![](https://thrishulnews.com/wp-content/uploads/2024/03/WhatsApp-Image-2024-03-12-at-11.54.26-AM.jpeg)
ಬೆಳಗಾವಿ, ಏಪ್ರಿಲ್ 30: 2023ರ ಕರ್ನಾಟಕ ವಿಧಾನಸಭೆ ಚುನಾವಣೆಗಾಗಿ ರಾಜ್ಯದಲ್ಲಿ ಅಬ್ಬರದ ಪ್ರಚಾರ ನಡೆಸುತ್ತಿರುವ ರಾಜಕೀಯ ಪಕ್ಷಗಳು, ಅಧಿಕಾರಕ್ಕೇರಲು ಮತ್ತು ಮತಗಳನ್ನು ಸೆಳೆಯಲು ಮತದಾರರಿಗೆ ಇನ್ನಿಲ್ಲದ ಆಶ್ವಾಸನೆಗಳನ್ನು ಘೋಷಿಸುತ್ತಿವೆ.
![](https://thrishulnews.com/wp-content/uploads/2023/04/parshwanath-advt-5-937x1024.jpg)
ಇದೇ ವೇಳೆ ರಾಜ್ಯ ಚುನಾವಣೆ ಹಿನ್ನೆಲೆ ರಾಜ್ಯಕ್ಕೆ ರಾಷ್ಟ್ರೀಯ ನಾಯಕರು ಆಗಮಿಸಿದ್ದು, ತಮ್ಮ ಪಕ್ಷಗಳ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಪ್ರಚಾರ ಮಾಡುತ್ತಿದ್ದಾರೆ.
![](https://thrishulnews.com/wp-content/uploads/2023/04/samyak-advt-4.jpg)
ಬೆಳಗಾವಿ ಜಿಲ್ಲೆಯ ಖಾನಾಪುರ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಪರವಾಗಿ ಪ್ರಚಾರದಲ್ಲಿ ಮಾತನಾಡಿದ ಪ್ರಿಯಾಂಕಾ ಗಾಂಧಿ ವಾದ್ರಾ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಂಗನವಾಡಿ ಕಾರ್ಯಕರ್ತೆಯರಿಗೆ 15 ರೂ. ವರೆಗೆ ವೇತನ ಹೆಚ್ಚಿಸಲಾಗುವುದು ಮತ್ತು ಆಶಾ ಕಾರ್ಯಕರ್ತೆಯರಿಗೆ 8 ಸಾವಿರ ರೂ. ವರೆಗೆ ವೇತನ ಹೆಚ್ಚಿಸಲಾಗುವುದು ಎಂದು ಹೊಸ ಘೋಷಣೆ ಮಾಡಿದರು.
![](https://thrishulnews.com/wp-content/uploads/2023/04/shridevi-advt-3.jpg)
“ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ ಯಾವುದೇ ಪಿಂಚಣಿ ಸೌಲಭ್ಯ ಸಿಗಲ್ಲ. ಹೀಗಾಗಿ ಅಂಗನವಾಡಿ ಮಹಿಳೆಯರಿಗೆ 15 ಸಾವಿರ ರೂ. ವರೆಗೆ ಮತ್ತು ಆಶಾ ಕಾರ್ಯಕರ್ತೆಯರಿಗಾಗಿ 8 ಸಾವಿರ ರೂ. ವರೆಗೆ ವೇತನ ಹೆಚ್ಚಿಸಲಾಗುವುದು. ಇದೇ ವೇಳೆ ಬಿಸಿಯೂಟ ಕಾರ್ಯಕರ್ತರ ವೇತನವನ್ನು 5 ಸಾವಿರ ರೂ.ಗೆ ಏರಿಕೆ ಮಾಡಲಾಗುವುದು,” ಎಂದು ಘೋಷಿಸಿದರು. ಈ ಮೂಲಕ ಖಾನಾಪುರದ ಸಮಾವೇಶದಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಹೊಸ ಘೋಷಣೆ ಮಾಡಿದ್ದು, ಕರ್ನಾಟಕ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಗೆ ಈ ಗ್ಯಾರಂಟಿಗಳೂ ಸೇರಿದೆ. ಇದರಿಂದ ಅಂಗನವಾಡಿ, ಆಶಾ ಕಾರ್ಯಕರ್ತರ ಮತಗಳನ್ನು ಸೆಳೆಯಲು ಮುಂದಾಗಿದ್ದಾರೆ.