Recent Posts

ಇಂದು ಕಾರ್ಕಳ, ಹೆಬ್ರಿ ತಾಲೂಕುಗಳಲ್ಲಿ ಶಾಲೆ – ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಕಾರ್ಕಳ : ಕಾರ್ಕಳ ಮತ್ತು ಹೆಬ್ರಿ ತಾಲೂಕಿನ ವ್ಯಾಪ್ತಿಯಲ್ಲಿ ಭಾರಿ ಗಾಳಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜು.25ರಂದು ರಜೆ ಸಾರಲಾಗಿದೆ.ಕಾರ್ಕಳ ತಹಶೀಲ್ದಾರ್ ನರಸಪ್ಪ ಅವರು ನಿನ್ನೆ ರಾತ್ರಿ ರಜೆ ಘೋಷಣೆ ಮಾಡಿದ್ದು, ಕ್ಷೇತ್ರ ಶಿಕ್ಷಣಾಧಿಕಾರಿ ಈಗಾಗಲೇ ಇದನ್ನು ಎಲ್ಲ ಮುಖ್ಯಶಿಕ್ಷಕರಿಗೆ ತಿಳಿಸಿದ್ದಾರೆ.ಕೆಲದಿನ ತುಸು ಬಿಡುವು ನೀಡಿದ್ದ ಮಳೆ ನಿನ್ನೆಯಿಂದ ಮತ್ತೆ ಅಬ್ಬರಿಸಲು ತೊಡಗಿದೆ. ಮಳೆಯ ಜೊತೆಗೆ ಭಾರಿ ವೇಗದಲ್ಲಿ ಗಾಳಿಯೂ ಬೀಸುತ್ತಿರುವುದರಿಂದ ಮಕ್ಕಳ ಸುರಕ್ಷೆಯ ದೃಷ್ಟಿಯಿಂದ ಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ತಹಸೀಲ್ದಾರ್‌ ತಿಳಿಸಿದ್ದಾರೆ.

Read More »

‘ನಟ ದರ್ಶನ್’ಗೆ ಜೈಲೂಟ ಫಿಕ್ಸ್: ‘ಮನೆ ಊಟ’ ಕೋರಿದ್ದ ರಿಟ್ ಅರ್ಜಿ ವಜಾಗೊಳಿಸಿದ ಕೋರ್ಟ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವಂತ ನಟ ದರ್ಶನ್, ಜೈಲೂಟ ಬೇಡ. ಮನೆಯೂಟಕ್ಕೆ ಅವಕಾಶ ನೀಡುವಂತೆ ಕೋರ್ಟ್ ಗೆ ರಿಟ್ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ನಡೆಸಿದಂತ ಕೋರ್ಟ್, ಮನೆಯೂಟಕ್ಕೆ ನಿರಾಕರಿಸಿದೆ. ಅಲ್ಲದೇ ರಿಟ್ ಅರ್ಜಿಯನ್ನು ವಜಾಗೊಳಿಸಿದೆ. ಹೀಗಾಗಿ ನಟ ದರ್ಶನ್ ಗೆ ಜೈಲೂಟವೇ ಫಿಕ್ಸ್ ಆದಂತೆ ಆಗಿದೆ. ನಟ ದರ್ಶನ್ ಅವರು ಮನೆಯೂಟ ಕೋರಿ ಸಲ್ಲಿಸಲಾಗಿದ್ದಂತ ಅರ್ಜಿಯನ್ನು ಈ ಹಿಂದೆ ಕೋರ್ಟ್ ನಡೆಸಿತ್ತು. ಅಲ್ಲದೇ ತೀರ್ಪನ್ನು ಜುಲೈ.25ರ ಇಂದಿಗೆ ಕಾಯ್ದಿರಿಸಿತ್ತು. ಇಂದು ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ …

Read More »

ಶಿರೂರು ಗುಡ್ಡ ಕುಸಿತ: ಮತ್ತೋರ್ವ ಚಾಲಕ ನಾಪತ್ತೆ

ಶಿರೂರು ಬಳಿ ಗುಡ್ಡ ಕುಸಿತ ನಡೆದು ಇಂದಿಗೆ 10 ದಿನಗಳು ಕಳೆದಿದ್ದು, 8 ಜನರ ಮೃತದೇಹ ಪತ್ತೆಯಾಗಿದೆ. ಇನ್ನುಳಿದ ಮೂವರಿಗಾಗಿ ಕಾರ್ಯಾಚರಣೆ ನಡೆಸಲಾಗಿತ್ತು. ಜೊತೆಗೆ ನಾಪತ್ತೆಯಾಗಿದ್ದ ಕೇರಳ ಮೂಲದ ಲಾರಿ ಗಂಗಾವಳಿ ನದಿಯಲ್ಲಿ ಇರುವುದು ನಿನ್ನೆ ಖಚಿತವಾಗಿದ್ದು, ಬೂಮ್‌ ಫೋಕ್ಲೇನ್‌ ಮೂಲಕ ಕಾರ್ಯಾಚರಣೆ ನಡೆಸಲಾಗಿದೆ. ಇದೀಗ ಘಟನೆಯಲ್ಲಿ ಮತ್ತೋರ್ವ ತಮಿಳುನಾಡು ಮೂಲದ ಲಾರಿ ಚಾಲಕ ನಾಪತ್ತೆಯಾಗಿರುವ ಕುರಿತು ದೂರು ದಾಖಲಾಗಿದೆ. ಶರವಣ ನಾಪತ್ತೆ ಆದ ಬಗ್ಗೆ ಅಂಕೋಲಾ ಪೊಲೀಸ್‌ ಠಾಣೆಯಲ್ಲಿ ನಾಪತ್ತೆ ಆಗಿರುವ ಶರವಣ ಅವರ ಮಾವ ಸೆಂದೀಲ್‌ ಎಂಬುವವರು ದೂರು ದಾಖಲಿಸಿದ್ದಾರೆ.

Read More »

You cannot copy content of this page.