Recent Posts

ಸುರತ್ಕಲ್: ಲಾರಿ ಢಿಕ್ಕಿ; ಮೆಡಿಕಲ್‌ ರೆಪ್‌ ಮೃತ್ಯು

ಸುರತ್ಕಲ್: ಲಾರಿ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಪಣಂಬೂರಿನಲ್ಲಿ ನಡೆದಿದೆ. ಮೃತರನ್ನು ಸುರತ್ಕಲ್‌ ಹೊಸಬೆಟ್ಟು ನಿವಾಸಿ ಅಂಬರೀಷ್ ರಾವ್‌ ( 61) ಎಂದು ಗುರುತಿಸಲಾಗಿದೆ. ಮೆಡಿಕಲ್‌ ರೆಪ್‌ ಆಗಿದ್ದ ಅಂಬರೀಷ್ ಕೆಲಸ ಮುಗಿಸಿಕೊಂಡು ಮನೆಗೆ ಕಡೆ ಬರುತ್ತಿದ್ದ ವೇಳೆ ಪಣಂಬೂರು ದೇವಸ್ಥಾನದ ಬಳಿ ಅದೇ ರಸ್ತೆಯಾಗಿ ಬಂದ ಲಾರಿ ಅವರಿಗೆ ಢಿಕ್ಕಿ ಹೊಡೆಯಿತೆನ್ನಲಾಗಿದೆ. ಘಟನೆಯಿಂದ ಗಂಭೀರ ಗಾಯಗೊಂಡಿದ್ದ ಅವರನ್ನು ವಾಹನ ಸವಾರರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದರು. ಆದರೂ, ಅವರು ಚಿಕಿತ್ಸೆಗೆ ಸ್ಪಂದಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು …

Read More »

ಗೋವಾದಿಂದ ಬರುವ ‘ಗೋಮಾಂಸ’ವನ್ನು ಯಾಕೆ ಸರ್ಕಾರ ತಡೆಯುತ್ತಿಲ್ಲ : ಸಿಎಂ ಇಬ್ರಾಹಿಂ

ಹುಬ್ಬಳ್ಳಿ : ಗೋವಾದಲ್ಲಿ ಗೋಹತ್ಯೆ ಜಾರಿ ಮಾಡಿದರೆ ಅಲ್ಲಿರುವ ಕ್ರೈಸ್ತರೇ ಹೊಡೆಯುತ್ತಾರೆ, ಗೋವಾದಿಂದ ಬರುವ ಗೋಮಾಂಸವನ್ನು ಯಾಕೆ ಸರ್ಕಾರ ತಡೆಯುತ್ತಿಲ್ಲ ಎಂದು ರಾಜ್ಯ ಜೆಡಿಎಸ್ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ವಾಗ್ಧಾಳಿ ನಡೆಸಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಇಬ್ರಾಹಿಂ ಬಿಜೆಪಿ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ. ರಾಜ್ಯದಲ್ಲಿ ಮಾಡಿದ ಹಾಗೆ ಗೋವಾದಲ್ಲಿ ಗೋಹತ್ಯೆ ಜಾರಿ ಮಾಡಿದರೆ ಅಲ್ಲಿರುವ ಕ್ರೈಸ್ತರು ಹೊಡೆಯುತ್ತಾರೆ, ಗೋವಾದಿಂದ ದನದ ಮಾಂಸ ರಾಜ್ಯಕ್ಕೆ ಬರುತ್ತಿದೆ, ಆದರೆ ಇದನ್ನು ಯಾಕೆ ತಡೆಯಲು ಮುಂದಾಗಿಲ್ಲ ಎಂದು ವಾಗ್ಧಾಳಿ ನಡೆಸಿದರು. ಚುನಾವಣಾ ನೀತಿ ಸಂಹಿತೆ ಜಾರಿಗೆ ಬರುವ ಮೊದಲು …

Read More »

ವೈದ್ಯರ ಎಡವಟ್ಟು- ಕೂದಲು ಶಸ್ತ್ರ ಚಿಕಿತ್ಸೆಗೆ ಹೋದ ವ್ಯಕ್ತಿ ಸಾವು

ನವದೆಹಲಿ: ಬೋಳು ತಲೆಯಿದ್ದವರು ಕೂದಲನ್ನು ಬೆಳೆಸಲು ಔಷಧಿಗಳ ಮೊರೆ ಹೋಗುವುದು ಸಾಮಾನ್ಯ. ಇತ್ತೀಚಿನ ದಿನಗಳಲ್ಲಿ ಜನರು ಕೂದಲ ಕಸಿ  ಮಾಡಿಸುವಲ್ಲಿಗೆ ವಾಲುತ್ತಿದ್ದಾರೆ. ಆದರೆ ಕೂದಲ ಕಸಿ ಮಾಡಿಸಿಕೊಳ್ಳಲು ಹೋದವರೊಬ್ಬರು ವೈದ್ಯರ ಯಡವಟ್ಟಿನಿಂದ ಜೀವವನ್ನೇ ಕಳೆದುಕೊಂಡಿರುವ ಆಘಾತಕಾರಿ ಘಟನೆಯೊಂದು ನಡೆದಿದೆ. ದೆಹಲಿಯ  ವ್ಯಕ್ತಿ ಅಥರ್ ರಶೀದ್ (30) ಕೂದಲ ಕಸಿ ಮಾಡಿಸಿಕೊಳ್ಳಲು ಕ್ಲಿನಿಕ್‌ಗೆ ಹೋಗಿದ್ದರು. ಆದರೆ ಕೂದಲ ಕಸಿ ಮಾಡಿಸಿಕೊಂಡ ಬಳಿಕ ಅವರು ತೀವ್ರವಾದ ನೋವಿನಿಂದ ಬಳಲುತ್ತಿದ್ದು, ಬಹು ಅಂಗಾಂಗ ವೈಫಲ್ಯ ಉಂಟಾಗಿ ಸಾವನ್ನಪ್ಪಿದ್ದಾರೆ. ರಶೀದ್ ತಮ್ಮ ಮನೆಯಲ್ಲಿ ಒಬ್ಬರೇ ದುಡಿಯುತ್ತಿದ್ದ ವ್ಯಕ್ತಿಯಾಗಿದ್ದು, ತಮ್ಮ ತಾಯಿ …

Read More »

You cannot copy content of this page.