Recent Posts

BIGG NEWS : ‘ಪ್ರಧಾನಿ ಮೋದಿ’ಗೆ ಜೀವ ಬೆದರಿಕೆ : ‘ಪೊಲೀಸ’ರಿಗೆ ಸಂದೇಶ ಕಳುಹಿಸಿ, ಕೊಲ್ಲುವುದಾಗಿ ಧಮ್ಕಿ

ಮುಂಬೈ : ಪ್ರಧಾನಿ ನರೇಂದ್ರ ಮೋದಿಗೆ ಜೀವ ಬೆದರಿಕೆ ಹಾಕಲಾಗಿದ್ದು, ಮುಂಬೈ ಟ್ರಾಫಿಕ್ ಪೊಲೀಸರ ವಾಟ್ಸಾಪ್ ಸಂಖ್ಯೆಯ ಆಡಿಯೋ ಸಂದೇಶದಲ್ಲಿ ಪ್ರಧಾನಿ ಮೋದಿ ಅವ್ರಿಗೆ ಜೀವ ಬೆದರಿಕೆ ಹಾಕಲಾಗಿದೆ. ಪ್ರಧಾನಿ ಮೋದಿಯವರನ್ನ ಕೊಲ್ಲುವುದಾಗಿ ಕಿಡಿಗೇಡಿಗಳು ಮುಂಬೈ ಟ್ರಾಫಿಕ್ ಪೊಲೀಸರಿಗೆ ಅಡಿಯೋ ಸಂದೇಶ ಕಳುಹಿಸಿದ್ದಾರೆ. ಇನ್ನು ಈ ಸಂದೇಶ ಕಳುಹಿಸಿದ್ದು ಯಾರು ಎನ್ನುವ ಹುಡುಕಾಟದಲ್ಲಿ ಪೊಲೀಸರಿದ್ದಾರೆ. ಈ ಪ್ರಕರಣ ಮಹಾರಾಷ್ಟ್ರದ ವರ್ಲಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Read More »

ಬೈಂದೂರು: ಯಕ್ಷಗಾನ ಕಲಾವಿದನ ಮನೆಯಲ್ಲಿ ಕಳವು

ಬೈಂದೂರು: ಫೇಸ್‌ಬುಕ್‌ನಲ್ಲಿ ಪರಿಚಯವಾದ ಗೆಳೆಯ ಯಕ್ಷಗಾನ ಕಲಾವಿದರೊಬ್ಬರ ಮನೆಗೆ ನುಗ್ಗಿ ಸೊತ್ತುಗಳನ್ನು ಕಳವು ಮಾಡಿರುವ ಘಟನೆ  ಶಿರೂರು ಮೇಲ್ಪೇಟೆ ಎಂಬಲ್ಲಿ ನಡೆದಿದೆ. ಮೇಲ್ಪೇಟೆ ಕೊಠಡಿಯಲ್ಲಿ ವಾಸವಾಗಿರುವ ಯಕ್ಷಗಾನ ಕಲಾವಿದ ಸಂತೋಷ್ ಮೊಗವೀರ(34) ಎಂಬವರಿಗೆ ಗುರುರಾಜ್ ಎಂಬಾತನನ್ನು ಫೇಸ್‌ಬುಕ್‌ನಲ್ಲಿ 2 ವರ್ಷಗಳ ಹಿಂದೆ ಪರಿಚಯವಾಗಿತ್ತು. ಗುರುರಾಜ್ ನ.9ರಂದು  ಸಂತೋಷ್ ಅವರ ಕೊಠಡಿಗೆ ಬಂದು ಉಳಿದುಕೊಂಡಿದ್ದನು. ನ.12ರಂದು ಸಂತೋಷ್ ಹಾಗೂ ಗುರುರಾಜ್ ಹೆರಿಕುದ್ರು ಎಂಬಲ್ಲಿ ಕಾರ್ಯಕ್ರಮಕ್ಕೆ ಹೋಗಿದ್ದರು. ಅಲ್ಲಿ ಗುರುರಾಜ್, ಸಂತೋಷ್‌ಗೆ ಹೇಳದೆಯೇ ಮೇಲ್ಪೆಟೆಗೆ ಬಂದು ಕೊಠಡಿಯ ಬೀಗವನ್ನು ಒಡೆದು ಬ್ಯಾಗ್‌ನಲ್ಲಿಟ್ಟಿದ್ದ ಚಿನ್ನದ ಚೈನ್, ಚಿನ್ನದ ಉಂಗುರ, …

Read More »

BREAKING NEWS : ಚಿತ್ರದುರ್ಗದಲ್ಲಿ ಸಿಎಂ ಬೊಮ್ಮಾಯಿ ‘ಎಸ್ಕಾರ್ಟ್ ವಾಹನ’ ಪಲ್ಟಿ : ಪೊಲೀಸ್ ಸಿಬ್ಬಂದಿಗಳಿಗೆ ಗಾಯ

ಚಿತ್ರದುರ್ಗ : ಸಿಎಂ ಬೊಮ್ಮಾಯಿ ‘ಎಸ್ಕಾರ್ಟ್ ವಾಹನ’ ಪಲ್ಟಿಯಾಗಿ ಹಲವರಿಗೆ ಗಾಯಗಳಾದ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಬಳಿ ನಡೆದಿದೆ. ಅಫಘಾತದಲ್ಲಿ ಸಿಇಎನ್ ಸಿಪಿಐ ರಮಾಕಾಂತ್ ಸೇರಿ ಹಲವರಿಗೆ ಗಂಭೀರ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ವಾಣಿವಿಲಾಸ ಡ್ಯಾಂನಿಂದ ಹಿರಿಯೂರುಗೆ ಬರುವ ವೇಳೆ ಸಿಎಂ ಬೊಮ್ಮಾಯಿಗೆ ಎಸ್ಕಾರ್ಟ್ ನೀಡಿದ ಪೊಲೀಸ್ ವಾಹನ ಪಲ್ಟಿಯಾಗಿದೆ. ವಾಣಿವಿಲಾಸ ಡ್ಯಾಮ್ ನಿಂದ ಬರುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಸಿಎಂ ಬೊಮ್ಮಾಯಿ ‘ಎಸ್ಕಾರ್ಟ್ ವಾಹನ’ ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬ …

Read More »

You cannot copy content of this page.