![](https://thrishulnews.com/wp-content/uploads/2024/03/WhatsApp-Image-2024-03-12-at-11.54.26-AM.jpeg)
ಉಡುಪಿ: ಅಯೋಧ್ಯೆಯಲ್ಲಿ ಬಾಲರಾಮನ ಪ್ರತಿಷ್ಠೆಯಾಗಿ ಕೆಲವೇ ದಿನಗಳಲ್ಲಿ ಉಡುಪಿಯ ಮಲ್ಪೆ ವಡಭಾಂಡೇಶ್ವರದ ಇತಿಹಾಸ ಪ್ರಸಿದ್ಧ ಬಲರಾಮನ ಸನ್ನಿಧಿಯೂ ನವೀಕರಣಗೊಳ್ಳುತ್ತಿರುವುದು ಒಂದು ಯೋಗಾನುಯೋಗವೇ ಸರಿ.
ಈ ಹಿನ್ನೆಲೆಯಲ್ಲಿ ಉಭಯ ಸನ್ನಿಧಿಗಳ ಬಾಂಧವ್ಯದ ದ್ಯೋತಕವಾಗಿ ಶ್ರೀ ಪೇಜಾವರ ಶ್ರೀಗಳು ಶುಕ್ರವಾರದಂದು ಅಯೋದ್ಯೆಯ ಬಲರಾಮನ ಸನ್ನಿಧಿಯಲ್ಲಿ ಸಂಕರ್ಷಣ ಶಾಲಗ್ರಾಮವೊಂದನ್ನಿಟ್ಟು ಪವಿತ್ರ ಕಲಶೋದಕದಿಂದ ಅಭಷೇಕ ಸಹಿತ ಪೂಜೆ ಮಾಡಿ ವಡಭಾಂಡೇಶ್ವರದ ಬಲರಾಮನ ದಿವ್ಯ ಸನ್ನಿಧಿಗೆ ಕಳುಹಿಸಿಕೊಟ್ಟರು.