Recent Posts

BREAKING NEWS : ಕರಾವಳಿಯಲ್ಲಿ ‘ಮತ್ತೊಂದು ಲವ್‌ಜಿಹಾದ್‌ ‘ : ಹಿಂದೂ ಯುವತಿಯೊಂದಿಗೆ ಮುಸ್ಲಿಂ ಯುವಕ

ಕರಾವಳಿ ಭಾಗದಲ್ಲಿ ಕೋಮು ಸಂಘರ್ಷಕ್ಕೆ ಮತ್ತೊಂದು ಲವ್‌ಜಿಹಾದ್‌ ಸಿದ್ಧವಾಗಿದೆ ಹಿಂದೂ ಯುವತಿಯೊಂದಿಗೆ ಬೆಂಗಳೂರಿನ ಮುಸ್ಲಿಂ ಯುವಕ ವಿವಾಹವಾಗಿರುವ ಸಂದೇಶ ಸೋಷಿಯಲ್‌ ಮಿಡಿಯಾಗಳಲ್ಲಿ ರವಾನೆಯಾಗುತ್ತಿದೆ. ಈ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ ಪ್ರಸ್ತುತ ಬೆಂಗಳೂರಿನಲ್ಲಿ ವಾಸ್ತವ್ಯ ಹೊಂದಿರುವ ಪುತ್ತೂರು ಮೂಲದ ಹಿಂದೂ ಯುವತಿಯೊಂದಿಗೆ ಬೆಂಗಳೂರಿನ ಮುಸ್ಲಿಂ ಯುವಕರೊಬ್ಬರು ವಿವಾಹವಾಗುವುದಾಗಿ ವಿವಾಹ ನೋಂದಾಣಿ ಕಚೇರಿಯಲ್ಲಿ ಅಳವಡಿಸಿರುವ ಆಕ್ಷೇಪಣಾ ಸಲ್ಲಿಸಲು ಮಾಹಿತಿ ಇರುವ ನೋಟೀಸ್‌ವೊಂದು ಸಾಮಾಜಿಕ ಜಾಲಾಣದಲ್ಲಿ ಹರಿದಾಡುತ್ತಿದೆ. ಈ ಕುರಿತು ಹಿಂದೂ ಸಂಘಟನೆಗಳು ಇದೊಂದು ಲವ್ ಜಿಹಾದ್ ಎಂದು ಆರೋಪಿಸಿದ್ದಾರೆ. ಪುತ್ತೂರು ಮೂಲದವರಾಗಿದ್ದು ಇದೀಗ ಬೆಂಗಳೂರಿನಲ್ಲಿ ವಾಸ್ತವ್ಯ …

Read More »

ಕಾರ್ಕಳ: ಕಣಿವೆಗೆ ಉರುಳಿಬಿದ್ದ ಕಾರು :ವಿದ್ಯಾರ್ಥಿ ಮೃತ್ಯು

ಕಾರ್ಕಳ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಣಿವೆಗೆ ಉರುಳಿಬಿದ್ದ ಪರಿಣಾಮ ಕಾಲೇಜು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಬೋಳ ಕೆದಿಂಜೆ ಸಮೀಪದ ಮಂಜರಪಲ್ಕೆ ಎಂಬಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಮೃತರನ್ನು ಕಾಪು ತಾಲೂಕಿನ ಉಚ್ಚಿಲ ಮೂಲದ ವೈಷ್ಣವ್ ಎಂದು ಗುರುತಿಸಲಾಗಿದೆ. ಇವರು ಉಡುಪಿಯ ಖಾಸಗಿ ಕಾಲೇಜಿನ  ಪ್ರಥಮ ಪಿಯುಸಿ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಕಾರಿನಲ್ಲಿದ್ದ ಇನ್ನಿಬ್ಬರು ಮಹಿಳೆಯರಿಗೂ ಗಂಭೀರ ಗಾಯಗಳಾಗಿದ್ದು, ಅವರನ್ನು ಕಾರ್ಕಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈಷ್ಣವ್ ಉಚ್ಚಿಲದಲ್ಲಿರುವ ತಮ್ಮ ಮನೆಯಲ್ಲಿ ಬಾಡಿಗೆಗೆ ಇರುವ ಕುಟುಂಬದ ಸದಸ್ಯರೊಟ್ಟಿಗೆ ಬೆಂಗಳೂರಿಗೆ ತಿರುಗಾಡಲು ಹೋಗಿ …

Read More »

ಶ್ರದ್ದಾ ಹತ್ಯೆ ಪ್ರಕರಣ-ತಲೆಬುರುಡೆ ಭಾಗಗಳು ಪತ್ತೆ

ನವದೆಹಲಿ: ತನ್ನ ಲಿವ್ ಇನ್ ಸಂಗಾತಿಯಿಂದಲೇ ಭೀಕರವಾಗಿ ಹತ್ಯೆಯಾಗಿದ್ದ ಶ್ರದ್ದಾ ವಾಲ್ಕರ್ ತಲೆ ಬುರುಡೆ ಭಾಗಗಳು ದಿಲ್ಲಿಯ ಮೆಹ್ರೌಲಿ ಅರಣ್ಯದಲ್ಲಿ ಪತ್ತೆಯಾಗಿವೆ. ಶ್ರದ್ದಾಳನ್ನು ಹತ್ಯೆಗೈದ ಬಳಿಕ ಆರೋಪಿ ಅಫ್ತಾಬ್ ಆಕೆಯ ದೇಹವನ್ನು 35 ಭಾಗಗಳಾಗಿ ಕತ್ತರಿಸಿ ಮೆಹ್ರೌಲಿ ಅರಣ್ಯದಲ್ಲಿ ಎಸೆದಿದ್ದ. ಬಳಿಕ ಪೊಲೀಸರು ವಿಚಾರಣೆ ವೇಳೆ ಆತ ದೇಹವನ್ನು ತುಂಡು ತುಂಡಾಗಿ ಎಸೆದಿದ್ದ ಅರಣ್ಯಕ್ಕೆ ಆತನನ್ನು ಕರೆದೊಯ್ದಿದ್ದರು. ಈ ವೇಳೆ ವಿವಿಧ ಭಾಗಗಳು ಪತ್ತೆಯಾಗಿದ್ದವು. ಆದರೆ ತಲೆಬುರುಡೆ ಸಿಕ್ಕಿರಲಿಲ್ಲ. ಇದೀಗ ತಲೆ ಬುರುಡೆಯೂ ಪತ್ತೆಯಾಗಿದೆ. ಇನ್ನು ಜೂನ್‌ನಲ್ಲಿ ಆತ ಮುಂಬೈನಿಂದ ಫ್ರಡ್ಜ್, ಪಾತ್ರೆ, ಗೃಹ …

Read More »

You cannot copy content of this page.