Recent Posts

ಕರಾವಳಿ ಕರಾಟೆಪಟುಗಳಿಗೆ ಕಪ್ಪುಪಟ್ಟಿ

ತಾ 28.04.2024 ರಂದುಕರಾಟೆ ಬುಡೋಕಾನ್ ಇಂಟರ್ನ್ಯಾಷನಲ್ ಇದರ ವತಿಯಿಂದ ಕೊಬುಡೊ ಬುಡೋಕಾನ್ ಕರಾಟೆ ಡೊ ಅಸೋಸಿಯೇಷನ್ (ರಿ) ಕರ್ನಾಟಕ ಇದರ ಸಹಭಾಗಿತ್ವದಲ್ಲಿ ಉಡುಪಿ ದೊಡ್ಡಣ್ಣಗುಡ್ಡೆ ಜನತಾ ವ್ಯಾಯಾಮಶಾಲೆ ಇಲ್ಲಿ 2024 ನೇ ಸಾಲಿನ ಕರಾಟೆ ಕಪ್ಪು ಪಟ್ಟಿ ವಿಭಾಗದ ಪರೀಕ್ಷೆಯು ಜರುಗಿತು. ಕಾರ್ಯಕ್ರಮವನ್ನು ಸಂಸ್ಥೆಯ ಗೌರವ ಅಧ್ಯಕ್ಷರಾದ ಡಾ. ಎನ್. ಬಿ. ವಿಜಯ ಬಲ್ಲಾಳ್,ಮುಖ್ಯ ಅತಿಥಿಗಳಾದ ಸ್ಥಳೀಯ ನಗರಸಭಾ ಸದಸ್ಯರಾದ ಶ್ರೀ ಪ್ರಭಾಕರ್ ಪೂಜಾರಿ, ಯಕ್ಷಗಾನ ಕಲಾಕೇಂದ್ರ ಗುಂಡಿಬೈಲು ಇದರ ಅಧ್ಯಕ್ಷರಾದ ಶ್ರೀ ಬಾಬು ಗೌಡ, ವ್ಯಾಯಾಮಶಾಲೆ ಯ ಅಧ್ಯಕ್ಷರಾದ ಶ್ರೀ ರಾಮದಾಸ್ ಶೆಟ್ಟಿ, …

Read More »

ಬಂಟ್ವಾಳ: ಸ್ಕೂಟರ್ ಗೆ ಲಾರಿ ಡಿಕ್ಕಿ – ಸ್ಕೂಟರ್ ಸವಾರ ಸಾವು

ಬಂಟ್ವಾಳ: ಟಿಪ್ಪರ್ ಲಾರಿಯೊಂದು ಸ್ಕೂಟರ್ ಒಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸಾವನಪ್ಪಿದ ಘಟನೆ ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ನಡೆದಿದೆ. ಮೃತರನ್ನು ನರಿಕೊಂಬು ಗ್ರಾಮದ ಪೊಯಿತ್ತಾಜೆ ನಿವಾಸಿ ಸುಬ್ಬ ಭಂಡಾರಿ(68) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಅವರು ಬಿ.ಸಿ.ರೋಡಿನಲ್ಲಿ ನಡೆದ ಮದುವೆಗೆ ಬಂದಿದ್ದ ವೇಳೆ ಅಪಘಾತ ನಡೆದಿದೆ. ಅಪಘಾತದ ಹಿನ್ನೆಲೆಯಲ್ಲಿ ಹೆದ್ದಾರಿಯಲ್ಲಿ ಕೊಂಚ ಹೊತ್ತು ಟ್ರಾಫಿಕ್ ಜಾಮ್ ಉಂಟಾಗಿದ್ದು, ಬಂಟ್ವಾಳ ‌ಸಂಚಾರ ಪೊಲೀಸರು ಘಟನಾ ಸ್ಥಳಕ್ಕೆ ‌ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More »

ಬೆಳ್ತಂಗಡಿ : ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ 52ನೇ ವರ್ಷದ‌ ಸಾಮೂಹಿಕ ವಿವಾಹ- 123 ಜೋಡಿ ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

ಬೆಳ್ತಂಗಡಿ : ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಜರುಗಿದ 52ನೇ ವರ್ಷದ ಸಾಮೂಹಿಕ ವಿವಾಹದಲ್ಲಿ ಒಟ್ಟು 123 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದೆ. ಶ್ರೀ ಧರ್ಮಸ್ಥಳ ದೇವಸ್ಥಾನದ ಮುಂಭಾಗದಿಂದ ಅಮೃತವರ್ಷಿಣಿ ಸಭಾಭವನದವರೆಗೆ ಸಾಮೂಹಿಕ ವಿವಾಹದ ಮೆರವಣಿಗೆ ನಡೆಯಿತು. ಬ್ಯಾಂಡ್, ವಾಲಗ, ನಂದಿ, ಆನೆಗಳು, ಹಕ್ಕಿ ನಿಶಾನೆ, ತಟ್ಟಿರಾಯ ಮೊದಲಾದ ವಿಶೇಷ ಆಕರ್ಷಣೆಗಳನ್ನು ಒಳಗೊಂಡ ಮೆರವಣಿಗೆಯಲ್ಲಿ ವಧೂ – ವರರು ಭಾಗವಹಿಸಿದ್ದರು. ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ, ಹೇಮಾವತಿ ವಿ.ಹೆಗ್ಗಡೆ, ಹರ್ಷೇಂದ್ರ ಕುಮಾರ್, ಚಿತ್ರನಟ ದೊಡ್ಡಣ್ಣ ಮತ್ತಿತರರು ಪಾಲ್ಗೊಂಡಿದ್ದರು. ಈ ಹಿಂದೆ ಕ್ಷೇತ್ರದ ಸಾಮೂಹಿಕ ವಿವಾಹದಲ್ಲಿ ಮದುವೆಯಾದವರ …

Read More »

You cannot copy content of this page.