Recent Posts

ಗುರುಪುರ ಕೈಕಂಬದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ..! ಚಾಲಕರಿಬ್ಬರು ಸಾವು

ಮಂಗಳೂರು:ಲಾರಿಗಳ ನಡುವೆ ಭೀಕರ ಅಪಘಾತ ಸಂಭವಿಸಿ,ಚಾಲಕರಿಬ್ಬರು ಮೃತಪಟ್ಟ ಘಟನೆಯೊಂದು ನಗರದ ಹೊರವಲಯದ ಗುರುಪುರ-ಕೈಕಂಬ ಬಳಿಯ ಇಳಿಜಾರು ಪ್ರದೇಶದಲ್ಲಿ ನಡೆದಿದೆ. ಮೂಡುಬಿದ್ರೆ ಕಡೆಯಿಂದ ಮಣ್ಣು ಹೊತ್ತು ಬರುತ್ತಿದ್ದ ಬೃಹತ್ ಲಾರಿ ಹಾಗೂ ಗುರುಪುರ ಕಡೆಯಿಂದ ಹೋಗುತ್ತಿದ್ದ ಲಾರಿ ನಡುವೆ ಇಳಿಜಾರು ಪ್ರದೇಶದಲ್ಲಿ ಅಪಘಾತ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಸಂಪೂರ್ಣ ನಜ್ಜುಗುಜ್ಜಾಗಿದ್ದು, ರಸ್ತೆ ಬದಿಯ ಹೊಂಡಕ್ಕೆ ಇಳಿದು ನಿಂತ ಪರಿಣಾಮ ಚಾಲಕರನ್ನು ಹೊರತೆಗೆಯಲು ಹರಸಾಹಸ ಪಡಬೇಕಾಯಿತು.

Read More »

BIGG NEWS : ಕೇಸರಿ ಶಾಲೆಗಾಗಿ ಹಿಂದೂಪರ ಸಂಘಟನೆಗಳಿಂದ ಅಭಿಯಾನ!

ಬೆಂಗಳೂರು : ಹಿಜಾಬ್, ಹಲಾಲ್ ಕಟ್, ಅಜಾನ್ ಬಳಿಕ ರಾಜ್ಯದಲ್ಲಿ ಮತ್ತೊಂದು ಧರ್ಮ ದಂಗಲ್ ಶುರುವಾಗಿದ್ದು, ರಾಜ್ಯದಲ್ಲಿ ಮದರಸಾ ಬ್ಯಾನ್ ಮಾಡದಿದ್ದರೆ ಕೇಸರಿ ಶಾಲೆಗಳನ್ನು ಆರಂಭಿಸಬೇಕು ಎಂದು ಹಿಂದೂ ಸಂಘಟನೆಗಳು ಅಭಿಯಾನಕ್ಕೆ ಮುಂದಾಗಿವೆ. ರಾಜ್ಯದಲ್ಲಿ ಮದರಸಾಗಳನ್ನು ನಿಷೇಧ ಮಾಡಿ ಇಲ್ಲವೇ ಕೇಸರಿ ಶಾಲೆ ಆರಂಭಿಸಿ. ದೇಶದ ಹಲವು ರಾಜ್ಯಗಳಲ್ಲಿ ಈಗಾಗಲೇ ಮದರಸಾಗಳನ್ನು ನಿಷೇಧ ಮಾಡಲಾಗಿದೆ. ಕರ್ನಾಟಕದಲ್ಲೂ ಮದಸರಾಸಗಳನ್ನು ಬ್ಯಾನ್ ಮಾಡಬೇಕು. ಇಲ್ಲದಿದ್ದರೆ ರಾಜ್ಯದಲ್ಲಿ ಕೇಸರಿ ಶಾಲೆಗಳನ್ನು ಆರಂಭಿಸಬೇಕು ಎಂದು ಆಗ್ರಹಿಸಿದ್ದಾರೆ. ಕೇಸರಿ ಶಾಲೆಗಳಲ್ಲಿ ಪ್ರತ್ಯೇಕ ಪಠ್ಯ ಇರಬೇಕು. ಪಠ್ಯ ಪುಸ್ತಕಗಳಲ್ಲಿ ಹಿಂದುತ್ವದ ಹಿನ್ನೆಲೆ ಇರುವ …

Read More »

ಕಾರ್ಕಳ: ಬಸ್ಸಿಗೆ ಹತ್ತುವ ವೇಳೆ ಬಿದ್ದು ಚಕ್ರದಡಿ ಸಿಲುಕಿ ವ್ಯಕ್ತಿ ಮೃತ್ಯು

ಕಾರ್ಕಳ: ಬಸ್ಸಿಗೆ ಹತ್ತುವಾಗ ನಿಯಂತ್ರಣ ತಪ್ಪಿ ಚಕ್ರದಡಿಗೆ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಹಿರ್ಗಾನದ ಬಸ್ಸು ನಿಲ್ದಾಣದ ಮುಂಭಾಗದಲ್ಲಿ ಡಿ.೦೪ ರ ಭಾನುವಾರ ಸಂಜೆ ನಡೆದಿದೆ. ಮೃತಪಟ್ಟಿರುವ ವ್ಯಕ್ತಿ ಚಿಕ್ಕಲ್ ಬೆಟ್ಟಿನ ಕೃಷ್ಣ ನಾಯಕ್(71) ಎಂದು ಗುರುತಿಸಲಾಗಿದೆ. ಇವರು ಹಿರ್ಗಾನದಿಂದ ಚಿಕ್ಕಲ್ ಬೆಟ್ಟು ಕ್ರಾಸ್’ಗೆ ಹೋಗಲು ಬಸ್ಸು ಹತ್ತುವ ವೇಳೆ ಈ ಘಟನೆ ಸಂಭವಿಸಿದೆ. ತಕ್ಷಣವೇ ಅಂಬ್ಯುಲೆನ್ಸ್(108) ಮೂಲಕ ಆಸ್ಪತ್ರೆಗೆ ದಾಖಲಿಸಿದ್ದರು ದುರಾದೃಷ್ಟವಶಾತ್ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಮೃತರಿಗೆ ಪತ್ನಿ ಹಾಗೂ ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ

Read More »

You cannot copy content of this page.