Recent Posts

ಪುತ್ತೂರು: ಮಹಿಳೆಯ ಮೃತದೇಹ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆ..!

ಪುತ್ತೂರು: ಮಹಿಳೆಯೋರ್ವರ ಮೃತದೇಹ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕುಂಬ್ರದಲ್ಲಿ ನಡೆದಿದೆ. ನಬೀಸ ಎಂಬವರು ನ.25 ರಂದು ರಾತ್ರಿ ಮನೆಯಲ್ಲಿ ಊಟ ಮುಗಿಸಿ ಮಲಗಿದ್ದು, ನ.26ರಂದು ಬೆಳಿಗ್ಗೆ ಮನೆಯ ಮುಂಭಾಗದಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ನಬೀಸ ಅವರೇ ಬೆಂಕಿ ಹಚ್ಚಿಕೊಂಡರೆ ಅಥವಾ ಆಕಸ್ಮಿಕವಾಗಿ ಬೆಂಕಿ ತಗುಲಿತೇ ಎಂಬ ವಿಚಾರ ತನಿಖೆ ನಂತರವಷ್ಟೇ ತಿಳಿಯಬೇಕಿದೆ. ನಬೀಸ ಅವರು ಅಲ್ಪ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗುತ್ತಿದೆ. ಮೃತರು ಪತಿ ಮತ್ತು ಮಕ್ಕಳನ್ನು ಅಗಲಿದ್ದಾರೆ.

Read More »

ಉಡುಪಿ: ಮುದ್ರಾ ಲೋನ್ ಹೆಸರಿನಲ್ಲಿ 2 ಲಕ್ಷ ರೂ. ವಂಚನೆ

ಉಡುಪಿ : ಮುದ್ರಾ ಲೋನ್ ಹೆಸರಿನಲ್ಲಿ ಸಾಲ ಕೊಡುವುದಾಗಿ ವ್ಯಕ್ತಿಯೊಬ್ಬರಿಗೆ 2 ಲಕ್ಷ ರೂ. ವಂಚಿಸಿದ ಘಟನೆ ನಡೆದಿದೆ. ಜಿಲ್ಲೆಯ ನಿವಾಸಿ ಸತೀಶ್ ಜೈನ್ ಅವರಿಗೆ ಅಪರಿಚಿತನೋರ್ವ ಮುದ್ರಾ ಲೋನ್ ಸಂಸ್ಥೆಯ ಮ್ಯಾನೇಜರ್ ಎಂದು ಕರೆ ಮಾಡಿ ಮುದ್ರಾ ಲೋನ್ ನೀಡುವುದಾಗಿ ತಿಳಿಸಿದ್ದ. ಲೋನ್ ಗೆ ಸಂಬಂಧಿಸಿ ದಾಖಲೆಗಳನ್ನು ಪಡೆದು, ನೋಂದಣಿ ಶುಲ್ಕ 3,200 ರೂ. ಜಮೆ ಮಾಡುವಂತೆ ತಿಳಿಸಿದ್ದ. ಶುಲ್ಕ ಪಾವತಿಸಿದ ಅನಂತರ ಪ್ರೊಸೆಸ್ ಚಾರ್ಜ್, ಇನ್ಸುರೆನ್ಸ್, ಚಾರ್ಜ್, ಎನ್‌ಒಸಿ, ಆರ್‌ಬಿಐ ಟ್ಯಾಕ್ಸ್ ಎಂದು ನಂಬಿಸಿ ಹಣ ಕಟ್ಟುವಂತೆ ತಿಳಿಸಿದ್ದ. ಸತೀಶ್ ಜೈನ್ …

Read More »

ಪಡುಬಿದ್ರಿ: ರುಂಡ ಕತ್ತರಿಸಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

 ಪಡುಬಿದ್ರಿ: ಪಡುಬಿದ್ರಿ ಪಾದೆಬೆಟ್ಟುವಿನ ರೈಲ್ವೆ ಬ್ರಿಡ್ಜ್ ಬಳಿಯ ರೈಲ್ವೆ ಹಳಿಯಲ್ಲಿ ಯುವಕನ ಶವವೊಂದು ಶುಕ್ರವಾರ ರಾತ್ರಿ ಪತ್ತೆಯಾಗಿದೆ. ಪಕ್ಕದ ಕಲೋನಿಯ ನಿವಾಸಿ ಸುರೇಶ್ (33) ಮೃತ ಪಟ್ಟ ಯುವಕ. ಇದು ಆಕಸ್ಮಿಕವೊ ಆತ್ಮಹತ್ಯೆಯೋ ಎಂಬುದು ಪೊಲೀಸ್ ತನಿಖೆಯಿಂದ ತಿಳಿಯ ಬೇಕಾಗಿದೆ. ಸ್ಥಳಕ್ಕೆ ಪಡುಬಿದ್ರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More »

You cannot copy content of this page.