December 6, 2025
rak

ಬೆಳ್ತಂಗಡಿ, ಎ. 15: ಬೆಳ್ತಂಗಡಿ ಶ್ರೀ ಗುರುಗುರುನಾರಾಯಣ ವಾಣಿಜ್ಯ ಸಂಕೀರ್ಣದ ಮುಖ್ಯ ದ್ವಾರದ ಬಳಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ರಕ್ಷಿತ್ ಶಿವರಾಮ್ ಅವರ ಚುನಾವಣಾ ಕಚೇರಿಯ ಉದ್ಘಾಟನೆಯು ಎ. 15ರಂದು ಬೆಳಿಗ್ಗೆ 11-15ಕ್ಕೆ ನಡೆಯಲಿದೆ.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ವಿಧಾನ ಪರಿಷತ್ ಶಾಸಕರಾದ ಕೆ. ಹರೀಶ್ ಕುಮಾರ್, ಮಾಜಿ ಶಾಸಕರಾದ ಕೆ. ವಸಂತ ಬಂಗೇರ, ಮಾಜಿ ಸಚಿವರಾದ ಗಂಗಾಧರ ಗೌಡ, ಮತ್ತು ಪಕ್ಷದ ನಾಯಕರುಗಳು, ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ (ನಗರ) ಅಧ್ಯಕ್ಷ ಶೈಲೇಶ್ ಕುಮಾರ್, ಗ್ರಾಮೀಣ ಅಧ್ಯಕ್ಷ ರಂಜನ್ ಜಿ. ಗೌಡ ಹಾಗೂ ಪ್ರಚಾರ ಸಮಿತಿಯ ಸಂಯೋಜಕ ಭಗೀರಥ ಜಿ. ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.