Recent Posts

ಉಡುಪಿ: ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ : ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ಉಡುಪಿ: ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ನಡೆದಿದ್ದು, ಘಟನೆಯಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟ ಘಟನೆ ನಿಟ್ಟೂರು ಪೆಟ್ರೋಲ್ ಪಂಪ್ ಬಳಿ ನಡೆದಿದೆ. ಮೃತ ಬೈಕ್ ಸವಾರ ಬಾದಮಿ ತಾಲೂಕಿನ ಬಸಪ್ಪ (30) ಎಂದು ತಿಳಿದುಬಂದಿದೆ. ಬಸ್ ಉಡುಪಿಯಿಂದ ಕರಾವಳಿ ಬೈಪಾಸ್ ಮಾರ್ಗವಾಗಿ ಸಂತೆಕಟ್ಟೆಯತ್ತ ತೆರಳುತ್ತಿತ್ತು. ಈ ವೇಳೆ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ನಡೆದ ಬಳಿಕ ಕೆಲ ಕಾಲ ಸಂಚಾರ ದಟ್ಟಣೆ ಉಂಟಾಯಿತು. ಸಂಚಾರಿ ಪೊಲೀಸರು ಸ್ಥಳಕ್ಕಾಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ ಹೆಚ್ಚಿನ …

Read More »

ಭಟ್ಕಳ: ಅರಬ್ಬೀ ಸಮುದ್ರದಲ್ಲಿ ದೋಣಿ ಮುಳುಗಡೆ, 4 ಮೀನುಗಾರರ ರಕ್ಷಣೆ

ಭಟ್ಕಳ: ಕರಾವಳಿ ಜಿಲ್ಲೆ ಉತ್ತರ ಕನ್ನಡ ಭಾಗದಲ್ಲಿ ಅಬ್ಬರದ ಗಾಳಿ ಜೊತೆ ಗುಡುಗು ಸಹಿತ ಮಳೆ ಸುರಿಯುತ್ತಿದ್ದು, ಈ ಮಧ್ಯೆ ಭಟ್ಕಳ ಸಮೀಪ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆಯಾಗಿದೆ. ಅರಬ್ಬೀ ಸಮುದ್ರದಲ್ಲಿ ಗಾಳಿ ಮಳೆಗೆ ಈ ಮೀನುಗಾರಿಕಾ ಬೋಟ್  ಶನಿವಾರ ಬೆಳಗ್ಗೆ ಮುಳುಗಡೆಯಾಗಿದ್ದು ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ.  ಉತ್ತರಕನ್ನಡ ಜಿಲ್ಲೆಯ ಭಟ್ಕಳದ ಮಾವಿನಕುರ್ವೆ ಮೀನುಗಾರಿಕಾ ಬಂದರು ವ್ಯಾಪ್ತಿಯಲ್ಲಿ ‘ಓಂ ಮಹಾಗಣಪತಿ’ ಹೆಸರಿನ ಬೋಟ್ ಮುಳುಗಡೆಯಾಗಿದೆ. ಬೋಟ್​ನಲ್ಲಿದ್ದ 4 ಮಂದಿ ಮೀನುಗಾರರ ರಕ್ಷಣೆ ಮಾಡಲಾಗಿದೆ. ಮುಳುಗಡೆಯಾಗಿರುವ ಬೋಟ್, ಮಹಾದೇವ ಖಾರ್ವಿ ಎಂಬವರಿಗೆ …

Read More »

ಸುಳ್ಯದಲ್ಲಿ ಕಾರುಗಳ ಮುಖಾಮುಖಿ ಡಿಕ್ಕಿ : ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ

ಸುಳ್ಯ : ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದುಕೊಂಡ ಪರಿಣಾಮ ಪ್ರಯಾಣಿಕರು ಸಣ್ಣಪುಟ್ಟ ಗಾಯಗೊಂಡ ಘಟನೆ ಸುಳ್ಯ ಶ್ರೀರಾಮ್ ಪೇಟೆ ಬಳಿ ಇಂದು ನಡೆದಿದೆ. ಓಮ್ನಿ ಕಾರು ಹಾಗೂ ಸೆಲಾರಿಯೋ ಕಾರಿನ ನಡುವೆ ಶ್ರೀರಾಮ್ ಪೇಟೆ ಪೋಸ್ಟ್ ಆಫೀಸ್ ಕಚೇರಿಯ ಬಳಿ ಡಿಕ್ಕಿ ಸಂಭವಿಸಿದೆ. ಘಟನೆಯಿಂದಾಗಿ ಎರಡು ಕಾರಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯವಾಗಿದೆ. ಕಾರುಗಳ ಡಿಕ್ಕಿಯಿಂದ ಸುಳ್ಯ ಮುಖ್ಯ ಬೀದಿಯಲ್ಲಿ ಸ್ವಲ್ಪ ಹೊತ್ತು ಸಂಚಾರಕ್ಕೆ ತಡೆ ಉಂಟಾಯಿತು. ಈ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ.

Read More »

You cannot copy content of this page.