೆ. ಈ ಪ್ರಕರಣ ಆತ್ಮಹತ್ಯೆ ಎಂದು ಬಹುತೇಕ ಖಚಿತವಾಗಿದೆ ಎಂದು ಪೋಲಿಸ್ ಉನ್ನತ ಮೂಲಗಳು ತಿಳಿಸಿವೆ. ಆದರೆ ಕಾಸರಗೋಡು ಪೊಲೀಸರು ಈ ಬಗ್ಗೆ ತನಿಖೆ ಮುಂದುವರಿಸಿದ್ದಾರೆ. ನವೆಂಬರ್‌ 8 ಮಧ್ಯಾಹ್ನ ಸುಮಾರು 12.30 ಕ್ಕೆ ಮಂಗಳೂರು ಕೆ.ಎಸ್.ಆರ್.ಟಿ.ಸಿ ನಿಲ್ದಾಣದಿಂದ ಕುಂದಾಪುರಕ್ಕೆ ಪಯಣ ಬೆಳೆಸಿದ ವೈದರು, ಕುಂದಾಪುರ ಕೆ.ಎಸ್.ಆರ್.ಟಿ.ಸಿ ನಿಲ್ದಾಣದ ಶಾಸ್ತ್ರಿ …

Read More »

You cannot copy content of this page.