Recent Posts

ಮಂಗಳೂರು ಆಟೋ ರಿಕ್ಷಾ ಸ್ಪೋಟ ಪ್ರಕರಣ: ಪ್ರಯಾಣಿಕನ ಮೇಲೆ ಹೆಚ್ಚಿದ ಅನುಮಾನ, ತನಿಖೆಗೆ 3 ವಿಶೇಷ ತಂಡಗಳ ರಚನೆ

ಮಂಗಳೂರು: ಮಂಗಳೂರು ಆಟೋ ರಿಕ್ಷಾ ಸ್ಫೋಟ ಪ್ರಕರಣ ತನಿಖೆಗೆ 3 ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ತಿಳಿದುಬಂದಿದೆ. ಮಂಗಳೂರು ಸಿಟಿ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರು, ಪ್ರಕರಣದ ತನಿಖೆಗೆ ಮೂರು ವಿಶೇಷ ತಂಡಗಳನ್ನು ರಚಿಸಿದ್ದಾರೆ. ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿ ಪರಿಶೀಲನೆ ವೇಳೆ ಆಟೋದಲ್ಲಿ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿವೆ. ಆಟೋದಲ್ಲಿ ಎರಡು ಬ್ಯಾಟರಿ, ನಟ್ಟು​ ಬೋಲ್ಟ್​​, ಸರ್ಕ್ಯೂಟ್​​ ರೀತಿಯ ವೈರಿಂಗ್ ಮಾಡಿರುವ ವಸ್ತು ಪತ್ತೆಯಾಗಿದೆ. ಸಿಕ್ಕ ವಸ್ತುಗಳನ್ನು ಎಫ್ಎಸ್ಎಲ್ ತಂಡ ಪರೀಕ್ಷೆಗೊಳಪಡಿಸಿದೆ. ಈ ನಡುವೆ ಆಟೋದಲ್ಲಿ ಕುಳಿತಿದ್ದ ಪ್ರಯಾಣಿಕನ ಮೇಲೆ ಹಲವು ಅನುಮಾನಗಳು ವ್ಯಕ್ತವಾಗತೊಡಗಿವೆ. ಈತ …

Read More »

ಆಟೋದಲ್ಲಿ ನಿಗೂಢ ಸ್ಫೋಟ ಪ್ರಕರಣ; ಇದು ಉಗ್ರರ ಕೃತ್ಯ ಎಂದ ಡಿಜಿಪಿ ಪ್ರವೀಣ್ ಸೂದ್

ಮಂಗಳೂರು: ಆಟೋದಲ್ಲಿ ನಿಗೂಢ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿಪಿ-ಐಜಿಪಿ ಪ್ರವೀಣ್ ಸೂದ್ ಆಘಾತಕಾರಿ ಮಾಹಿತಿ ಬಹಿರಂಗಗೊಳಿಸಿದ್ದು, ಇದು ಅನಿರೀಕ್ಷಿತ ಸ್ಫೋಟವಲ್ಲ ಉಗ್ರರ ಕೃತ್ಯ ಎಂದು ತಿಳಿಸಿದ್ದಾರೆ. ಮಂಗಳೂರಿನ ನಾಗರಿ ಬಳಿ ನಿನ್ನೆ ಸಂಜೆ ಚಲಿಸುತ್ತಿದ್ದ ಆಟೋದಲ್ಲಿ ಸಂಭವಿಸಿದ್ದ ನಿಗೂಢ ಸ್ಫೋಟ ಪ್ರಕರಣ ಸಂಬಂಧ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿರುವ ಡಿಜಿಪಿ, ಇದು ಉಗ್ರರ ಕೃತ್ಯವಾಗಿದ್ದು, ಉದ್ದೇಶಪೂರ್ವಕವಾಗಿ ಹಾನಿ ಉಂಟು ಮಾಡಲು ಪ್ಲಾನ್ ಮಾಡಲಾಗಿತ್ತು. ಸಾವು, ನೋವು ಹಾನಿ ಉಂಟು ಮಾಡಲು ದುಷ್ಕರ್ಮಿಗಳು ಯೋಜನೆ ರೂಪಿಸಿದ್ದರು ಎಂದು ತಿಳಿಸಿದ್ದಾರೆ. ಕರ್ನಾಟಕ ಪೊಲೀಸರಿಂದ ಸೂಕ್ಷ್ಮ ಹಾಗೂ ಆಳವಾದ ತನಿಖೆ …

Read More »

ಇಂದಿನ ರಾಶಿಭವಿಷ್ಯ ನೋಡಿ (20-11-2022)

ಮೇಷ ರಾಶಿ:ಈ ರಾಶಿಯವರು ಇಂದು ಹಿರಿಯರ ಸಲಹೆಯ ಸಂಪೂರ್ಣ ಪ್ರಯೋಜನವನ್ನು ಪಡೆದುಕೊಳ್ಳಬೇಕು. ನಿಮ್ಮ ಎಲ್ಲಾ ಆಸೆಗಳನ್ನು ನಿಮ್ಮ ಮಕ್ಕಳು ಪೂರೈಸುತ್ತಾರೆ. ಇದರಿಂದ ಮನಸ್ಸಿಗೆ ನೆಮ್ಮದಿ ಸಿಗುತ್ತದೆ. ಯಾವುದೇ ವಿಷಯವನ್ನು ಅಧ್ಯಯನ ಮಾಡಲು ಇಂದು ನಿಮಗೆ ಉತ್ತಮ ಸಮಯ. ಇಂದು ಮಧ್ಯಾಹ್ನದಿಂದ ಪರಿಸ್ಥಿತಿಗಳು ಪ್ರತಿಕೂಲವಾಗಿರುತ್ತವೆ. ನಿಮ್ಮ ಕುಟುಂಬ ಜೀವನದಲ್ಲಿ ಕೆಲವು ಘರ್ಷಣೆಗಳು ಇರಬಹುದು. ನೀವು ಇಂದು 82 ಪ್ರತಿಶತದಷ್ಟು ಅದೃಷ್ಟವನ್ನು ಪಡೆಯುತ್ತೀರಿ. ಪರಿಹಾರ: ನವರಾತ್ರಿಯ ಮೊದಲ ದಿನದಂದು ಉಪವಾಸವನ್ನು ಮಾಡಬೇಕು. ಶುಭ ಸಂಖ್ಯೆ: 9 ವೃಷಭ ರಾಶಿ:ಈ ರಾಶಿಯ ಜನರು ಇಂದು ಹೆಚ್ಚಿನ ಸಮಯವನ್ನು ಕುಟುಂಬದೊಂದಿಗೆ …

Read More »

You cannot copy content of this page.