June 3, 2025
WhatsApp Image 2025-02-08 at 4.28.13 PM

ಕಾರ್ಕಳ: ಕುಂಭಮೇಳಕ್ಕೆ ಪ್ರಯಾಗ್‌ರಾಜ್ ಗೆ ರೈಲಿನಲ್ಲಿ ಹೊರಟಿದ್ದ ಕಾರ್ಕಳ ಕಾಬೆಟ್ಟು ವಿ.ಸಿ.ರೋಡ್‌ನ ಭಾರತ್ ಬೀಡಿ ಕಾಲನಿ ನಿವಾಸಿ ಸುಧಾಕರ್(69) ಎಂಬವರು ನಾಪತ್ತೆಯಾಗಿದ್ದಾರೆ.

ಇವರು ಜನವರಿ 25ರಂದು ಉತ್ತರಪ್ರದೇಶದಲ್ಲಿ ನಡೆಯುತ್ತಿರುವ ಕುಂಭಮೇಳದ ಪ್ರಯುಕ್ತ ಪ್ರಯಾಗ್ ರಾಜ್ ಮತ್ತು ಕಾಶಿಗೆ ಹೋಗುವುದಾಗಿ ತಿಳಿಸಿ ಹೊರಟಿದ್ದರು. ಹೋಗುವಾಗ ರೈಲು ಅದಲು ಬದಲಾಗಿ ಮಾರ್ಗ ತಪ್ಪಿರುವುದಾಗಿ ಮಗ ಶಿವಪ್ರಸಾದ್‌ಗೆ ತಿಳಿಸಿದ್ದರು. ಜನವರಿ 27ರಂದು ಶಿವಪ್ರಸಾದ್‌ ಕರೆ ಮಾಡಿದಾಗ ಸುಧಾಕರ್ ಅವರ ಮೊಬೈಲ್ ಸ್ವಿಚ್ ಆಫ್ ಆಗಿರುವುದು ಕಂಡುಬಂದಿದೆ. ಇವರು ಈವರೆಗೆ ವಾಪಾಸು ಮನೆಗೆ ಬಾರದೇ ನಾಪತ್ತೆ ಯಾಗಿದ್ದಾರೆ.ಈ ಕುರಿತು ಕಾರ್ಕಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Leave a Reply

Your email address will not be published. Required fields are marked *

<p>You cannot copy content of this page.</p>