Recent Posts

ಬೆಂಗಳೂರು: ದ್ವಿತೀಯ ಪಿಯುಸಿ 2023ರ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಮಾರ್ಚ್ 9ರ ಗುರುವಾರ ಆರಂಭವಾಗುವ ಪರೀಕ್ಷೆಯು ಮಾರ್ಚ್ 29ರ ತನಕ ನಡೆಯಲಿದೆ. ಮಧ್ಯದಲ್ಲಿ ಒಟ್ಟು 7 ದಿನಗಳಲ್ಲಿ ಪರೀಕ್ಷೆಗಳು ಇರುವುದಿಲ್ಲ. ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಒಟ್ಟು 36 ವಿವಿಧ ವಿಷಯಗಳು, ಭಾಷೆಗೆ ಸಂಬಂಧಿಸಿದಂತೆ ಪರೀಕ್ಷೆಗಳು ನಡೆಯಲಿವೆ. ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಲಾಗಿದೆ ಎಂದು ಮಂಡಳಿಯು ಮಾಹಿತಿ ನೀಡಿದೆ. ಪರೀಕ್ಷೆಯ ವೇಳಾಪಟ್ಟಿ: ಮಾರ್ಚ್ 9: ಕನ್ನಡ, ಅರೇಬಿಕ್ 11: ಗಣಿತ, …

Read More »

ಕುಡಿದ ಮತ್ತಿನಲ್ಲಿ ಪತ್ನಿಯನ್ನೇ ಕೊಂದ ಪಾಪಿ ಪತಿ : ತಾಯಿ ಬರ್ಬರ ಹತ್ಯೆ ಕಂಡು ಬೆಚ್ಚಿಬಿದ್ದ ಮಗ

ಮಂಗಳೂರು: ನಗರದ ತೆಂಕ ಎಕ್ಕಾರು ಗ್ರಾಮದಲ್ಲಿ ಕಂಠ ಪೂರ್ತಿ ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ಪತ್ನಿಯೊಂದಿಗೆ ಜಗಳವಾಡಿ ಕೊಲೆಗೈದಿರುವ ಘಟನೆ ನಡೆದಿದೆ. ದುರ್ಗೇಶ್ ಎಂಬಾತ ಕುಡಿದ ಮತ್ತಿನಲ್ಲಿ ತನ್ನ ಹೆಂಡತಿ ಸರಿತಾಳೊಂದಿಗೆ ಜಗಳವಾಡಿದ್ದಾನೆ. ಜಗಳ ತಾರಕಕ್ಕೇರಿ ಮರದ ರೀಪಿನಿಂದ ಹೊಡೆದು ಪತ್ನಿಯನ್ನು ಕೊಲೆ ಮಾಡಿದ್ದಾನೆ. ತಾಯಿಯ ಹತ್ಯೆ ಕಂಡು ಮಗ ರಾಹುಲ್ ಹೆದರಿ ತನ್ನ ಅಜ್ಜಿ ಮನೆಗೆ ಓಡಿ ಹೋಗಿದ್ದಾನೆ. ಸ್ವತಃ ಆರೋಪಿಯೇ ಇಂದು ಬೆಳಗ್ಗೆ ತನ್ನ ಅಣ್ಣ ಮಧುಗೆ ಕರೆ ಮಾಡಿ ಸರಿತಾ ಮೃತಪಟ್ಟಿರುವುದಾಗಿ ತಿಳಿಸಿದ್ದಾನೆ. ಮಧು ಸ್ಥಳಕ್ಕೆ ಬಂದು ನೋಡಿದಾಗ ದುರ್ಗೇಶನೇ ಸರಿತಾಳನ್ನು …

Read More »

ಬಸ್ -ಟಿಪ್ಪರ್ ಮುಖಾಮುಖಿ; ಮಹಿಳೆ ಸಾವು, 15 ಮಂದಿಗೆ ಗಾಯ

ಚಿಕ್ಕಮಗಳೂರು : ಎನ್.ಆರ್.ಪುರ ತಾಲೂಕಿನ ಮುತ್ತಿನ ಕೊಪ್ಪದಲ್ಲಿ ಖಾಸಗಿ ಬಸ್ ಮತ್ತು ಟಿಪ್ಪರ್ ನಡುವೆ ಸೋಮವಾರ ಮುಖಾಮುಖಿ ಢಿಕ್ಕಿ ಸಂಭವಿಸಿದ್ದು, ಅವಘಡದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಬಸ್ ನಲ್ಲಿದ್ದ 15 ಮಂದಿ ಪ್ರಯಾಣಿಕರಿಗೆ ಗಾಯಗಳಾಗಿವೆ.   ಅವಘಡದ ಬಳಿಕ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ರತ್ನಮ್ಮ ಎಂಬ ಮಹಿಳೆ ಸಾವನ್ನಪ್ಪಿದ್ದಾರೆ. ಗಾಯಳುಗಳನ್ನು ಎನ್.ಆರ್ ಪುರ ಹಾಗೂ ಶಿವಮೊಗ್ಗದ ಆಸ್ಪತ್ರೆಗಳಿಗೆ ರವಾನೆ ಮಾಡಲಾಗಿದೆ. ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ವಿವವರಗಳನ್ನು ನಿರೀಕ್ಷಿಸಲಾಗುತ್ತಿದೆ.

Read More »

You cannot copy content of this page.