ಶಾಲೆಯಲ್ಲಿ ಪಾಠ ಮಾಡುವಾಗಲೇ ಕುಸಿದು ಬಿದ್ದು ಶಿಕ್ಷಕ ಮೃತ್ಯು

ದಾವಣಗೆರೆ;ಮಕ್ಕಳಿಗೆ ಪಾಠ ಮಾಡುವಾಗಲೇ ಶಿಕ್ಷಕ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ಘಟನೆ ನಡೆದಿದೆ.

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಭಾನುವಳ್ಳಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಘಟನೆ ನಡೆದಿದ್ದು ಇಂಗ್ಲೀಷ್ ವಿಷಯದ ಶಿಕ್ಷಕ ವಿಜಯ್ ಕುಮಾರ್ (54) ಮೃತರು.

ವಿಜಯ್ ಕುಮಾರ್ ಬೆಳಗ್ಗೆ ಶಾಲೆಯಲ್ಲಿ ಪ್ರಾರ್ಥನೆ ಮುಗಿಸಿ ಮಕ್ಕಳಿಗೆ ಪಾಠ ಮಾಡುತ್ತಿದ್ದರು. ಈ ವೇಳೆ ಹೃದಯಾಘಾತಕ್ಕೆ ಒಳಗಾಗಿ ಕುಸಿದು ಬಿದ್ದಿದ್ದು ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.ಆದರೆ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ.

Check Also

ಶಾಲಾ ಶಿಕ್ಷಕಿ ಕಿಡ್ನಾಪ್ ಪ್ರಕರಣ- ನೆಲ್ಯಾಡಿ ಬಳಿ ಅಪಹರಣಕಾರರ ಬಂಧನ

ಹಾಸನ: ಹಾಸನದ ಬಿಟ್ಟಗೌಡನಹಳ್ಳಿ ಬಳಿ ನಡೆದಿದ್ದ ಶಾಲಾ ಶಿಕ್ಷಕಿ ಕಿಡ್ನಾಪ್ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಅಪಹರಣಕಾರರನ್ನು ಬಂಧಿಸಿದ್ದಾರೆ. ದಕ್ಷಿಣ ಕನ್ನಡದ …

Leave a Reply

Your email address will not be published. Required fields are marked *

You cannot copy content of this page.