![](https://thrishulnews.com/wp-content/uploads/2024/03/WhatsApp-Image-2024-03-12-at-11.54.26-AM.jpeg)
ಬೆಂಗಳೂರು,ಏಪ್ರಿಲ್28: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದು ನನಗೆ ಸಂತೋಷವನ್ನ ಉಂಟು ಮಾಡಿದೆ. ನಟ ಶಿವರಾಜಕುಮಾರ್ ಅವರು ಕೂಡ ಕಾಂಗ್ರೆಸ್ ಪಕ್ಷದ ಕೆಲವು ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಲಿದ್ದಾರೆ. ಅವರು ಚಿತ್ರೀಕರಣದಲ್ಲಿರುವುದರಿಂದ ಸಮಯ ಬಿಡುವು ಮಾಡಿಕೊಂಡು ಪ್ರಚಾರ ಮಾಡುತ್ತಾರೆ ಎಂದು ಗೀತಾ ಶಿವರಾಜ್ ಕುಮಾರ್ ಮಾಹಿತಿ ನೀಡಿದರು.
ಶುಕ್ರವಾರ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಸೇರ್ಪಡೆಯ ಬಳಿಕ ಮಾತನಾಡಿದ ಅವರು, ಕಾಂಗ್ರೆಸ್ ಐತಿಹಾಸಿಕ ಪಕ್ಷ. ಈ ಪಕ್ಷಕ್ಕೆ ಸೇರುತ್ತಿರುವುದು ಬಹಳ ಸಂತೋಷವಾಗುತ್ತಿದೆ. ನನ್ನನ್ನು ಪಕ್ಷಕ್ಕೆ ಆತ್ಮೀಯವಾಗಿ ಬರಮಾಡಿಕೊಂಡ ಸಹೋದರ ಡಿ.ಕೆ. ಶಿವಕುಮಾರ್ ಅವರಿಗೆ ಧನ್ಯವಾದಗಳು. ನಾವು ಕನಕಪುರಕ್ಕೆ ಶಿಫ್ಟ್ ಆಗುತ್ತಿದ್ದೇವೆ ಎಂದು ಮಾಧ್ಯಮಗಳು ತಿಳಿಸುತ್ತಿದ್ದು, ಅದೂ ಕೂಡ ಸಧ್ಯದಲ್ಲೇ ಆಗಲಿದೆ ಎಂದು ಹೇಳಿದರು.