ಕಾಪು : ಜ.30ರಿಂದ ಮೀನುಗಾರರೊಬ್ಬರು ನಾಪತ್ತೆಯಾಗಿರುವ ಘಟನೆ ಕಟಪಾಡಿ ಮಟ್ಟು ಗ್ರಾಮದ ದುಗ್ಗುಪಾಡಿ ಎಂಬಲ್ಲಿ ನಡೆದಿದೆ. ದುಗ್ಗುಪಾಡಿ ನಿವಾಸಿ ಶ್ರೀನಿವಾಸ ಸಾಲ್ಯಾನ್(45) ನಾಪತ್ತೆಯಾದ ಮೀನುಗಾರ ಎಂದು ತಿಳಿದು ಬಂದಿದೆ.ದೋಣಿಯಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ ಇವರು ಮನೆಯಲ್ಲಿ ಒಬ್ಬರೇ ವಾಸವಾಗಿದ್ದರು. ಮನೆಯ ಹತ್ತಿರದವರಲ್ಲಿ ಕಟಪಾಡಿಗೆ ಹೋಗಿ ಬರುವುದಾಗಿ ಹೇಳಿ ಹೋದವರು ವಾಪಾಸು ಬಾರದೆ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.ಈ ಕುರಿತು ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Check Also
ಕೇರಳದಲ್ಲಿ ‘ವೆಸ್ಟ್ ನೈಲ್’ ಜ್ವರದ ಆತಂಕ- ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ
ಮಂಗಳೂರು: ನೆರೆಯ ಕೇರಳದ ಮಲಪ್ಪುರಂ, ಕೋಯಿಕ್ಕೋಡ್, ತೃಶೂರ್ ಪ್ರದೇಶದಲ್ಲಿ ‘ವೆಸ್ಟ್ ನೈಲ್’ ಜ್ವರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ …