Recent Posts

ಉಡುಪಿ: ಹಿತಾ ಸುವರ್ಣ ‘ಮಿಸ್ ತುಳುನಾಡು-2022′ ಪ್ರಶಸ್ತಿ

ಉಡುಪಿಯಲ್ಲಿ ನಡೆದ ಮಿಸ್ ತುಳುನಾಡು ಸೌಂದರ್ಯ ಸ್ಪರ್ಧೆಯಲ್ಲಿ ಉಡುಪಿಯ ಹಿತಾ ಸುವರ್ಣ ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ. ಉಡುಪಿಯ ಹೋಟೆಲ್ ಮಣಿಪಾಲ್ ಇನ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ “ಮಿಸ್ ತುಳುನಾಡು”  ಪ್ರಥಮ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾಳೆ. ಉಡುಪಿಯ ಪಿಪಿಸಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ  ಮಾಡುತ್ತಿರುವ ಹಿತಾ ಸುವರ್ಣ  –“2022 ಮಿಸ್ ತುಳುನಾಡು”ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದು ಉಡುಪಿಯ ಜನತೆಗೆ ಹೆಮ್ಮೆ ತಂದು ಕೊಟ್ಟಿದೆ.

Read More »

ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕಾಧ್ಯಕ್ಷರಾದ ಯೋಗೀಶ್‌ ಶೆಟ್ಟಿರವರಿಗೆ ಮಾತೃ ವಿಯೋಗ

ಮಂಗಳೂರು: ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕಾಧ್ಯಕ್ಷರಾದ ಯೋಗೀಶ್‌ ಶೆಟ್ಟಿ ಜಪ್ಪುರವರ ಮಾತೃಶ್ರೀಯವರಾದ ಶ್ರೀಮತಿ ಕಲ್ಯಾಣಿ ಶೆಟ್ಟಿ ಯವರು ಇಂದು ದೈವಾದೀನರಾಗಿದ್ದಾರೆ. ಮೃತರು ಉಳಿದೊಟ್ಟು ದಿವಂಗತ ಬಿರ್ಮು ಶೆಟ್ಟಿ ಅವರ ಮಗಳು, ಪಡ್ಯಾರ ಮನೆ ದಿವಂಗತ ಸೀತಾರಾಮ ಶೆಟ್ಟಿ ಅವರ ಪತ್ನಿಯಾಗಿದ್ದು ಇವರಿಗೆ 82ವರ್ಷ ಪ್ರಾಯವಾಗಿದ್ದು ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದು ಇಂದು ಮದ್ಯಾಹ್ನ ನಿಧನರಾಗಿದ್ದಾರೆ. ಮೃತರು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.ದಿನಾಂಕ 16-11-2022 ಬುಧವಾರ ಸಂಜೆ 6.00ಗಂಟೆಗೆ ಕೋಟೆಕಾರು ಬೀರಿ ಸಮೀಪದ ನೆತ್ತಿಲ ಮನೆಯಲ್ಲಿ ಮೃತರ ಅಂತಿಮ ವಿಧಿ ವಿಧಾನ ಗಳು ನಡೆದು ಬಳಿಕ …

Read More »

ಬೆಳ್ತಂಗಡಿ : ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಪ್ರಧಾನ ಕಚೇರಿಗೆ ನಟಿ ಶ್ರುತಿ ಭೇಟಿ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಉಜಿರೆಯ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಪ್ರಧಾನ ಕಚೇರಿಗೆ ಇಂದು ಕನ್ನಡ ಚಿತ್ರರಂಗದ ಹಿರಿಯ ನಟಿ ಶ್ರುತಿ ಭೇಟಿ ನೀಡಿದರು. ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಸ್ ಜನಾರ್ಧನ ಅವರು ಚಿತ್ರನಟಿ ಶೃತಿಯವರನ್ನು ಸ್ವಾಗತಿಸಿ, ಸಿರಿ ಸಂಸ್ಥೆಯ ಬಗ್ಗೆ ಪ್ರಾಸ್ತಾವಿಕವಾಗಿ ಪರಿಚಯಿಸಿ ಸನ್ಮಾನ ನೀಡಿ ಗೌರವಿಸಿದರು. ಇನ್ನು ನಟಿ ಶ್ರುತಿ ಅವರು ಮಾತನಾಡಿ ‘ಪೂಜ್ಯ ಹೆಗ್ಗಡೆಯವರು ಮತ್ತು ಮಾತೃಶ್ರೀ ಹೇಮಾವತಿ ಅಮ್ಮನವರ ಕನಸಿನ ಕೂಸಾಗಿರುವ ಈ ಸಂಸ್ಥೆಯಲ್ಲಿ ಅನೇಕ ಮಹಿಳೆಯರು ಉದ್ಯೋಗ ನಡೆಸುತ್ತಾ ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳುತ್ತಿದ್ದಾರೆ. …

Read More »

You cannot copy content of this page.