ದೇಲಂಪುರಿ ಕ್ಷೇತ್ರದಲ್ಲಿ ಮಳೆಗಾಗಿ ಪ್ರಾರ್ಥನೆಶ್ರೀ ಮಹಾದೇವ ಮಹಾಗಣಪತಿ ದೇವರಿಗೆ ಸಿಯಾಳಾಭಿಷೇಕ

ವೇಣೂರು, ಮೇ 1: ಕರಿಮಣೇಲು ಗ್ರಾಮದ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ವರುಣನ ಕೃಪೆಗಾಗಿ ಶ್ರೀ ದೇವರಿಗೆ ಇಂದು ೧೫೦ ಸಿಯಾಳದ ಅಭಿಷೇಕ ಜರಗಿತು.


ಕೆರೆ, ನದಿಗಳು ಬತ್ತಿಹೋಗಿವೆ. ಮಳೆಗಾಲ ರೈತರು, ಕೃಷಿಕರು ಮುಗಿಲತ್ತ ಮುಖ ಮಾಡಿದ್ದು, ಕೆಲವೆಡೆ ಕುಡಿಯುವ ನೀರಿಗೂ ಪರದಾಡುವಂತಾಗಿದೆ. ಊರಿನಲ್ಲಿ ಶೀಘ್ರ ಮಳೆ ಬಂದು ವರುಣ ಕೃಪೆತೋರುವಂತೆ ಶ್ರೀ ಮಹಾಗಣಪತಿ ದೇವರಿಗೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಸಿಯಾಳದ ಅಭಿಷೇಕ ನೆರವೇರಿಸಲಾಯಿತು. ದೇವಸ್ಥಾನದ ವಿವಿಧ ಸಮಿತಿ ಪದಾಧಿಕಾರಿಗಳು ಹಾಗೂ ಊರಿನ ಭಕ್ತರು ಉಪಸ್ಥಿತರಿದ್ದರು.

Check Also

ರೇಷನ್‌ ಕಾರ್ಡ್‌ ಕಳೆದು ಹೋದರೆ ಚಿಂತೆ ಮಾಡಬೇಡಿ ಹೀಗೆ ಮಾಡಿ

ರೇಷನ್‌ ಕಾರ್ಡ್‌ ಕಳದುಹೋದರೆ ಚಿಂತಿಸಬೇಡಿ. ಸರ್ಕಾರ ನಿಮಗಾಗಿ ಹೊಸ ವ್ಯವಸ್ಥೆಯನ್ನು ಕಲ್ಪಿಸಿದೆ. NFSA ನ ಅಧಿಕೃತ ವೆಬ್‌ಸೈಟ್‌ https: //www.nfsa.gov.in …

Leave a Reply

Your email address will not be published. Required fields are marked *

You cannot copy content of this page.