Recent Posts

ಕರಾವಳಿ ಜಿಲ್ಲೆಗಳಲ್ಲಿ ಜನವರಿಯಿಂದ ಪಡಿತರದಲ್ಲಿ ಕುಚಲಕ್ಕಿ ಲಭ್ಯ-ಕೋಟ ಶ್ರೀನಿವಾಸ ಪೂಜಾರಿ

ಉಡುಪಿ : ಬೆಂಬಲ ಬೆಲೆಯಡಿ ಕುಚಲಕ್ಕಿ ಖರೀದಿಗೆ ರಾಜ್ಯ ಸರಕಾರ ತೀರ್ಮಾನಿಸಿದ್ದು, ಜನವರಿಯಿಂದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪಡಿತರದಲ್ಲಿ ಲಭ್ಯವಾಗಲಿದೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕರಾವಳಿಯ ಮೂರೂ ಜಿಲ್ಲೆಗಳ 6.20 ಲಕ್ಷ ಪಡಿತರ ಚೀಟಿದಾರರಿಗೆ ಜನವರಿಯಿಂದ ಕೆಂಪು ಕುಚಲಕ್ಕಿಯನ್ನು ವಿತರಿಸಲಾಗುವುದು. ಎರಡು ಕೆ.ಜಿ.ಸಾಮಾನ್ಯ ಅಕ್ಕಿ, ಮೂರು ಕೆ.ಜಿ. ಕುಚಲಕ್ಕಿ ನೀಡಲಾಗುತ್ತದೆ ಎಂದರು. ಕುಚಲಕ್ಕಿಯನ್ನು ಪಡಿತರ ಮೂಲಕ ಪೂರೈಸಬೇಕೆಂದು ಮೂರೂ ಜಿಲ್ಲೆಗಳ ಜನರು ಆಗ್ರಹಿಸಿದ್ದು, ಇದಕ್ಕೆ ಈಗ ಮುಖ್ಯಮಂತ್ರಿ ಒಪ್ಪಿದ್ದಾರೆ ಎಂದರು. …

Read More »

ಈಜಲು ತೆರಳಿದ ಬಾಲಕ ನೀರಿನಲ್ಲಿ ಮುಳುಗಿ ಸಾವು

ಬಂಟ್ವಾಳ:ಈಜಲು ತೆರಳಿದ ಬಾಲಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ತುಂಬೆ ಡ್ಯಾಂ ನಲ್ಲಿ ನಡೆದಿದೆ. ಪರ್ಲಿಯಾ ನಿವಾಸಿ ಝುನೈದ್ ಎಂಬವರ ಪುತ್ರ ಸಲ್ಮಾನ್ ಫಾರಿಸ್ (16) ಮೃತ ಬಾಲಕ.ಈತ SSLC ವಿದ್ಯಾರ್ಥಿಯಾಗಿದ್ದ. ಫಾರಿಸ್ ಶುಕ್ರವಾರವಾದ ಕಾರಣ ನಮಾಝ್ ಬಳಿಕ ಮೂವರು ಸ್ನೇಹಿತರ ಜೊತೆ ಬಂಟರ ಭವನದ ಹಿಂಭಾಗದಲ್ಲಿರುವ ವೆಂಟೆಡ್ ಡ್ಯಾಮ್ ನಲ್ಲಿ ಈಜಾಡಲು ತೆರಳಿದ್ದಾರೆ.ಈ ವೇಳೆ ನೀರಿಗಿಳಿದ ಸಲ್ಮಾನ್ ನೀರಿನಲ್ಲಿ ಮುಳುಗಿದ್ದಾನೆ.ಜೊತೆಗಿದ್ದವರು ಇತರರಿಗೆ‌ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಬಂಟ್ವಾಳ ಗ್ರಾಮಾಂತರ ಠಾಣೆಯಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ. ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.

Read More »

ಜಿಮ್ ನಲ್ಲಿ ಕುಸಿದು ಬಿದ್ದು ಕಿರುತೆರೆಯ ಖ್ಯಾತ ನಟ ಸಾವು!

ನವದೆಹಲಿ: ಹಿಂದಿ ಕಿರುತೆರೆಯಲ್ಲಿ ಜನಪ್ರಿಯ ಮುಖವಾಗಿದ್ದ ಮತ್ತು ‘ಕುಸುಮ್’ ಮತ್ತು ‘ಕಸೌತಿ ಜಿಂದಗಿ ಕೇ’ ಸೇರಿದಂತೆ ಹಲವಾರು ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡ ನಟ ಸಿದ್ಧಾಂತ್ ಸೂರ್ಯವಂಶಿ ಅವರು ಶುಕ್ರವಾರ ಅಕಾಲಿಕ ಮರಣಕ್ಕೆ ಈಡಾಗಿದ್ದಾರೆ . ಈ ಬಗ್ಗೆ ಸ್ಥಳೀಯ ವರದಿಗಳ ಪ್ರಕಾರ, ನಟ ಜಿಮ್ನಲ್ಲಿ ವರ್ಕೌಟ್ ಮಾಡುವಾಗ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಅವರು ಪತ್ನಿ ಮತ್ತು ಅವರ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಖ್ಯಾತ ಛಾಯಾಗ್ರಾಹಕ ವಿರಲ್ ಭಯಾನಿ ಅವರು ಈ ಸುದ್ದಿಯನ್ನು ಹಂಚಿಕೊಂಡಿದ್ದು, ‘ಈ ಹಿಂದೆ ಆನಂದ್ ಸೂರ್ಯವಂಶಿ ಎಂದು ಕರೆಯಲ್ಪಡುತ್ತಿದ್ದ ನಟ #siddhantsuryavanshi ಬಗ್ಗೆ ಆಘಾತಕಾರಿ …

Read More »

You cannot copy content of this page.