Recent Posts

ಉಡುಪಿ ಸಿಟಿ ಬಸ್ ನಿಲ್ದಾಣ ಬೀದಿ ವ್ಯಾಪಾರಿಗಳ ಬೀದಿರಂಪಾಟ..!

ಸಿಟಿ ಬಸ್ ನಿಲ್ದಾಣದಿಂದ ಉಡುಪಿ ಸರ್ವಿಸ್ ಬಸ್ ನಿಲ್ದಾಣಕ್ಕೆ ಹೋಗುವ ದಾರಿಯಲ್ಲಿ ತರಕಾರಿ ಹಣ್ಣು ಹಂಪಲು ಹಾಗೂ ಇನ್ನಿತರ ವಸ್ತುಗಳನ್ನು ಹರಡಿಕೊಂಡು ಸಾರ್ವಜನಿಕರಿಗೆ ಸುಗಮವಾಗಿ ನಡೆದಾಡಲು ಅನಾನುಕೂಲವಾಗುವಂತೆ ಪುಟ್ಪಾತ್ ಅನ್ನು ವ್ಯಾಪಾರಿಗಳು ಆಕ್ರಮಿಸಿಕೊಂಡಿದ್ದಾರೆ ಇವರೆಲ್ಲರೂ ಸ್ಥಳೀಯರಾಗಿರದೆ, ಹಾವೇರಿ ಬಿಜಾಪುರ ಮೂಲದವರಾಗಿದ್ದಾರೆ. ಸದಾ ಗಲಾಟೆ ಹೊಡೆದಾಡಿಕೊಳ್ಳುವುದು ಇಲ್ಲಿ ಮಾಮೂಲಿಯಾಗಿದೆ ಈ ಬಗ್ಗೆ ಸ್ಥಳೀಯರು ನಗರಸಭೆಯ ಗಮನಕ್ಕೆ ತಂದರು ಯಾವುದೇ ಪ್ರಯೋಜನ ಆಗಲಿಲ್ಲ ಯಾವುದೇ ಅನುಮತಿ ಇಲ್ಲದೆ ಅಕ್ರಮವಾಗಿ ಫುಟ್ಪಾತ್ ಮೇಲೆ ವ್ಯಾಪಾರ ಮಾಡುವ ಇವರನ್ನು ಕೂಡಲೆ ಖಾಯಂ ಆಗಿ ತೆರವುಗೊಳಿಸಿ ಜನರಿಗೆ ಸುಗಮವಾಗಿ ನಡೆದಾಡಲು ಅವಕಾಶ …

Read More »

ಉಡುಪಿ: ಬಸ್ ನಿಲ್ದಾಣದ ಬಳಿ ಇರುವ ಹೊಟೇಲ್ ನಲ್ಲಿ ಬೆಂಕಿ ಅವಘಡ

ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿ ಇರುವ ಟಾಪ್’ಇನ್ ಟೌನ್ ಹೋಟೆಲ್ ವೊಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಬೆಂಕಿ ಅವಘಡ ಸಂಭವಿಸಿದ ಘಟನೆ ಭಾನುವಾರ ಬೆಳಿಗ್ಗೆ ವರದಿಯಾಗಿದೆ. ನಗರದ ಮಧ್ಯಭಾಗದಲ್ಲಿರುವ ಟಾಪ್ ಇನ್ ಟೌನ್ ಹೋಟೆಲ್ ನ ಗ್ಯಾಸ್ ಸೋರಿಕೆಯಾಗಿ ಬೆಂಕಿ ಹತ್ತಿಕೊಂಡಿತ್ತು, ಹೊಟೇಲ್ ಸಿಬ್ಬಂದಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದು ನಂತರ ಅಗ್ನಿ ಶಾಮಕ ದಳದ ಸಹಾಯ ಪಡೆದಿದ್ದಾರೆ. ಬೆಂಕಿ ಹತೋಟಿಗೆ ಬಾರದ ಕಾರಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದರು. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದು, ಆ …

Read More »

15 ವರ್ಷ ಹಳೆಯದಾದ ವಾಹನಗಳಿಗೆ ಕೇಂದ್ರ ಸರ್ಕಾರ ಮಹತ್ವದ ತೀರ್ಮಾನ..!

15 ವರ್ಷ ಹಳೆಯದಾದ ಸರ್ಕಾರಿ ವಾಹನಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದೆ. ಈ ವಾಹನಗಳನ್ನು ಗುಜರಿಗೆ ಹಾಕಲಿದ್ದು, ಬದಲಾಗಿ ಹೊಸ ವಾಹನಗಳನ್ನು ಖರೀದಿಸಲಾಗುತ್ತದೆ. ಹೊಸ ವಾಹನಗಳಿಗೆ ಹೋಲಿಸಿದರೆ ಈ ವಾಹನಗಳು ಶೇಕಡಾ 10 ರಿಂದ 12 ರಷ್ಟು ಹೆಚ್ಚು ವಾಯುಮಾಲಿನ್ಯ ಉಂಟು ಮಾಡುತ್ತಿರುವ ಕಾರಣಕ್ಕೆ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಈ ಯೋಜನೆಯ ಕಡತಕ್ಕೆ ಗುರವಾರದಂದು ಸಹಿ ಹಾಕಿದ್ದಾರೆ. ರಾಜ್ಯಗಳಿಗೂ ಈ ಯೋಜನೆಯ ಮಾಹಿತಿಯನ್ನು ಕಳುಹಿಸಿಕೊಡಲಾಗಿದ್ದು, ಇದನ್ನು ತಮ್ಮ ತಮ್ಮ …

Read More »

You cannot copy content of this page.