

ಬಿಜೆಪಿ ಪ್ರಣಾಳಿಕೆಯನ್ನು ಜನಮನಕ್ಕೆ ಮುಟ್ಟಿಸುತ್ತಿರುವ ಕಾರ್ಯಕರ್ತರು
ಆರಂಬೋಡಿ, ಮೇ 1: ಆರಂಬೋಡಿ ಗ್ರಾ.ಪಂ. ವ್ಯಾಪ್ತಿಯ ಗುಂಡೂರಿ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರ ಯುವಪಡೆ ಭರ್ಜರಿ ಮತಬೇಟೆ ನಡೆಸುತ್ತಿದೆ.

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಹರೀಶ್ ಪೂಂಜರವರ ಪರ ನಾರಾವಿ ಬಿಜೆಪಿ ಮಹಾಶಕ್ತಿಕೇಂದ್ರದ ಪ್ರಧಾನ ಕಾರ್ಯದರ್ಶಿ ನಿತೀಶ್ ಗುಂಡೂರಿ ಹಾಗೂ ಹಾಗೂ ಇಲ್ಲಿನ ಗ್ರಾ.ಪಂ. ಸದಸ್ಯರ ನೇತೃತ್ವದಲ್ಲಿ ಕಾರ್ಯಕರ್ತರು ಮನೆಮನೆ ತೆರಳಿ ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ.

ಬಿಜೆಪಿ ಹೊರಡಿಸಿದ ಪ್ರಣಾಳಿಕೆಗಳನ್ನು ಜನಮನಕ್ಕೆ ಮುಟ್ಟಿಸಿದ್ದಲ್ಲದೆ ತಾಲೂಕಿನಲ್ಲಿ ಕಳೆದೈದು ವರ್ಷಗಳ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮತದಾರರಿಗೆ ತಿಳಿಯಪಡಿಸಿದರು.