Recent Posts

ಬ್ರಿಜೇಶ್ ಚೌಟ ಪರ ರೋಡ್ ಶೋ: ಎಪ್ರಿಲ್ 23ಕ್ಕೆ ಪುತ್ತೂರಿಗೆ ಅಣ್ಣಾಮಲೈ

ಪುತ್ತೂರು  : ಮಾಜಿ ಐಪಿಎಸ್ ಅಧಿಕಾರಿ ತಮಿಳು ನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಎಪ್ರಿಲ್ 23 ರಂದು ಪುತ್ತೂರಿನಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಪರವಾಗಿ ರೋಡ್ ಶೋ ನಡೆಯಲಿದೆ ಎಪ್ರಿಲ್ 23 ರಂದು ಬೆಳಿಗ್ಗೆ 8.30ಕ್ಕೆ ಅಣ್ಣಾಮಲೈ ಅವರು ಸುಳ್ಯ ನಗರದಲ್ಲಿ ರೋಡ್ ಶೋ ನಡೆಸುವರು. 10.30ಕ್ಕೆ ಪುತ್ತೂರಿಗೆ ಬರಲಿದ್ದು, ದರ್ಬೆ ವೃತ್ತದಿಂದ ಬಸ್ ನಿಲ್ದಾಣದವರೆಗೆ ರೋಡ್ ಶೋ ನಡೆಸುವರು. ಬಳಿಕ ಬಂಟ್ವಾಳ ತಾಲ್ಲೂಕಿನ ಫರಂಗಿಪೇಟೆಯ ಕಾರ್ಯಕ್ರಮಕ್ಕೆ ತೆರಳುವರು. ಮಧ್ಯಾಹ್ನ 3 ಗಂಟೆಗೆ ಬೆಳ್ತಂಗಡಿ ಶಾಸಕ …

Read More »

ಕಾರ್ಕಳ: ವಿದ್ಯುತ್ ಶಾಕ್ ಹೊಡೆದು ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಕಾರ್ಮಿಕ ಸಾವು

ಕಾರ್ಕಳ : ರಾತ್ರಿ ವೇಳೆ ಕಾರ್ಕಳ ತಾಲೂಕಿನ ಕೆದಿಂಜೆಯಲ್ಲಿ ವಿದ್ಯುತ್‌ ಶಾಕ್‌ನಿಂದ ಸೆಂಟ್ರಿಂಗ್‌ ಕೆಲಸ ಮಾಡುತ್ತಿದ್ದ ಹಾವೇರಿ ಮೂಲದ ಅನಂತೇಶ್ವರ (29) ಎಂಬವರು ಮೃತಪಟ್ಟ ಘಟನೆ ಸಂಭವಿಸಿದೆ. ರಾತ್ರಿ 9 ಗಂಟೆ ವೇಳೆಗೆ ರಾಡ್‌ ಕಟ್ಟಿಂಗ್‌ ಕೆಲಸ ಮಾಡುತ್ತಿರುವ ವೇಳೆ ವಿದ್ಯುತ್‌ ಶಾಕ್‌ ಹೊಡೆದಿದೆ. ಸ್ಥಳೀಯರು ಅವರನ್ನು ತತ್‌ಕ್ಷಣವೇ ನಗರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದರೂ ಫ‌ಲಕಾರಿಯಾಗದೆ ಮೃತಪಟ್ಟಿದ್ದಾರೆ. ಶಾಕ್‌ಗೆ ಕಾರಣ ತಿಳಿದು ಬಂದಿಲ್ಲ. ಆದರೆ ಈ ವೇಳೆ ಪರಿಸರದಲ್ಲಿ ಮಳೆಯ ಜತೆ ಗುಡುಗು-ಮಿಂಚು ಕೂಡ ಬರುತ್ತಿತ್ತು ಎನ್ನಲಾಗಿದೆ.

Read More »

ಉಡುಪಿ : ಕೆಲಸಕ್ಕೆ ಸೇರಲು ಬಂದ ಯುವತಿ ನಾಪತ್ತೆ..!

ಉಡುಪಿ : ಕೆಲಸಕ್ಕೆ ಸೇರಲು ಬಂದ ಯುವತಿಯೊಬ್ಬಳು ನಾಪತ್ತೆಯಾದ ಘಟನೆ ಉಡುಪಿ ಜಿಲ್ಲೆಯ ಉದ್ಯಾವರ ಗ್ರಾಮದಲ್ಲಿ ನಡೆದಿದೆ. ಉದ್ಯಾವರ ಗ್ರಾಮದ ಪಿತ್ರೋಡಿಯ ಫ್ಯಾಕ್ಟರಿ ಒಂದರ ಕೆಲಸಕ್ಕೆ ಸೇರಲು ಬಂದು ಉದ್ಯಾವರದ ರೂಮಿನಲ್ಲಿ ಉಳಿದುಕೊಂಡಿದ್ದ ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲೂಕು ಕಾಸರಕೋಡ ಮಲಬಾರ ಕೇರಿ ನಿವಾಸಿ ಪ್ರೇಮಾ (25) ಎಂಬ ಯುವತಿಯು ಏಪ್ರಿಲ್ 15 ರಂದು ರೂಮಿನಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ ಎತ್ತರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ, ಕೊಂಕಣಿ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ …

Read More »

You cannot copy content of this page.