ಜಾತ್ರೆ ವೇಳೆ ಅಗ್ನಿ ಕೊಂಡ ಹಾಯುವಾಗ ಬೆಂಕಿಗೆ ಬಿದ್ದ ಅರ್ಚಕ : ಸ್ಥಿತಿ ಗಂಭೀರ

ಚಿಕ್ಕಬಳ್ಳಾಪುರ: ದೊಡ್ಡಬೆಳವಂಗಲದ ಅಜ್ಜನ ಕಟ್ಟೆ ಬಳಿ ಶಾಂತಿನಗರದಲ್ಲಿ ಪ್ರಸಿದ್ಧ ರೇಣುಕಾ ಯಲ್ಲಮ್ಮ ದೇವಿಯ ಜಾತ್ರೆ ಮಹೋತ್ಸವ ಅದ್ಧೂರಿಯಾಗಿ ನಡೆದಿದೆ.

ಈ ವೇಳೆ ಭಾರಿ ದುರಂತ ನಡೆದಿದ್ದು, ಅಗ್ನಿಕೊಂಡ ಹಾಯುವಾಗ ಅರ್ಚಕಿಯೊಬ್ಬರು ಎಡವಿ ಬೆಂಕಿಗೆ ಬಿದ್ದು ಸ್ಥಿತಿ ಗಂಭೀರವಾಗಿದೆ. ಅರ್ಚಕಿ ಅನು ಜೋಗತಿ ಎಂಬುವರು ಕಳಸಾ ಹೊತ್ತು ಕೊಂಡದಲ್ಲಿ ಹೋಗುವಾಗ ಘಟನೆ ನಡೆದಿದೆ. ನಿನ್ನೆ ನಗರದಲ್ಲಿ ರೇಣುಕಾ ಯಲ್ಲಮ್ಮದೇವಿಯ ಅಗ್ನಿ ಕೊಂಡ ಹಾಯುವ ಜಾತ್ರೆ ಇತ್ತು. ಈ ವೇಳೆ ಅರ್ಚಕಿ ಕೊಂಡ ಹಾಯಲು ಮುಂದಾಗಿದ್ದು, ಭಾರಿ ಅವಘಡ ಸಂಭವಿಸಿದೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Check Also

BIG NEWS: ವಿಧಾನಸಭೆಯಲ್ಲಿ ಶಾಸಕಿ ನಯನಾ ಮೋಟಮ್ಮ ‘ಸಿಎಂ ಆಸನ’ದ ಮೇಲೆ ಕುಳಿತು ಮಹಾ ಯಡವಟ್ಟು

ಬೆಳಗಾವಿ: ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡೋದಕ್ಕೆ ವಿಧಾನಸಭೆಯ ಸದನಕ್ಕೆ ತೆರಳಿದ್ದಂತ ಮೂಡುಗೆರೆ ಶಾಸಕಿ ನಯನಾ ಮೋಟಮ್ಮ …

Leave a Reply

Your email address will not be published. Required fields are marked *

You cannot copy content of this page.