Recent Posts

ಮುಲ್ಕಿ: ಇಸ್ಪೀಟ್ ಅಡ್ಡೆ ಮೇಲೆ ದಾಳಿ – ಆರು ಜನರ ಬಂಧನ

ಮುಲ್ಕಿ: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾರ್ನಾಡು ಗ್ರಾಮದ ಲಿಂಗಪ್ಪಯ್ಯಕಾಡು, ಯಲ್ಲಮ್ಮ ದೇವಸ್ಥಾನದ ಬಳಿ ಸಾರ್ವಜನಿಕ ಸ್ಥಳದಲ್ಲಿ ಜೂಜಾಟ ಆಡುತ್ತಿದ್ದ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಆರು ಮಂದಿ ಆರೋಪಿಗಳನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳನ್ನು ಸ್ಥಳೀಯ ನಿವಾಸಿಗಳಾದ ಸಂತೋಷ್, ಬಶೀರ್, ಪ್ರದೀಪ್, ಮುಸ್ತಾಫ, ಆದಿವಪ್ಪ ಸೋಮ ಗುಂಡ, ವಿಶ್ವನಾಥ ಎಂದು ಗುರುತಿಸಲಾಗಿದೆ. ಆರೋಪಿಗಳು ಇಸ್ಪೀಟು ಜೂಜಾಟಕ್ಕೆ ಪಣವಾಗಿಟ್ಟ ಒಟ್ಟು 3350 ರೂಪಾಯಿ, ಜೂಜಾಟಕ್ಕೆ ಬಳಸಿದ್ದ ಇಸ್ಪೀಟುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Read More »

ಆಸ್ಪತ್ರೆಯಲ್ಲಿ ಸಾವು- ಬದುಕಿನ ನಡುವೆ ನರಳುತ್ತಿರುವ ಶಂಕಿತ ಉಗ್ರ ‘ಶಾರೀಕ್’ : ಪೊಲೀಸರಲ್ಲಿ ಹೆಚ್ಚಿದ ಟೆನ್ಷನ್‌

ಮಂಗಳೂರು: ಬಾಂಬ್ ಸ್ಫೋಟದ ಆರೋಪಿ ಉಗ್ರ ಶಾರೀಕ್ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ. ಪೊಲೀಸರು ಆತನ ಚೇತರಿಕೆ ಕಾಯುತ್ತಿದ್ದು, ಯಾವಾಗ ಬಾಯಿ ಬಿಡ್ತಾನೆ ಅಂತ ಕಾದು ಕುಳಿತಿದ್ದಾರೆ. ಇದೀಗ ಮತ್ತೊಂದು ಟೆನ್ಷನ್‌ ಶುರುವಾಗಿದೆ. ಆ ಬಳಿಕವೇ ಉಗ್ರನ ಕೃತ್ಯದ ಆಳ ಅಗಲ ತಿಳಿಯಲಿದೆ. ಒಂದು ವೇಳೆ ಬದುಕುಳಿಯದೇ ಇದ್ರೆ ಎಲ್ಲವೂ ಆತನೊಂದಿಗೇ ಹೋಗುತ್ತೆ ಅನ್ನೋ ಆತಂಕ ಶುರುವಾಗಿದೆ. ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ದ ರೂವಾರಿ ಶಂಕಿತ ಉಗ್ರ ಶಾರೀಕ್ ಶೇ. 45ರಷ್ಟು ಸುಟ್ಟಗಾಯಗಳೊಂದಿಗೆ ಗಂಭೀರ ಸ್ಥಿತಿಯಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದಾನೆ. …

Read More »

ಸುಬ್ರಹ್ಮಣ್ಯ: “ನನ್ನನ್ನು ಯಾರೂ ಅಪಹರಿಸಿಲ್ಲ” ನಾಪತ್ತೆಯಾಗಿದ್ದ ಮಹಿಳೆ ವೀಡಿಯೊ ವೈರಲ್

ಸುಬ್ರಹ್ಮಣ್ಯ: ನನ್ನನ್ನು ಯಾರೂ ಅಪಹರಿಸಿಲ್ಲ, ಪ್ರೀತಿಸಿದವರೊಂದಿಗೆ ನಾನೇ ಸ್ವಇಚ್ಛೆಯಿಂದ ಹೋಗಿದ್ದೇನೆ ಎಂದು ಸುಬ್ರಹ್ಮಣ್ಯದಿಂದ ನಾಪತ್ತೆಯಾಗಿದ್ದ ಗ್ರಾಮ ಪಂಚಾಯಿತಿ ಸದಸ್ಯೆ ಭಾರತಿ ಹೇಳಿರುವ ವೀಡಿಯೊ ಇದೀಗ ವೈರಲ್ ಆಗುತ್ತಿದೆ. ನಾನಾಗಿಯೇ ಬಂದಿದ್ದೇನೆ, ನನ್ನನ್ನು ಯಾರೂ ಅಪಹರಿಸಿಲ್ಲ. ನಾನು ಒಬ್ಬರನ್ನು ಮನೆಯ ಹತ್ತಿರ ಬರಲು ಹೇಳಿದ್ದೆ. ಅವರು ಬಂದು ನನ್ನನ್ನು ಕರೆದುಕೊಂಡು ಹೋದ್ರು. ನಾವು ಕಳೆದ 5 ವರ್ಷಗಳಿಂದ ಲವ್ ಮಾಡ್ತಾ ಇದ್ದೇವೆ. ಈಗಲೂ ಮಾಡ್ತಾ ಇದ್ದೇವೆ. ಮದುವೆಗೆ ಮುಂಚೆನೂ ಲವ್ ಮಾಡ್ತಿದ್ದೆ. ಇದರಿಂದಾಗಿ ಯಾರಿಗೂ ತೊಂದರೆ ಕೊಡಬೇಡಿ. ಯಾರ ಹತ್ತಿರವೂ ಕೇಳುವುದೂ ಬೇಡ. ನಮಗೆ ತೊಂದರೆ …

Read More »

You cannot copy content of this page.