ನಟ ನಟಿಯರ ಲಿಪ್ ಲಾಕ್‌ ವಿಡಿಯೋ ವೈರಲ್​..! ‘ಹೊಸ ವರ್ಷ ಕ್ಕೆ ಮದುವೆ ಸುದ್ದಿ ಕೊಟ್ಟ ನರೇಶ್‌

ಬೆಂಗಳೂರು : ‘ಹೊಸ ವರ್ಷ, ಹೊಸ ಆರಂಭ. ನಿಮ್ಮೆಲ್ಲರ ಹಾರೈಕೆ ಬೇಕು’ ಎಂದು ನರೇಶ್​ ಮತ್ತು ಪವಿತ್ರಾ ಲೋಕೇಶ್​ ಪೋಸ್ಟ್​ ಮಾಡಿದ್ದಾರೆ. ಅವರಿಬ್ಬರಿಗೆ ಸ್ನೇಹಿತರು ಮತ್ತು ಹಿತೈಷಿಗಳು ಅಭಿನಂದನೆ ತಿಳಿಸುತ್ತಿದ್ದಾರೆ.

ನಟಿ ಪವಿತ್ರಾ ಲೋಕೇಶ್​ ಮತ್ತು ಟಾಲಿವುಡ್​ ನಟ ನರೇಶ್​ ನಡುವಿನ ಪ್ರೇಮ್​ ಕಹಾನಿ ಭಾರಿ ವಿವಾದ ಸೃಷ್ಟಿಸಿತ್ತು . ನರೇಶ್​ ಅವರ ಪತ್ನಿ ರಮ್ಯಾ ಸಾಕಷ್ಟು ಆರೋಪ ಮಾಡಿದ್ದರು. ಅವರ ಸಂಸಾರದ ಗಲಾಟೆ ಬೀದಿಗೆ ಬಂದಿತ್ತು.

ಅದಕ್ಕೆಲ್ಲ ಈಗ ಫುಲ್​ ಸ್ಟಾಪ್​ ಹಾಕಲು ನರೇಶ್​ ಮತ್ತು ಪವಿತ್ರಾ ಲೋಕೇಶ್​ ನಿರ್ಧರಿಸಿದ್ದಾರೆ. ಇಬ್ಬರೂ ಶೀಘ್ರದಲ್ಲೇ ಮದುವೆ ಆಗಲಿದ್ದಾರೆ. ಈ ಸುದ್ದಿಯನ್ನು ಅಧಿಕೃತವಾಗಿ ತಿಳಿಸುವ ಸಲುವಾಗಿ ನರೇಶ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಒಂದು ಹೊಸ ವಿಡಿಯೋ ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಅವರು ಪವಿತ್ರಾ ಲೋಕೇಶ್​ ತುಟಿಗೆ ಮುತ್ತಿಟ್ಟಿದ್ದಾರೆ. ಅವರಿಬ್ಬರಿಗೆ ಸ್ನೇಹಿತರು ಮತ್ತು ಹಿತೈಷಿಗಳು ಅಭಿನಂದನೆ ತಿಳಿಸುತ್ತಿದ್ದಾರೆ. ‘ಹೊಸ ವರ್ಷ, ಹೊಸ ಆರಂಭ. ನಿಮ್ಮೆಲ್ಲರ ಹಾರೈಕೆ ಬೇಕು’ ಎಂದು ಕ್ಯಾಪ್ಷನ್​ ನೀಡುವ ಮೂಲಕ ನರೇಶ್​ ಅವರು ಈ ವಿಡಿಯೋ ಹಂಚಿಕೊಂಡಿದ್ದಾರೆ. 2023ರ ಹೊಸ ವರ್ಷವನ್ನು ನರೇಶ್​ ಮತ್ತು ಪವಿತ್ರಾ ಲೋಕೇಶ್​ ತುಂಬ ರೊಮ್ಯಾಂಟಿಕ್ ಆಗಿ ಸ್ವಾಗತಿಸುತ್ತಿದ್ದಾರೆ. ಕ್ಯಾಂಡಲ್​ ಹಚ್ಚಿ, ಕೇಕ್​ ಕತ್ತರಿಸಿ, ಪರಸ್ಪರ ಸಿಹಿ ತಿನಿಸಿ ನಂತರ ತುಟಿಗೆ ಚುಂಬಿಸುತ್ತಿರುವ ವಿಡಿಯೋವನ್ನು ಈ ಜೋಡಿ ಹಂಚಿಕೊಂಡಿದೆ. ಇದು ಸೋಶಿಯಲ್​ ಮೀಡಿಯಾದಲ್ಲಿ ಸಖತ್​ ವೈರಲ್​ ಆಗಿದೆ.ಯಾವುದೋ ಸಿನಿಮಾದ ಟೀಸರ್​ ಇರಬಹುದೇನೋ ಎಂಬ ರೀತಿಯಲ್ಲಿ ಈ ವಿಡಿಯೋ ಮೂಡಿಬಂದಿದೆ. ಆದ್ರೆ ಇದು ಸಿನಿಮಾ ಅಲ್ಲ, ರಿಯಲ್​. ‘ನಮ್ಮ ಪ್ರಪಂಚಕ್ಕೆ ಸ್ವಾಗತ. ಹೊಸ ವರ್ಷದ ಶುಭಾಶಯಗಳು. ಶೀಘ್ರದಲ್ಲೇ ಮದುವೆ ಆಗುತ್ತಿದ್ದೇವೆ’ ಎಂಬ ಸಾಲುಗಳು ಈ ವಿಡಿಯೋದಲ್ಲಿ ಇದೆ. ಇದನ್ನು ಕಂಡು ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಹಲವು ತಿಂಗಳುಗಳಿಂದ ನರೇಶ್​ ಮತ್ತು ಪವಿತ್ರಾ ಲೋಕೇಶ್​ ಅವರು ಜೊತೆಯಾಗಿ ವಾಸಿಸುತ್ತಿದ್ದಾರೆ. ಅವರ ಸಂಬಂಧದ ವಿರುದ್ಧ ನರೇಶ್​ ಪತ್ನಿ ರಮ್ಯಾ ಆಕ್ಷೇಪ ವ್ಯಕ್ತಪಡಿಸಿದ್ದರೂ ಕೂಡ ಈ ಜೋಡಿ ತಲೆ ಕೆಡಿಸಿಕೊಂಡಿಲ್ಲ. ಆದರೆ ಮದುವೆ ಬಗ್ಗೆ ಸ್ಪಷ್ಟ ಚಿತ್ರಣ ಸಿಕ್ಕಿರಲಿಲ್ಲ. ಈ ವಿಡಿಯೋ ಹಂಚಿಕೊಳ್ಳುವ ಮೂಲಕ ನರೇಶ್​ ಅವರು ಎಲ್ಲ ಅಂತೆ-ಕಂತೆಗಳಿಗೆ ಸ್ಪಷ್ಟನೆ ನೀಡಿದಂತಾಗಿದೆ. ಸಿನಿಮಾ ಕೆಲಸಗಳಲ್ಲೂ ನರೇಶ್​ ಮತ್ತು ಪವಿತ್ರಾ ಲೋಕೇಶ್​ ಬ್ಯುಸಿ ಆಗಿದ್ದಾರೆ. ಪೋಷಕ ಪಾತ್ರಗಳ ಮೂಲಕ ಪವಿತ್ರಾ ಗಮನ ಸೆಳೆದಿದ್ದಾರೆ. ಬಹುಭಾಷೆಯಲ್ಲಿ ಅವರು ಜನಪ್ರಿಯತೆ ಪಡೆದಿದ್ದಾರೆ. ಈಗ ಅವರ ಬಾಳಿನಲ್ಲಿ ಹೊಸ ಅಧ್ಯಾಯದ ಆರಂಭಕ್ಕೆ ದಿನಗಣನೆ ಶುರುವಾಗಿದೆ.

Check Also

ಮಣಿಪಾಲ: ವ್ಯಕ್ತಿಯೊಬ್ಬರ ಬ್ಯಾಂಕ್‌ ಖಾತೆಯಿಂದ ಅಕ್ರಮವಾಗಿ ಲಕ್ಷಾಂತರ ರೂ. ಹಣ ವರ್ಗಾವಣೆ

ಮಣಿಪಾಲ: ವ್ಯಕ್ತಿಯೊಬ್ಬರ ಖಾತೆಯಿಂದ ಮತ್ತೊಂದು ಖಾತೆಗೆ 2,08,004 ರೂ. ಹಣ ವರ್ಗಾವಣೆಗೊಂಡಿರುವ ಘಟನೆ ನಡೆದಿದೆ. ಕಾರ್ಕಳ ಪಳ್ಳಿ ನಿವಾಸಿ ಡಾ| ಗೋಪಿ ನಾಥ್‌ …

Leave a Reply

Your email address will not be published. Required fields are marked *

You cannot copy content of this page.