Recent Posts

ಕುಡಿದ ಮತ್ತಿನಲ್ಲಿ ಪತ್ನಿಯನ್ನೇ ಕೊಂದ ಪಾಪಿ ಪತಿ : ತಾಯಿ ಬರ್ಬರ ಹತ್ಯೆ ಕಂಡು ಬೆಚ್ಚಿಬಿದ್ದ ಮಗ

ಮಂಗಳೂರು: ನಗರದ ತೆಂಕ ಎಕ್ಕಾರು ಗ್ರಾಮದಲ್ಲಿ ಕಂಠ ಪೂರ್ತಿ ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ಪತ್ನಿಯೊಂದಿಗೆ ಜಗಳವಾಡಿ ಕೊಲೆಗೈದಿರುವ ಘಟನೆ ನಡೆದಿದೆ. ದುರ್ಗೇಶ್ ಎಂಬಾತ ಕುಡಿದ ಮತ್ತಿನಲ್ಲಿ ತನ್ನ ಹೆಂಡತಿ ಸರಿತಾಳೊಂದಿಗೆ ಜಗಳವಾಡಿದ್ದಾನೆ. ಜಗಳ ತಾರಕಕ್ಕೇರಿ ಮರದ ರೀಪಿನಿಂದ ಹೊಡೆದು ಪತ್ನಿಯನ್ನು ಕೊಲೆ ಮಾಡಿದ್ದಾನೆ. ತಾಯಿಯ ಹತ್ಯೆ ಕಂಡು ಮಗ ರಾಹುಲ್ ಹೆದರಿ ತನ್ನ ಅಜ್ಜಿ ಮನೆಗೆ ಓಡಿ ಹೋಗಿದ್ದಾನೆ. ಸ್ವತಃ ಆರೋಪಿಯೇ ಇಂದು ಬೆಳಗ್ಗೆ ತನ್ನ ಅಣ್ಣ ಮಧುಗೆ ಕರೆ ಮಾಡಿ ಸರಿತಾ ಮೃತಪಟ್ಟಿರುವುದಾಗಿ ತಿಳಿಸಿದ್ದಾನೆ. ಮಧು ಸ್ಥಳಕ್ಕೆ ಬಂದು ನೋಡಿದಾಗ ದುರ್ಗೇಶನೇ ಸರಿತಾಳನ್ನು …

Read More »

ಬಸ್ -ಟಿಪ್ಪರ್ ಮುಖಾಮುಖಿ; ಮಹಿಳೆ ಸಾವು, 15 ಮಂದಿಗೆ ಗಾಯ

ಚಿಕ್ಕಮಗಳೂರು : ಎನ್.ಆರ್.ಪುರ ತಾಲೂಕಿನ ಮುತ್ತಿನ ಕೊಪ್ಪದಲ್ಲಿ ಖಾಸಗಿ ಬಸ್ ಮತ್ತು ಟಿಪ್ಪರ್ ನಡುವೆ ಸೋಮವಾರ ಮುಖಾಮುಖಿ ಢಿಕ್ಕಿ ಸಂಭವಿಸಿದ್ದು, ಅವಘಡದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಬಸ್ ನಲ್ಲಿದ್ದ 15 ಮಂದಿ ಪ್ರಯಾಣಿಕರಿಗೆ ಗಾಯಗಳಾಗಿವೆ.   ಅವಘಡದ ಬಳಿಕ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ರತ್ನಮ್ಮ ಎಂಬ ಮಹಿಳೆ ಸಾವನ್ನಪ್ಪಿದ್ದಾರೆ. ಗಾಯಳುಗಳನ್ನು ಎನ್.ಆರ್ ಪುರ ಹಾಗೂ ಶಿವಮೊಗ್ಗದ ಆಸ್ಪತ್ರೆಗಳಿಗೆ ರವಾನೆ ಮಾಡಲಾಗಿದೆ. ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ವಿವವರಗಳನ್ನು ನಿರೀಕ್ಷಿಸಲಾಗುತ್ತಿದೆ.

Read More »

ಬಂಟ್ವಾಳ: ಟ್ಯಾಬ್ಲೆಟ್‌ ಸೇವಿಸಿ ʼಜೀವನ್ಮರಣ ಹೋರಾಟʼದಲ್ಲಿ ಬಾಲಕಿ

ಬಂಟ್ವಾಳ : ಅತಿಯಾಗಿ ತಲೆ ನೋವಿನ ಮಾತ್ರೆ ಸೇವಿಸಿ ಅಸ್ವಸ್ಥಗೊಂಡು ಶಾಲಾ ಬಾಲಕಿಯೋರ್ವಳು ಆಸ್ಪತ್ರೆಗೆ ದಾಖಲಾಗಿ ಜೀವನ್ಮರಣ ಹೋರಾಟ ನಡೆಸುತ್ತಿರುವ ಘಟನೆ ವರದಿಯಾಗಿದೆ.   ಕುಮ್ಡೆಲು ನಿವಾಸಿಯಾಗಿರುವ ಬಾಲಕಿ ಮಂಗಳೂರು ಖಾಸಗಿ ಕಾಲೇಜಿನ ಅಪ್ರಾಪ್ತ ಬಾಲಕಿಯಾಗಿದ್ದಾಳೆ. ಬಡತನದ ಕುಟುಂಬದ ಬಾಲಕಿಯಾಗಿರುವ ಈಕೆಯ ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಬಾಲಕಿ ಅತಿಯಾದ ತಲೆನೋವಿನಿಂದ ಬಳಲುತ್ತಿದ್ದಳು ಎನ್ನಲಾಗಿದೆ. ಸದ್ಯ ಸ್ಪಷ್ಟವಾದ ಯಾವುದೇ ಕಾರಣ ತಿಳಿದು ಬಂದಿಲ್ಲ. ಒಂದು ಕಡೆಯಿಂದ ತಾಯಿಯ ಅನಾರೋಗ್ಯ, ಇನ್ನೊಂದು ಕಡೆಯಿಂದ ಮೈಗ್ರೇನ್ ಸಮಸ್ಯೆ ಇವೆಲ್ಲವೂಗಳ ಜೊತೆ ಅತಿಯಾದ ಬಡತನದಿಂದ ಬೇಸತ್ತ ವಿದ್ಯಾರ್ಥಿನಿ ಮಾತ್ರೆ ತೆಗೆದಕೊಂಡಿದ್ದಾಳಾ? …

Read More »

You cannot copy content of this page.