Recent Posts

ಮೂಡುಬಿದಿರೆ: ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ – ವೃದ್ಧನ ಬಂಧನ

ಮೂಡುಬಿದಿರೆ: ಬುಧವಾರ ಇಲ್ಲಿನ ಖಾಸಗಿ ಕಾಲೇಜಿನ ಪ್ರಥಮ ಪಿಯು ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಈ ಪ್ರಕರಣಕ್ಕೆ ಸಂಬಂಧಿಸಿ , ವೃದ್ದನೋರ್ವನನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಕೋಟೆಬಾಗಿಲಿನ ಶ್ರೀಧರ್ ಪುರಾಣಿಕ್ ಎಂದು ಪೊಲೀಸರು ತಿಳಿಸಿದ್ದಾರೆ.ಮೂಲತಃ ಬೈಲೂರಿನವಳಾದ ಬಾಲಕಿ ಹೌದಾಲ್ ನಲ್ಲಿರುವ ತನ್ನ ಚಿಕ್ಕಮ್ಮ ಮನೆಯಲ್ಲಿ್ ವಾಸವಾಗಿದ್ದು, ಪ.ಪೂ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಓದುತ್ತಿದ್ದಳು. ಕಾಲೇಜಿಗೆ ಹೋಗಿ ಬರುತ್ತಿದ್ದ ಬಾಲಕಿಗೆ ಮಂಗಳವಾರ ಕಿವಿ ನೋವು ಕಾಣಿಸಿಕೊಂಡು ಶಿಕ್ಷಕರಿಗೆ ಮಾಹಿತಿ ನೀಡಿದ್ದಾಳೆ. ಕಾಲೇಜಿನವರು ಮನೆಯವರಿಗೆ ವಿಷಯ ತಿಳಿಸಿದಾಗ, ಕೆಲಸದ ಒತ್ತಡದಲ್ಲಿದ್ದ ಅವರು ಪರಿಚಯಸ್ಥ ಶ್ರೀಧರ್ …

Read More »

ವಂದೇ ಭಾರತ್ ಎಕ್ಸ್‌ಪ್ರೆಸ್‌, ಕಾಶಿ ದರ್ಶನ ವಿಶೇಷ ರೈಲಿಗೆ ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಚಾಲನೆ

ಬೆಂಗಳೂರು: ಮೆಜೆಸ್ಟಿಕ್​ನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರು-ಮೈಸೂರು-ಚೆನ್ನೈ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್‌ ವಿಶೇಷ ರೈಲು ಹಾಗೂ ಭಾರತ್​​ ಗೌರವ್​ ಕಾಶಿ ದರ್ಶನ ವಿಶೇಷ ರೈಲಿಗೆ ಚಾಲನೆ ನೀಡಿದರು. ಬೆಳಗ್ಗೆ 10.25ಕ್ಕೆ ಮೆಜೆಸ್ಟಿಕ್ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ವಂದೇ ಭಾರತ್ ವಿಶೇಷ ರೈಲಿಗೆ ಹಸಿರು ನಿಶಾನೆ ತೋರಿದರು. ಈ ವೇಳೆ ಸಿಎಂ ಬಸವರಾಜ್ ಬೊಮ್ಮಾಯಿ, ರಾಜ್ಯಪಾಲ ತಾವರ್ ಚಂದ್ ಗೆಹ್ಲೋತ್, ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್, ಪ್ರಹ್ಲಾದ್ ಜೋಷಿ ಉಪಸ್ಥಿತರಿದ್ದರು. ವಂದೇ ಭಾರತ್ …

Read More »

ಪುತ್ತೂರು: ವಸತಿ ನಿಲಯದಿಂದ ನಾಪತ್ತೆಯಾಗಿದ್ದ ಬಾಲಕರು ಬೆಂಗಳೂರಿನಲ್ಲಿ ಪತ್ತೆ

ಪುತ್ತೂರು: ವಸತಿ ನಿಲಯದಿಂದ ನಾಪತ್ತೆಯಾಗಿದ್ದ ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳು ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ. ಮೈಸೂರು ಮೂಲದ 15 ವರ್ಷದ ವಿದ್ಯಾರ್ಥಿಗಳು ಬೆಂಗಳೂರು ರೈಲು ನಿಲ್ದಾಣದಲ್ಲಿ ಪತ್ತೆ ಮಾಡಲಾಗಿದೆ. ಈ ಇಬ್ಬರು ವಿದ್ಯಾರ್ಥಿಗಳು ಸ್ಥಳೀಯ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಕಲಿಯುತ್ತಿದ್ದರು. ನ.7 ರಂದು ಸಂಜೆ ವಿದ್ಯಾರ್ಥಿ ನಿಲಯದಿಂದ ನಾಪತ್ತೆಯಾಗಿದ್ದು ಪುತ್ತೂರು ನಗರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪಿಎಸ್‌ಐ ಸೇಸಮ್ಮ ನೇತೃತ್ವದಲ್ಲಿ ಪೊಲೀಸರ ತಂಡ ಹುಡುಕಾಟ ನಡೆಸಿದ್ದರು. ಬಾಲಕರಿಬ್ಬರು ಪುತ್ತೂರು ರೈಲು ನಿಲ್ದಾಣದತ್ತ ತೆರಳಿರುವುದು ಸಿಸಿಟಿವಿಯಲ್ಲಿ ಕಂಡುಬಂದಿತ್ತು. ಹೀಗಾಗಿ ಒಂದು ಪೊಲೀಸ್ ತಂಡ ಸಕಲೇಶಪುರ, ಹಾಸನ, ಮೈಸೂರು, ಬೆಂಗಳೂರು …

Read More »

You cannot copy content of this page.