Recent Posts

ಅಪಾರ್ಟ್‌ಮೆಂಟ್‌ನಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು: ಜೀವನದಲ್ಲಿ ಜಿಗುಪ್ಸೆಗೊಂಡ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಅಪಾರ್ಟ್ಮೆಂಟ್ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಾಗರಬಾವಿ ನಿವಾಸಿ ವಿಜಯಲಕ್ಷ್ಮಿ(17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ದ್ವಿತೀಯ ಪಿಯುಸಿ ಕಾಮರ್ಸ್ ವ್ಯಾಸಂಗ ಮಾಡುತ್ತಿದ್ದಳು. ತಾಯಿ ಜೊತೆ ವಾಸವಾಗಿದ್ದ ವಿಜಯಲಕ್ಷ್ಮೀ ಕಳೆದ ಒಂದು ವಾರದಿಂದ ಯಾರೊಂದಿಗೂ ಅಷ್ಟಾಗಿ ಮಾತನಾಡದೇ ಜೀವನದಲ್ಲಿ ಜಿಗುಪ್ಸೆಗೊಂಡಿದ್ದಳು. ಈ ನಡುವೆ ಧರ್ಮಸ್ಥಳಕ್ಕೆ ಹೋಗಿ ವಿಜಯಲಕ್ಷ್ಮೀ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾಗ ವೃದ್ಧರೊಬ್ಬರು ಗಮನಿಸಿ ಆಕೆಗೆ ಬುದ್ಧಿವಾದ ಹೇಳಿ ಕಳುಹಿಸಿದ್ದರು. ಮೊನ್ನೆ ರಾತ್ರಿ ಮೈಸೂರು ರಸ್ತೆಯ …

Read More »

ಸಾರ್ವಜನಿಕವಾಗಿ ‘ಹಿಜಾಬ್’ ಧರಿಸದಿದ್ದರೆ 10 ವರ್ಷ ಜೈಲು ಶಿಕ್ಷೆ..!

ದುಬೈ: ಇರಾನ್​ನಲ್ಲಿ ಇಸ್ಲಾಮಿಕ್​ ಸ್ಕಾರ್ಫ್ (ಹಿಜಾಬ್) ಧರಿಸುವ ವಿಚಾರವಾಗಿ 22 ವರ್ಷದ ಯುವತಿ ಮಹ್ಸಾ ಅಮಿನಿ ಮೃತಪಟ್ಟು ಒಂದು ವರ್ಷ ಕಳೆದಿದೆ. ಇಡೀ ದೇಶದ ತುಂಬಾ ಹಿಜಾಬ್​ ಕಿಚ್ಚು ಹಬ್ಬಿದೆ. ಇದರ ನಡುವೆ ಸಾರ್ವಜನಿಕವಾಗಿ ಹಿಜಾಬ್​ ಧರಿಸಲು ನಿರಾಕರಿಸುವ ಮಹಿಳೆಯರು ಮತ್ತು ಅವರನ್ನು ಬೆಂಬಲಿಸುವವರಿಗೆ ಭಾರಿ ಶಿಕ್ಷೆ ವಿಧಿಸುವ ಹೊಸ ಮಸೂದೆಯನ್ನು ಇರಾನ್ ಸಂಸತ್ತು ಅಂಗೀಕರಿಸಿದೆ. ಇದರ ಪ್ರಕಾರ, ಸಾರ್ವಜನಿಕವಾಗಿ ‘ಹಿಜಾಬ್’ ಧರಿಸದಿದ್ದರೆ ಗರಿಷ್ಠ 10 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದು. ಹಿಜಾಬ್ ಧರಿಸದ ಮಹಿಳೆಯರಿಗೆ ಸೇವೆ ಸಲ್ಲಿಸುವ ವ್ಯಾಪಾರಿಗಳಿಗೂ ಈ ಕಾಯ್ದೆ ಅನ್ವಯಿಸುತ್ತದೆ. …

Read More »

ಉಡುಪಿ : ಅನ್ಯಮತೀಯ ಜೋಡಿಯನ್ನು ರಸ್ತೆ ಮಧ್ಯೆ ತಡೆದು ನಿಲ್ಲಿಸಿ ವಿಚಾರಣೆ ನಡೆಸಿದ ಆರೋಪ: 10 ಮಂದಿ ವಿರುದ್ದ ದೂರು

ಉಡುಪಿ : ಅನ್ಯಧರ್ಮಕ್ಕೆ ಸೇರಿದ್ದ ಯುವಕ ಯುವತಿಯನ್ನು ರಸ್ತೆ ಮಧ್ಯೆ ತಡೆದು ನಿಲ್ಲಿಸಿ ವಿಚಾರಣೆ ನಡೆಸಿ ಅದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ ಆರೋಪದ ಮೇಲೆ 10 ಮಂದಿಯ ವಿರುದ್ದ ಕಾಪು ಪೊಲೀಸ್​ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ. ಕಳೆದ ತಿಂಗಳು ನಡೆದಿರುವ ಘಟನೆ ಇದಾಗಿದ್ದು, ಹಿಂದೂ ಧರ್ಮಕ್ಕೆ ಸೇರಿದ ಯುವತಿಯೊಬ್ಬಳು ಪರಿಚಯದ ಮುಸ್ಲೀಂ ಯುವಕನ ಜೊತೆ ಆಗುಂಬೆ ಸಮೀಪದ ಸಿರಿ‌ಮನೆ ಫಾಲ್ಸ್ ಗೆ ಹೋಗಿದ್ದಾರೆ. ಈ ವೇಳೆ ವಾಪಸ್ ಬರುವಾಗ ಅನ್ಯಮತೀಯ ಜೋಡಿಯನ್ನು ಕೆಲವು ಹಿಂದೂ ಸಂಘಟನೆಯ ಕಾರ್ಯಕರ್ತರು ಎನ್ನಲಾದ ಯುವಕರ ಗುಂಪು …

Read More »

You cannot copy content of this page.