Recent Posts

ಕಾಪು: ರೈಲ್ವೆ ನಿಲ್ದಾಣದಲ್ಲಿ ಹೃದಯಾಘಾತ- ಬ್ಯಾಂಕ್ ಸಿಬ್ಬಂದಿ ಮೃತ್ಯು

ಕಾಪು: ಭಾರತ್‌ ಬ್ಯಾಂಕ್‌ ವಿಲೇಪಾರ್ಲೆ ಪೂರ್ವ ಶಾಖೆಯ ಉಪಪ್ರಬಂಧಕ, ಮುಂಬಯಿ ಬಿಲ್ಲವರ ಅಸೋಸಿಯೇಶನ್‌ ಸದಸ್ಯ ಸುಧಾಕರ್‌ ಟಿ. ಅಂಚನ್‌ (52) ಸಂಬಂಧಿಕರ ಮದುವೆಗೆ ಆಗಮಿಸಿ, ಮುಂಬಯಿಗೆ ತೆರಳುತ್ತಿದ್ದ ವೇಳೆ ರೈಲ್ವೇ ನಿಲ್ದಾಣದಲ್ಲೇ ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ. ಮದುವೆಗಾಗಿ ಊರಿಗೆ ಬಂದಿದ್ದು, ಮದುವೆ ಮುಗಿಸಿ ಮುಂಬಯಿಗೆ ಹಿಂದಿರುಗುತ್ತಿದ್ದ ವೇಳೆ ಥಾಣೆಯಲ್ಲಿ ರೈಲಿನಿಂದ ಇಳಿಯುತ್ತಿದ್ದಾಗ ಹೃದಯಾಘಾತಕ್ಕೊಳಗಾಗಿ ಅಸುನೀಗಿದ್ದಾರೆ. ಕಟಪಾಡಿಯವರಾಗಿರುವ ಅವರು ಮುಂಬಯಿಯಲ್ಲಿ ನೆಲೆಸಿದ್ದು ಭಾರತ್‌ ಬ್ಯಾಂಕ್‌ ಉದ್ಯೋಗಿಯಾಗಿ, ಬಿಲ್ಲವ ಸಮಾಜದ ಸಂಘಟನೆಯ ಪ್ರಮುಖರಾಗಿ ಗುರುತಿಸಲ್ಪಟ್ಟಿದ್ದರು. ಇವರ ನಿಧನಕ್ಕೆ ಹಲವು ಮಂದಿ ಗಣ್ಯರು ಸಂತಾಪ ಸೂಚಿಸಿದ್ದಾರೆ. ಮೃತರು ತಾಯಿ, ಪತ್ನಿ, …

Read More »

ದಿಡೀರ್‌ ಅಸ್ವಸ್ಥರಾದ ಹಿರಿಯ ನಟ ಕಮಲ್ ಹಾಸನ್ -ಆಸ್ಪತ್ರೆಗೆ ದಾಖಲು

ಚೆನ್ನೈ: ಹಿರಿಯ ನಟ ಕಮಲ್ ಹಾಸನ್ ಅಸ್ವಸ್ಥರಾಗಿದ್ದು ಚೆನ್ನೈನ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ. ಇದೇ ವೇಳೆ ಕಮಲ್ ಹಾಸನ್ ಅವರು ಸಾಮಾನ್ಯ ವೈದ್ಯಕೀಯ ತಪಾಸಣೆ ಸಂಬಂಧ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ಹೇಳಿವೆ. ಬಿಗ್ ಬಾಸ್ ತಮಿಳು ಆವೃತ್ತಿಯನ್ನು ಕಮಲ್ ಹಾಸನ್ ನಿರೂಪಣೆ ಮಾಡುತ್ತಿದ್ದಾರೆ. ಇದರ ಜತೆಗೆ ಇತರ ಹಲವು ಬಿಗ್ ಬಜೆಟ್ ಚಿತ್ರಗಳಲ್ಲಿ ಕೂಡ ಕಮಲ್ ಹಾಸನ್ ಬ್ಯುಸಿಯಾಗಿದ್ದಾರೆ.ಕಮಲ್ ಹಾಸನ್ ಶೀಘ್ರ ಚೇತರಿಸಿಕೊಳ್ಳಲಿ ಎಂದು ಅಭಿಮಾನಿಗಳು ಹಾರೈಸಿದ್ದಾರೆ.  

Read More »

ಧರ್ಮಸ್ಥಳದಲ್ಲಿ ಭೀಕರ ರಸ್ತೆ ಅಪಘಾತ: ಓರ್ವ ಸಾವು-7ಮಂದಿಗೆ ಗಂಭೀರ

ಬೆಳ್ತಂಗಡಿ: ಬೊಲೇರೋ ವಾಹನ ಹಾಗೂ ಸರಕಾರಿ ಬಸ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ಏಳು ಜನರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಕುದ್ರಾಯದಲ್ಲಿ ನಡೆದಿದೆ. ಇಲ್ಲಿನ ಪ್ರಸಿದ್ಧ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಗಮಿಸುತ್ತಿದ್ದ ಮಂಡ್ಯ ಜಿಲ್ಲೆಯ ಹತ್ತು ಮಂದಿಯ ಕುಟುಂಬ ನಿಡ್ಲೆ ಗ್ರಾಮದ ಕುದ್ರಾಯ ಎಂಬಲ್ಲಿ ಬೊಲೇರೋ ವಾಹನವನ್ನು ರಸ್ತೆಯ ಬಲಕ್ಕೆ ಪಾರ್ಕ್ ಮಾಡಿ ನಿಲ್ಲಿಸಿ ಇಳಿದು ಅಂಗಡಿ ಹೋಗುತ್ತಿದ್ದರು. ಈ ವೇಳೆ ಧರ್ಮಸ್ಥಳ ಡಿಪೋದಿಂದ ಮೈಸೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನಿಂತಿದ್ದವರಿಗೆ ಹಾಗೂ …

Read More »

You cannot copy content of this page.