May 28, 2025 12:17:05 PM
kadri temmple

ಮಂಗಳೂರು, ಮೇ 27: ಇಲ್ಲಿಯ ಕದ್ರಿ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಮೇ 29ರ ಸೋಮವಾರ ಬೆಳಿಗ್ಗೆ 9-30ಕ್ಕೆ ಸಾಮೂಹಿಕ ಸೀಯಾಳಾಭಿಷೇಕ ಜರಗಲಿದೆ.
ಲೋಕ ಕಲ್ಯಾಣಾರ್ಥ, ಸಾಮೂಹಿಕ ಪ್ರಾರ್ಥನೆ ಹಾಗೂ ಸೀಯಾಳಾಭಿಷೇಕ ಆಯೋಜಿಸಲಾಗಿದ್ದು, ತಂತ್ರಿಗಳು, ಅರ್ಚಕರು ಮತ್ತು ಸಿಬ್ಬಂದಿಗಳು, ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಎ.ಜೆ. ಶೆಟ್ಟಿ ಮತ್ತು ವ್ಯವಸ್ಥಾಪನಾ ಸಮಿತಿಯ ಸದಸ್ಯರು, ಆಡಳಿತಾಧಿಕಾರಿಗಳು, ಹತ್ತು ಸಮಸ್ತರು ಮತ್ತು ಜನ ಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಅಭಿಷೇಕ್ಕೆ ಬೇಕಾಗುವ ಸೀಯಾಳವನ್ನು ಮುಂಚಿತವಾಗಿ ದೇವಳಕ್ಕೆ ತಂದೊಪ್ಪಿಸಬಹುದು ಎಂದು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *

<p>You cannot copy content of this page.</p>