ಜನರ ಮನಸ್ಸಿನಿಂದ ನನ್ನನ್ನು ಉಚ್ಚಾಟಿಸಲು ಸಾಧ್ಯವಿಲ್ಲ : ಮಾಜಿ ಶಾಸಕ ಕೆ.ರಘುಪತಿ ಭಟ್

ಉಡುಪಿ : ಜನರ ಮನಸ್ಸಿನಿಂದ ನನ್ನನ್ನು ಉಚ್ಚಾಟಿಸಲು ಸಾಧ್ಯವಿಲ್ಲ ಎಂದು ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಕೆ. ರಘುಪತಿ ಭಟ್ ಬಿಜೆಪಿ ಗೆ ಟಾಂಗ್ ನೀಡಿದ್ದಾರೆ.
ಉಡುಪಿ ಹಾಗೂ ಕುಂದಾಪುರ ಭಾಗಗಳಲ್ಲಿ ಬಾರ್ ಕೌನ್ಸಿಲ್, ಶಿಕ್ಷಣ ಸಂಸ್ಥೆಗಳು ಹಾಗೂ ವಿವಿಧ ಕಂಪನಿಗಳಲ್ಲಿ ಮತಯಾಚನೆ ಮಾಡುವ ಸಂದರ್ಭ ಮಾತನಾಡಿದ ಅವರು ಸಾಮಾಜಿಕ ಹಾಗೂ ರಾಜಕೀಯ ಜೀವನದಲ್ಲಿ ನಾನು ಮಾಡಿದ ಸೇವಾ ಕಾರ್ಯಗಳಿಂದ ಜನ ನನಗೆ ಅವರ ಮನಸ್ಸಿನಲ್ಲಿ ಸ್ಥಾನ ನೀಡಿದ್ದಾರೆ. ಇಂದು ನಾನು ಹೋದ ಎಲ್ಲಾ ಭಾಗಗಳಲ್ಲಿಯೂ ಜನ ನನ್ನನ್ನು ಪ್ರೀತಿಯಿಂದ ಬರಮಾಡಿಕೊಳ್ಳುತ್ತಿದ್ದಾರೆ. ಜನರ ಮನಸ್ಸಿನಿಂದ ನನ್ನನ್ನು ಉಚ್ಚಾಟಿಸಲು ಸಾಧ್ಯವಿಲ್ಲ ಎಂದರು.
ಶಾಸಕನಾಗಿದ್ದಾಗ ಎಲ್ಲಾ ವರ್ಗದ ಜನತೆಗೆ ಪ್ರಾಮಾಣಿಕವಾಗಿ ಸ್ಪಂದಿಸಿದ್ದೇನೆ. ಎಲ್ಲಾ ಸಮಸ್ಯೆಗಳನ್ನು ಸಮರ್ಥವಾಗಿ ನಿಭಾಯಿಸಿದ್ದೇನೆ. ಹಿಜಾಬ್ ವಿವಾದ ಬಂದಾಗ ಶಾಲೆಯ ಒಳಗೆ ಸಮಾನತೆ ಕಾಯ್ದುಕೊಳ್ಳುವ ದೃಷ್ಟಿಯಿಂದ ಸಮವಸ್ತ್ರಕ್ಕೆ ಆದ್ಯತೆ ನೀಡಲು ಒತ್ತಾಯಿಸಿದ್ದೆ. ಆ ವಿಚಾರದಲ್ಲಿ ನನ್ನನ್ನು ವ್ಯಂಗ್ಯ ಮಾಡಿದವರಿಗೆ ಜನ ಉತ್ತರ ನೀಡುತ್ತಾರೆ.  ಕೆಲಸ ಮಾಡುವ ಆಸಕ್ತಿ ಇರುವ ನನ್ನನ್ನು ಹರಸಿ ಎಂದು ಈ ಸಂದರ್ಭದಲ್ಲಿ ಮನವಿ ಮಾಡಿದರು.

Check Also

ನಾಳೆ ದ‌.ಕ ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ

ದ‌.ಕ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿದಿದ್ದು, ಭಾರತೀಯ ಹವಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸಗಿಕ ವಿಕೋಪ ಉಸ್ತುವಾರಿ ಕೇಂದ್ರದ …

Leave a Reply

Your email address will not be published. Required fields are marked *

You cannot copy content of this page.