Recent Posts

ಮಂಗಳೂರು: ಮೋದಿ ರೋಡ್ ಶೋ ಬಳಿಕ ಯುವಕನೋರ್ವನಿಗೆ ಬಿತ್ತು ಏಟು!

ಮಂಗಳೂರು: ನಗರದಲ್ಲಿ ರವಿವಾರ ರಾತ್ರಿ ಪ್ರಧಾನಿ ನರೇಂದ್ರ ಮೋದಿಯವರ ರೋಡ್ ಶೋ ಮುಗಿದ ಬಳಿಕ ಯುವಕನೋರ್ವನಿಗೆ ಏಟು ಬಿದ್ದ ಘಟನೆ ವರದಿಯಾಗಿದೆ. ಮೋದಿ ರೋಡ್ ಶೋ ವೀಕ್ಷಿಸಲು ಬಂದಿದ್ದ ಮಹಿಳೆಯೊಬ್ಬಳಿಗೆ ಯುವಕನೋರ್ವ ಮೊಬೈಲ್ ನಂಬರ್ ನೀಡಿದ್ದೇ ಗಲಾಟೆಗೆ ಕಾರಣ ಎನ್ನಲಾಗಿದೆ. ಮಂಗಳೂರಿನ ಬಂಟ್ಸ್ ಹಾಸ್ಟೆಲ್ ಬಳಿ ಮಹಿಳೆಗೆ ಯುವಕನೋರ್ವ ಚೀಟಿಯಲ್ಲಿ ತನ್ನ ಮೊಬೈಲ್ ನಂಬರ್ ಬರೆದು ನೀಡಿದ್ದ. ಈ ವಿಷಯ ಗೊತ್ತಾಗಿ ಆರೋಪಿ ಯುವಕನನ್ನು ಹಿಡಿದ ಮಹಿಳೆಯ ಪತಿ ಆತನ ಮೊಬೈಲ್ ಕಿತ್ತುಕೊಂಡು ಎರಡೇಟು ಬಿಗಿದಿದ್ದಾನೆ. ಈ ವೇಳೆ ಸ್ಥಳದಲ್ಲಿದ್ದ ಯುವಕರ ತಂಡವೂ ಆರೋಪಿ …

Read More »

ಬಂಟ್ವಾಳ; ಹಿಂದೂ ಸಂಘಟನೆಯ ಮುಖಂಡನಿಗೆ ಚೂರಿ ಇರಿತ

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತನೇ ಚೂರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ಭಾನುವಾರ ರಾತ್ರಿ ನಡೆದಿದೆ.ಹಿಂದೂ ಯುವಸೇನೆಯ ಮುಖಂಡ ಉದ್ಯಮಿಯಾಗಿರುವ ಪುಷ್ಪರಾಜ್ ಎಂಬವರಿಗೆ ಜಕ್ರಿಬೆಟ್ಟು ಎಂಬಲ್ಲಿ ಚೂರಿ ಇರಿತವಾಗಿದೆ. ಇರಿತಕ್ಕೆ ಸ್ಪಷ್ಟವಾದ ಕಾರಣ ತಿಳಿದುಬಂದಿಲ್ಲ. ರಿಕ್ಷಾದಲ್ಲಿ ಜತೆಯಾಗಿ ತೆರಳುತ್ತಿದ್ದಾಗಲೇ ಸ್ನೇಹಿತ ರವಿ ಎಂಬಾತ ಚೂರಿಯಿಂದ ಕುತ್ತಿಗೆಗೆ ಇರಿದಿದ್ದಾನೆ ಎಂದು ಹೇಳಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಪುಷ್ಪರಾಜ್ ರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಆರೋಪಿ ರವಿ ಚೂರಿ ಇರಿದು ಪರಾರಿಯಾಗಿದ್ದಾನೆ. ಬಂಟ್ವಾಳ ನಗರ ಠಾಣಾ ಪೋಲೀಸರು ಸ್ಥಳಕ್ಕೆ ‌ಭೇಟಿ ನೀಡಿದ್ದು …

Read More »

ಉಡುಪಿ: ಆನ್‌ಲೈನ್‌ ಮೂಲಕ ಮಹಿಳೆಗೆ ಲಕ್ಷಾಂತರ ರೂ. ವಂಚನೆ- ಪ್ರಕರಣ ದಾಖಲು

ಉಡುಪಿ: ಆನ್‌ಲೈನ್‌ ಮೂಲಕ ಮಹಿಳೆಯೊಬ್ಬರಿಗೆ ಲಕ್ಷಾಂತರ ರೂಪಾಯಿ ವಂಚಿಸಿದ ಬಗ್ಗೆ ದೂರು ದಾಖಲಾಗಿದೆ. ವೀಣಾ ಎಂಬವರ ವಾಟ್ಸಾಪ್‌ ಸಂಖ್ಯೆಗೆ “ನೀವು ಒಂದು ಗೂಗಲ್‌ ರಿವ್ಯೂ ಮಾಡಿದರೆ 50 ರೂ. ನೀಡಲಾಗುವುದು ಎಂಬ ಸಂದೇಶ ಬಂದಿತ್ತು. ಅದನ್ನು ನಂಬಿದ ಅವರು ಗೂಗಲ್‌ ರಿವ್ಯೂ ಮಾಡಿದ್ದು, ಮೊದಲು 150 ರೂ. ಪಡೆದಿದ್ದರು.ಅನಂತರ ಆರೋಪಿಯು ವೀಣಾರಿಗೆ ವಿವಿಧ ಟಾಸ್ಕ್ ಗಳನ್ನು ನೀಡಿ ನಂಬಿಸಿ ಒಟ್ಟು 2,21,000 ರೂ.ಗಳನ್ನು ತನ್ನ ಖಾತೆಗೆ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Read More »

You cannot copy content of this page.