Recent Posts

ಉಡುಪಿ: ಅಷ್ಟ ಮಠಾಧೀಶರಿಂದ ಮತ ಚಲಾವಣೆ..!

ಉಡುಪಿ: ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಪ್ರಕ್ರಿಯೆ ಉಡುಪಿ ಜಿಲ್ಲೆಯಲ್ಲಿ ಆರಂಭವಾಗಿದ್ದು, ಮತದಾರರು ಪ್ರಜಾಪ್ರಭುತ್ವದ ಉತ್ಸವದಲ್ಲಿ ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದಾರೆ. ಈಗಾಗಲೇ ಮತ ಚಲಾವಣೆಗಾಗಿ ಮುಂಬಯಿ, ಬೆಂಗಳೂರು ಭಾಗದಿಂದ ಉಡುಪಿ ಜಿಲ್ಲೆಗೆ ಮತದಾರರು ಬಂದಿದ್ದಾರೆ. ಈಗಾಗಲೇ ಉಡುಪಿ ಅಷ್ಟ ಮಠಾಧೀಶರು ಉಡುಪಿಯಲ್ಲಿ ಮತ ಚಲಾವಣೆ ಮಾಡಿದ್ದಾರೆ. ಇನ್ನು ಮತದಾರರು ಸರತಿ ಸಾಲಿನಲ್ಲಿ ನಿಂತು ಉತ್ಸಾಹದಿಂದ ಮತದಾನ ಮಾಡುತ್ತಿದ್ದಾರೆ. ಮತಗಟ್ಟೆಗಳಲ್ಲಿ ಹಿರಿಯ ನಾಗರಿಕರಿಗೆ, ವಿಕಲ ಚೇತನರಿಗೆ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದೆ.

Read More »

ಸುಳ್ಯ : MDMA ಸಾಗಾಟ, ಸುಳ್ಯದ ಇಬ್ಬರು ಯುವಕರ ಬಂಧನ

ಸುಳ್ಯ : ಎಂಡಿಎಂಎಯನ್ನು ಕಳ್ಳ ಸಾಗಟಕ್ಕೆ ಯತ್ನಿಸಿದ ದಕ್ಷಿಣ ಕನ್ನಡದ ಸುಳ್ಯದ ಇಬ್ಬರು ಯುವಕರನ್ನು ಕೇರಳ ಅಬಕಾರಿ ಪೋಲಿಸರು ಬಂಧಿಸಿದ್ದಾರೆ.ಆರೋಪಿಗಳು ಬೆಂಗಳೂರಿನಿಂದ 1. 5 ಲಕ್ಷ ರೂ.ಗೆ ಖರೀದಿಸಿದ್ದ ಎಂಡಿಎಂಎಯನ್ನು ಮಲಪ್ಪುರಂಗೆ ತಲುಪಿಸುವ ಗುರಿಯನ್ನು ಹೊಂದಿದ್ದರು ಎನ್ನಲಾಗಿದೆ. ಮಾನಂದವಾಡಿ ಅಬಕಾರಿ ವೃತ್ತ ನಿರೀಕ್ಷಕ ಎ ಪ್ರಜಿತ್ ನೇತೃತ್ವದ ತಂಡವು ಕೇರಳ ಮಾನಂದವಾಡಿಯಲ್ಲಿ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಅಲೆಟ್ಟಿ ಗ್ರಾಮದ ನಿವಾಸಿಗಳಾದ ಉಮ್ಮರ್ ಫಾರೂಕ್ (33) ಮತ್ತು ಎ.ಎಚ್.ಸಿದ್ದೀಕ್ ಎಂಬುವರನ್ನು ಬಂಧಿಸಿದ್ದಾರೆ.ಆರೋಪಿಗಳು ಬೆಂಗಳೂರಿನಿಂದ ಖರೀದಿಸಿದ್ದ ಎಂಡಿಎಂಎ ಯನ್ನು …

Read More »

ಮೋದಿ ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

ಉಡುಪಿ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 400 ಸೀಟುಗಳನ್ನು ನಿಶ್ಚಿತವಾಗಿ ಗೆಲ್ಲ ಲಿದ್ದು, ನರೇಂದ್ರ ಮೋದಿ ಅವರ ವಿಕಸಿತ ಭಾರತ ನಿರ್ಮಾಣಕ್ಕೆ ಶಕ್ತಿ ತುಂಬಲು ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸೋಣ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಹೇಳಿದರು. ಬ್ರಹ್ಮಾವರದ ಆಕಾಶವಾಣಿಯಿಂದ ಬಸ್‌ ನಿಲ್ದಾಣದ ವರೆಗೆ ನಡೆದ ರೋಡ್‌ ಶೋದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಈ ಬಾರಿಯ ಚುನಾವಣೆ ದೇಶದ ಭವಿಷ್ಯದ ದೃಷ್ಟಿಯಿಂದ ಭಾರೀ ಮಹತ್ವದ ಚುನಾವಣೆಯಾಗಿದ್ದು, ನರೇಂದ್ರ ಮೋದಿ ನೇತೃತ್ವದಲ್ಲಿ ದೇಶದ ಆರ್ಥಿಕ, ಶೈಕ್ಷಣಿಕ, ಆರೋಗ್ಯ ಕ್ಷೇತ್ರಕ್ಕೆ …

Read More »

You cannot copy content of this page.